ಸೇನಾ ಮುಖ್ಯಸ್ಥ ಜನರಲ್ ಎಂಎಂ ನಾರವಾನೆ 
ದೇಶ

ಪಾಕಿಸ್ತಾನ ಬಿಎಟಿ ಕಾರ್ಯಾಚರಣೆ ಕೈಗೊಳ್ಳುವ ಮುನ್ನವೇ ಅದನ್ನು ವಿಫಲಗೊಳಿಸುತ್ತಿದ್ದೇವೆ: ಸೇನಾ ಮುಖ್ಯಸ್ಥ

ಪಾಕಿಸ್ತಾನದ ಬಿಎಟಿ- ಗಡಿ ಕಾರ್ಯಾಚರಣೆ ತಂಡದಿಂದ ಎದುರಾಗುವ ಯಾವುದೇ ಅಡ್ಡಿ ಆತಂಕಗಳಿಗೆ ಅವಕಾಶ ನೀಡುವುದಿಲ್ಲ,  ಮುಂಚಿತವಾಗಿಯೇ  ಅವರ ಎಲ್ಲಾ ಪ್ರಯತ್ನಗಳನ್ನು  ವಿಫಲಗೊಳಿಸುತ್ತಿದ್ದೇವೆ ಎಂದು ಸೇನಾ ಮುಖ್ಯಸ್ಥ ಜನರಲ್ ಎಂಎಂ ನಾರವಾನೆ ತಿಳಿಸಿದ್ದಾರೆ.

ನವದೆಹಲಿ: ಪಾಕಿಸ್ತಾನದ ಬಿಎಟಿ- ಗಡಿ ಕಾರ್ಯಾಚರಣೆ ತಂಡದಿಂದ ಎದುರಾಗುವ ಯಾವುದೇ ಅಡ್ಡಿ ಆತಂಕಗಳಿಗೆ ಅವಕಾಶ ನೀಡುವುದಿಲ್ಲ,  ಮುಂಚಿತವಾಗಿಯೇ  ಅವರ ಎಲ್ಲಾ ಪ್ರಯತ್ನಗಳನ್ನು ವಿಫಲಗೊಳಿಸುತ್ತಿದ್ದೇವೆ ಎಂದು ಸೇನಾ ಮುಖ್ಯಸ್ಥ ಜನರಲ್ ಎಂಎಂ ನಾರವಾನೆ ತಿಳಿಸಿದ್ದಾರೆ.

ನಾವು ಒಳ ಮಾಹಿತಿಗಳನ್ನು ಪಡೆಯುತ್ತಿದ್ದೇವೆ. ಪಾಕಿಸ್ತಾನ ಸೇನೆಯ ಗಡಿ ಕಾರ್ಯಾಚರಣೆ ತಂಡ ಕಾರ್ಯಾಚರಣೆ ಕೈಗೊಳ್ಳುವ ಮುನ್ನವೇ ನಾವು ಅವರ ಪ್ರಯತ್ನಗಳನ್ನು ವಿಫಲಗೊಳಿಸುತ್ತಿದ್ದೇವೆ ಎಂದು ಸುದ್ದಿಸಂಸ್ಥೆಯೊಂದಕ್ಕೆ ಅವರು ತಿಳಿಸಿದ್ದಾರೆ.

ಲಷ್ಕರ್ ಇ- ತೊಯ್ಬಾ, ಜೈಷ್ -ಇ- ಮೊಹಮ್ಮದ್ ನಂತಹ ಉಗ್ರ ಸಂಘಟನೆಗಳ ಜೊತೆಗೆ ಪಾಕ್ ಸೇನಾ ಸಿಬ್ಬಂದಿ, ಪಾಕಿಸ್ತಾನದ ಗಡಿ ಕಾರ್ಯಾಚಾರಣೆ ತಂಡ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಭಾರತದ ವಿರುದ್ಧ ಆಗಾಗ್ಗೆ ಕಾರ್ಯಾಚರಣೆ ನಡೆಸುವುದರಲ್ಲಿ ನಿರತವಾಗಿವೆ.

ಪಾಕಿಸ್ತಾನ ಆಕ್ರಮಿತ ಕಾಶ್ಮೀರದೊಳಗೆ  15ರಿಂದ 20 ಉಗ್ರರ ಶಿಬಿರಗಳಿವೆ.  ಅಲ್ಲಿ ಯಾವುದೇ ಸಮಯದಲ್ಲೂ ಸುಮಾರು 250ರಿಂದ 350 ಉಗ್ರರಿರುತ್ತಾರೆ.  ಈ ಸಂಖ್ಯೆಗಳು ಪರಿಸ್ಥಿತಿಗನುಗುಣವಾಗಿ ಬದಲಾಗಬಹುದು ಎಂದು ನಾರವಾನೆ ಹೇಳಿದರು. 

ದೆಹಲಿ ಕಂಟೋನ್ಮೆಂಟ್‌ನಲ್ಲಿ ಹೊಸದಾಗಿ ಸ್ಥಾಪಿಸಲು ಪ್ರಸ್ತಾಪಿಸಲಾಗಿರುವ 'ಥಲ್ ಸೇನಾ ಭವನ' ಕುರಿತು ಮಾತನಾಡಿದ ಸೇನಾ ಮುಖ್ಯಸ್ಥರು  ಇದರಿಂದ ದಕ್ಷತೆ ಸುಧಾರಿಸುವುದಾಗಿ ತಿಳಿಸಿದರು. 

"ಉದ್ದೇಶಿತ ಥಲ್ ಸೇನಾ ಭವನವು ಎಲ್ಲಾ ಸೇನಾ ಪ್ರಧಾನ ಕಚೇರಿಗಳನ್ನು ಒಂದೇ ಸೂರಿನಡಿ ತರುತ್ತದೆ, ಇದರಿಂದಾಗಿ ಇಂಗಾಲದ ಪ್ರಮಾಣ ಮತ್ತು ಕಾರ್ಯತಂತ್ರವನ್ನು ಕಡಿಮೆ ಮಾಡುತ್ತದೆ ಮತ್ತು ಕೆಲಸದ ದಕ್ಷತೆಯನ್ನು ಸುಧಾರಿಸುತ್ತದೆ ಎಂದು ನಾರವಾನೆ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT