ಸಂಗ್ರಹ ಚಿತ್ರ 
ದೇಶ

ಹಿಂದೂಗಳ ತಾಳ್ಮೆಯನ್ನೇ ದೌರ್ಬಲ್ಯ ಎಂದು ತಪ್ಪು ತಿಳಿಯಬೇಡಿ: ವಾರಿಸ್ ಪಠಾಣ್ ಗೆ ದೇವೇಂದ್ರ ಫಡ್ನವಿಸ್ ತಿರುಗೇಟು

ಹಿಂದೂಗಳ ತಾಳ್ಮೆಯನ್ನೇ ದೌರ್ಬಲ್ಯ ಎಂದು ತಪ್ಪು ತಿಳಿಯಬೇಡಿ ಎಂದು ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.

ನಾಗ್ಪುರ: ಹಿಂದೂಗಳ ತಾಳ್ಮೆಯನ್ನೇ ದೌರ್ಬಲ್ಯ ಎಂದು ತಪ್ಪು ತಿಳಿಯಬೇಡಿ ಎಂದು ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.

ದೇಶದಲ್ಲಿರುವ ನೂರು ಕೋಟಿ ಹಿಂದೂಗಳನ್ನು ಮಣಿಸಲು 15 ಕೋಟಿ ಮುಸ್ಲಿಮರು ಸಾಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಎಐಎಂಐಎಂ ಮುಖಂಡ ವಾರಿಸ್‌ ಪಠಾಣ್ ಹೇಳಿಕೆ ವಿರೋಧ ವ್ಯಕ್ತಪಡಿಸಿರುವ ದೇವೇಂದ್ರ ಫಡ್ನವಿಸ್ ಅವರು, 'ನಮ್ಮ ತಾಳ್ಮೆಯನ್ನೇ ನೀವು ದೌರ್ಬಲ್ಯ ಎಂದು ತಪ್ಪು ತಿಳಿಯಬೇಡಿ’ ಎಂದು ಖಡಕ್ ತಿರುಗೇಟು ನೀಡಿದ್ದಾರೆ. 

ಹಿಂದೂಗಳ ಕುರಿತು ಪ್ರಚೋದನಾಕಾರಿ ಹೇಳಿಕೆ ನೀಡಿರುವ ಪಠಾಣ್ ಅವರು ಕೂಡಲೇ ಕ್ಷಮೆ ಕೇಳಬೇಕು ಮತ್ತು ಉದ್ದವ್‌ ಠಾಕ್ರೆ ಸರ್ಕಾರ ಅವರ ವಿರುದ್ಧ ಕ್ರಮ ಜರುಗಿಸಬೇಕು. ಪಠಾಣ್‌ ಅವರು ಹೇಳಿಕೆಯನ್ನು ಖಂಡಿಸುತ್ತೇನೆ ಮತ್ತು ಅವರು ಎಲ್ಲರ ಕ್ಷಮೆಯಾಚಿಸಬೇಕು. ಒಂದು ವೇಳೆ ಅವರು ಕ್ಷಮೆ ಕೇಳದಿದ್ದರೆ, ಮಹಾರಾಷ್ಟ್ರ ಸರ್ಕಾರ ಅವರ ವಿರುದ್ಧ ಕ್ರಮಕೈಗೊಳ್ಳಬೇಕು. 100 ಕೋಟಿ ಹಿಂದೂಗಳು ಇರುವುದರಿಂದಲೇ, ಈ ದೇಶದಲ್ಲಿ ಅಲ್ಪಸಂಖ್ಯಾತರು ಸುರಕ್ಷಿತವಾಗಿದ್ದಾರೆ ಮತ್ತು ಸ್ವಾತಂತ್ರ್ಯವನ್ನು ಖುಷಿಯಿಂದ ಅನುಭವಿಸುತ್ತಿದ್ದಾರೆ ಎನ್ನುವುದನ್ನು ಪಠಾಣ್‌ ಅರ್ಥ ಮಾಡಿಕೊಳ್ಳಬೇಕು ಎಂದು ಫಡ್ನವಿಸ್ ಹೇಳಿದರು.

ಮುಸ್ಲಿಮರು ಬಹುಸಂಖ್ಯಾತರಿರುವ ದೇಶದಲ್ಲಿ ಈ ರೀತಿಯ ಹೇಳಿಕೆಯನ್ನು ನೀಡಲು ಯಾರಿಗೂ ಧೈರ್ಯವಿಲ್ಲ. ಹಿಂದೂಗಳಲ್ಲಿ ತಾಳ್ಮೆ ಇದೆ. ಆದರೆ, ಅದನ್ನೇ ದೌರ್ಬಲ್ಯ ಎಂದು ತಪ್ಪು ತಿಳಿಯಬಾರದು. ಅವರನ್ನು ಪ್ರಚೋದಿಸುವ ಕಾರ್ಯ ಯಾರೂ ಮಾಡಬಾರದು ಎಂದು ಫಡ್ನವಿಸ್ ಎಚ್ಚರಿಕೆ ನೀಡಿದರು. 

ಇದೇ ಫೆಬ್ರುವರಿ 16ರಂದು ಕಲಬುರ್ಗಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಯಲ್ಲಿ ಪಠಾಣ್ ಈ ಹೇಳಿಕೆಯನ್ನು ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT