ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಶಹೀನ್ ಬಾಗ್ ನಲ್ಲಿ ಪ್ರತಿಭಟನಾನಿರತರು 
ದೇಶ

ಶಾಹೀನ್‌ ಬಾಗ್ ಪ್ರತಿಭಟನೆ: ಕಲಿಂದಿ ಕುಂಜ್‌ ರಸ್ತೆ ಸಂಚಾರಕ್ಕೆ ತೆರವು, ಅರ್ಧಗಂಟೆಯ ಬಳಿಕ ಬಂದ್

ದೆಹಲಿಯ ಶಾಹೀನ್ ಬಾಗ್ ಬಳಿಯ ಪ್ರಮುಖ ರಸ್ತೆಯ ಬ್ಯಾರಿಕೇಡ್‌ಗಳನ್ನು ಉತ್ತರ ಪ್ರದೇಶ ಪೊಲೀಸರು ಶುಕ್ರವಾರ ತೆರವುಗೊಳಿಸಿದ್ದಾರೆ. ಆದರೆ ಸುಮಾರು ಅರ್ಧ ಘಂಟೆಯ ನಂತರ ಮತ್ತೆ ರಸ್ತೆ ಮುಚ್ಚಲಾಗಿದೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ದೆಹಲಿಯ ಶಾಹೀನ್ ಬಾಗ್ ಬಳಿಯ ಪ್ರಮುಖ ರಸ್ತೆಯ ಬ್ಯಾರಿಕೇಡ್‌ಗಳನ್ನು ಉತ್ತರ ಪ್ರದೇಶ ಪೊಲೀಸರು ಶುಕ್ರವಾರ ತೆರವುಗೊಳಿಸಿದ್ದಾರೆ. ಆದರೆ ಸುಮಾರು ಅರ್ಧ ಘಂಟೆಯ ನಂತರ ಮತ್ತೆ ರಸ್ತೆ ಮುಚ್ಚಲಾಗಿದೆ ಎಂದು ಮೂಲಗಳು ತಿಳಿಸಿವೆ.

ದೆಹಲಿಯನ್ನು ನೋಯ್ಡಾ ಮತ್ತು ಫರಿದಾಬಾದ್‌ನೊಂದಿಗೆ ಸಂಪರ್ಕಿಸುವ ಕಲಿಂದಿ ಕುಂಜ್-ಶಾಹೀನ್ ಬಾಗ್  ಮಾರ್ಗವನ್ನು ತಾತ್ಕಾಲಿಕ ವ್ಯವಸ್ಥೆಯಾಗಿ ಸಂಚಾರವನ್ನು ಸರಾಗಗೊಳಿಸುವ ಉದ್ದೇಶದಿಂದ ತೆರೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕಳೆದ ವರ್ಷ ಡಿಸೆಂಬರ್ 15 ರಿಂದ ಶಾಹೀನ್ ಬಾಗ್‌ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧದ ಪ್ರತಿಭಟನೆ ನಡೆಯುತ್ತಿದ್ದು, ಇದರಿಂದ ದೆಹಲಿಯನ್ನು ಉತ್ತರ ಪ್ರದೇಶದೊಂದಿಗೆ ಸಂಪರ್ಕಿಸುವ ಕಲಿಂದಿ ಕುಂಜ್ ರಸ್ತೆಯನ್ನು ಮುಚ್ಚಲಾಗಿದೆ.

ಪ್ರತಿಭಟನೆ 100 ದಿನಗಳ ಸಮೀಪಿಸುತ್ತಿದ್ದಂತೆ, ಸಿಎಎ ಪ್ರತಿಭಟನಕಾರರು ರಸ್ತೆ ದಿಗ್ಬಂಧನಕ್ಕೆ ತಾವು ಜವಾಬ್ದಾರರಲ್ಲ ಎಂದು ವಾದಿಸಿದರು.

ನಾವು ಶಾಹೀನ್ ಭಾಗ್‌ನಲ್ಲಿ ಕೇವಲ 150 ಮೀಟರ್ ಉದ್ದದಲ್ಲಿ ಮಾತ್ರ ಪ್ರತಿಭಟನೆ ನಡೆಸುತ್ತಿದ್ದೆವೆ, ರಸ್ತೆಯನ್ನು ಬಂದ್ ಮಾಡಿಲ್ಲ. ಆದರೆ ದೆಹಲಿ ಪೊಲೀಸರು ಮೂರು ಕಡೆಯಿಂದ ರಸ್ತೆ ಬಂದ್ ಮಾಡಿದ್ದಾರೆ ಎಂದು ಪ್ರತಿಭಟನಕಾರರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT