ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಶಹೀನ್ ಬಾಗ್ ನಲ್ಲಿ ಪ್ರತಿಭಟನಾನಿರತರು 
ದೇಶ

ಶಾಹೀನ್‌ ಬಾಗ್ ಪ್ರತಿಭಟನೆ: ಕಲಿಂದಿ ಕುಂಜ್‌ ರಸ್ತೆ ಸಂಚಾರಕ್ಕೆ ತೆರವು, ಅರ್ಧಗಂಟೆಯ ಬಳಿಕ ಬಂದ್

ದೆಹಲಿಯ ಶಾಹೀನ್ ಬಾಗ್ ಬಳಿಯ ಪ್ರಮುಖ ರಸ್ತೆಯ ಬ್ಯಾರಿಕೇಡ್‌ಗಳನ್ನು ಉತ್ತರ ಪ್ರದೇಶ ಪೊಲೀಸರು ಶುಕ್ರವಾರ ತೆರವುಗೊಳಿಸಿದ್ದಾರೆ. ಆದರೆ ಸುಮಾರು ಅರ್ಧ ಘಂಟೆಯ ನಂತರ ಮತ್ತೆ ರಸ್ತೆ ಮುಚ್ಚಲಾಗಿದೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ದೆಹಲಿಯ ಶಾಹೀನ್ ಬಾಗ್ ಬಳಿಯ ಪ್ರಮುಖ ರಸ್ತೆಯ ಬ್ಯಾರಿಕೇಡ್‌ಗಳನ್ನು ಉತ್ತರ ಪ್ರದೇಶ ಪೊಲೀಸರು ಶುಕ್ರವಾರ ತೆರವುಗೊಳಿಸಿದ್ದಾರೆ. ಆದರೆ ಸುಮಾರು ಅರ್ಧ ಘಂಟೆಯ ನಂತರ ಮತ್ತೆ ರಸ್ತೆ ಮುಚ್ಚಲಾಗಿದೆ ಎಂದು ಮೂಲಗಳು ತಿಳಿಸಿವೆ.

ದೆಹಲಿಯನ್ನು ನೋಯ್ಡಾ ಮತ್ತು ಫರಿದಾಬಾದ್‌ನೊಂದಿಗೆ ಸಂಪರ್ಕಿಸುವ ಕಲಿಂದಿ ಕುಂಜ್-ಶಾಹೀನ್ ಬಾಗ್  ಮಾರ್ಗವನ್ನು ತಾತ್ಕಾಲಿಕ ವ್ಯವಸ್ಥೆಯಾಗಿ ಸಂಚಾರವನ್ನು ಸರಾಗಗೊಳಿಸುವ ಉದ್ದೇಶದಿಂದ ತೆರೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕಳೆದ ವರ್ಷ ಡಿಸೆಂಬರ್ 15 ರಿಂದ ಶಾಹೀನ್ ಬಾಗ್‌ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧದ ಪ್ರತಿಭಟನೆ ನಡೆಯುತ್ತಿದ್ದು, ಇದರಿಂದ ದೆಹಲಿಯನ್ನು ಉತ್ತರ ಪ್ರದೇಶದೊಂದಿಗೆ ಸಂಪರ್ಕಿಸುವ ಕಲಿಂದಿ ಕುಂಜ್ ರಸ್ತೆಯನ್ನು ಮುಚ್ಚಲಾಗಿದೆ.

ಪ್ರತಿಭಟನೆ 100 ದಿನಗಳ ಸಮೀಪಿಸುತ್ತಿದ್ದಂತೆ, ಸಿಎಎ ಪ್ರತಿಭಟನಕಾರರು ರಸ್ತೆ ದಿಗ್ಬಂಧನಕ್ಕೆ ತಾವು ಜವಾಬ್ದಾರರಲ್ಲ ಎಂದು ವಾದಿಸಿದರು.

ನಾವು ಶಾಹೀನ್ ಭಾಗ್‌ನಲ್ಲಿ ಕೇವಲ 150 ಮೀಟರ್ ಉದ್ದದಲ್ಲಿ ಮಾತ್ರ ಪ್ರತಿಭಟನೆ ನಡೆಸುತ್ತಿದ್ದೆವೆ, ರಸ್ತೆಯನ್ನು ಬಂದ್ ಮಾಡಿಲ್ಲ. ಆದರೆ ದೆಹಲಿ ಪೊಲೀಸರು ಮೂರು ಕಡೆಯಿಂದ ರಸ್ತೆ ಬಂದ್ ಮಾಡಿದ್ದಾರೆ ಎಂದು ಪ್ರತಿಭಟನಕಾರರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ