ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಶಹೀನ್ ಬಾಗ್ ನಲ್ಲಿ ಪ್ರತಿಭಟನಾನಿರತರು 
ದೇಶ

ಶಾಹೀನ್‌ ಬಾಗ್ ಪ್ರತಿಭಟನೆ: ಕಲಿಂದಿ ಕುಂಜ್‌ ರಸ್ತೆ ಸಂಚಾರಕ್ಕೆ ತೆರವು, ಅರ್ಧಗಂಟೆಯ ಬಳಿಕ ಬಂದ್

ದೆಹಲಿಯ ಶಾಹೀನ್ ಬಾಗ್ ಬಳಿಯ ಪ್ರಮುಖ ರಸ್ತೆಯ ಬ್ಯಾರಿಕೇಡ್‌ಗಳನ್ನು ಉತ್ತರ ಪ್ರದೇಶ ಪೊಲೀಸರು ಶುಕ್ರವಾರ ತೆರವುಗೊಳಿಸಿದ್ದಾರೆ. ಆದರೆ ಸುಮಾರು ಅರ್ಧ ಘಂಟೆಯ ನಂತರ ಮತ್ತೆ ರಸ್ತೆ ಮುಚ್ಚಲಾಗಿದೆ ಎಂದು ಮೂಲಗಳು ತಿಳಿಸಿವೆ.

ನವದೆಹಲಿ: ದೆಹಲಿಯ ಶಾಹೀನ್ ಬಾಗ್ ಬಳಿಯ ಪ್ರಮುಖ ರಸ್ತೆಯ ಬ್ಯಾರಿಕೇಡ್‌ಗಳನ್ನು ಉತ್ತರ ಪ್ರದೇಶ ಪೊಲೀಸರು ಶುಕ್ರವಾರ ತೆರವುಗೊಳಿಸಿದ್ದಾರೆ. ಆದರೆ ಸುಮಾರು ಅರ್ಧ ಘಂಟೆಯ ನಂತರ ಮತ್ತೆ ರಸ್ತೆ ಮುಚ್ಚಲಾಗಿದೆ ಎಂದು ಮೂಲಗಳು ತಿಳಿಸಿವೆ.

ದೆಹಲಿಯನ್ನು ನೋಯ್ಡಾ ಮತ್ತು ಫರಿದಾಬಾದ್‌ನೊಂದಿಗೆ ಸಂಪರ್ಕಿಸುವ ಕಲಿಂದಿ ಕುಂಜ್-ಶಾಹೀನ್ ಬಾಗ್  ಮಾರ್ಗವನ್ನು ತಾತ್ಕಾಲಿಕ ವ್ಯವಸ್ಥೆಯಾಗಿ ಸಂಚಾರವನ್ನು ಸರಾಗಗೊಳಿಸುವ ಉದ್ದೇಶದಿಂದ ತೆರೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕಳೆದ ವರ್ಷ ಡಿಸೆಂಬರ್ 15 ರಿಂದ ಶಾಹೀನ್ ಬಾಗ್‌ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ವಿರುದ್ಧದ ಪ್ರತಿಭಟನೆ ನಡೆಯುತ್ತಿದ್ದು, ಇದರಿಂದ ದೆಹಲಿಯನ್ನು ಉತ್ತರ ಪ್ರದೇಶದೊಂದಿಗೆ ಸಂಪರ್ಕಿಸುವ ಕಲಿಂದಿ ಕುಂಜ್ ರಸ್ತೆಯನ್ನು ಮುಚ್ಚಲಾಗಿದೆ.

ಪ್ರತಿಭಟನೆ 100 ದಿನಗಳ ಸಮೀಪಿಸುತ್ತಿದ್ದಂತೆ, ಸಿಎಎ ಪ್ರತಿಭಟನಕಾರರು ರಸ್ತೆ ದಿಗ್ಬಂಧನಕ್ಕೆ ತಾವು ಜವಾಬ್ದಾರರಲ್ಲ ಎಂದು ವಾದಿಸಿದರು.

ನಾವು ಶಾಹೀನ್ ಭಾಗ್‌ನಲ್ಲಿ ಕೇವಲ 150 ಮೀಟರ್ ಉದ್ದದಲ್ಲಿ ಮಾತ್ರ ಪ್ರತಿಭಟನೆ ನಡೆಸುತ್ತಿದ್ದೆವೆ, ರಸ್ತೆಯನ್ನು ಬಂದ್ ಮಾಡಿಲ್ಲ. ಆದರೆ ದೆಹಲಿ ಪೊಲೀಸರು ಮೂರು ಕಡೆಯಿಂದ ರಸ್ತೆ ಬಂದ್ ಮಾಡಿದ್ದಾರೆ ಎಂದು ಪ್ರತಿಭಟನಕಾರರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಕ್ರಮ ಆಸ್ತಿ ಗಳಿಕೆ ಕೇಸು: ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಬೆನ್ನಲ್ಲೇ IPS ಅಧಿಕಾರಿ ವರ್ಗ

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಹಾರ್ಮುಜ್ ಜಲಸಂಧಿ ಮುಕ್ತವಾಗಿರಬೇಕು, ಅಣು ಒಪ್ಪಂದಕ್ಕೆ ಯುರೇನಿಯಂ ಹಸ್ತಾಂತರ ಕಡ್ಡಾಯ: ಅಮೆರಿಕ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ ವ್ಯಾಪಾರದ ಗುರಿ; Video

'ಮಟನ್ ಹಾಕ್ತೀವಿ ಅಂತ ಹೇಳಿ ಚಿಕನ್ ಕೊಟ್ರು': ರಣಾಂಗಣವಾಯ್ತು 'ನಿಕಾಹ್ ಸಮಾರಂಭ', 12 ಮಂದಿಗೆ ಗಾಯ, Video