ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ 
ದೇಶ

ಮೆಲಾನಿಯಾ ಟ್ರಂಪ್ ಸರ್ಕಾರಿ ಶಾಲಾ ಕಾರ್ಯಕ್ರಮಕ್ಕೆ ದೆಹಲಿ ಸಿಎಂ, ಡಿಸಿಎಂಗಿಲ್ಲ ಆಹ್ವಾನ

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಭೇಟಿಗೆ ದಿನಗಣನೆ ಆರಂಭವಾಗಿದ್ದು, ವಿಶ್ವದ ಪ್ರಭಾವಿ ನಾಯಕನಿಗೆ ಸ್ವಾಗತ ಕೊರಲು ಭಾರತ ಸಜ್ಜಾಗಿದೆ. ಈ ನಡುವೆ ದೆಹಲಿ ಸರ್ಕಾರಿ ಶಾಲೆಯಲ್ಲಿ ಆಯೋಜನೆಗೊಳಿಸಿರುವ ಮೆಲಾನಿಯಾ ಟ್ರಂಪ್...

ನವದೆಹಲಿ: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಭೇಟಿಗೆ ದಿನಗಣನೆ ಆರಂಭವಾಗಿದ್ದು, ವಿಶ್ವದ ಪ್ರಭಾವಿ ನಾಯಕನಿಗೆ ಸ್ವಾಗತ ಕೊರಲು ಭಾರತ ಸಜ್ಜಾಗಿದೆ. ಈ ನಡುವೆ ದೆಹಲಿ ಸರ್ಕಾರಿ ಶಾಲೆಯಲ್ಲಿ ಆಯೋಜನೆಗೊಳಿಸಿರುವ ಮೆಲಾನಿಯಾ ಟ್ರಂಪ್ ಭೇಟಿ ಕಾರ್ಯಕ್ರಮಕ್ಕೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಆಹ್ವಾನ ನೀಡಿಲ್ಲ ಎಂದು ಹೇಳಲಾಗುತ್ತಿದೆ. 

ಸಾಮಾನ್ಯವಾಗಿ ದೆಹಲಿ ಸರ್ಕಾರದ ಅಡಿಯಲ್ಲಿ ಆಯೋಜನೆಗೊಳ್ಳುವ ಕಾರ್ಯಕ್ರಮಕ್ಕೆ ಆ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳಿಗೆ ಆಹ್ವಾನ ಇದ್ದೇ ಇರುತ್ತದೆ, ಆದರೆ, ಮೆಲಾನಿಯಾ ಕಾರ್ಯಕ್ರಮಕ್ಕೆ ದೆಹಲಿ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡದೇ ಇರುವುದಕ್ಕೆ ಆಮ್ ಆದ್ಮಿ ಪಕ್ಷ ಕಿಡಿಕಾರುತ್ತಿದೆ. 

ಕಾರ್ಯಕ್ರಮದ ಪಟ್ಟಿಯಿಂದ ಕೇಂದ್ರ ಸರ್ಕಾರವೇ ಕೇಜ್ರಿವಾಲ್ ಹಾಗೂ ಮನೀಷ್ ಸಿಸೋಡಿಯಾ ಅವರ ಹೆಸರನ್ನು ಹೊರಗಿಟ್ಟಿದೆ ಎಂದು ವರದಿಗಳು ತಿಳಿಸಿವೆ. 

ಆರಂಭದಲ್ಲಿ ದಕ್ಷಿಣ ದೆಹಲಿಯ ಶಾಲೆಗೆ ಆಗಮಿಸಲಿರುವ ಮೆಲಾನಿಯಾರ ಅವರಿಗೆ ಕೇಜ್ರಿವಾಲ್ ಹಾಗೂ ಸಿಸೋಡಿಯಾ ಅವರೇ ಸ್ವಾಗತ ಕೋರಲಿದ್ದಾರೆಂದು ಹೇಳಲಾಗುತ್ತಿತ್ತು. 

ಫೆ.25ರಂದು ಕಾರ್ಯಕ್ರಮ ಆಯೋಜಿಸಲಾಗಿದ್ದು, ಒಂದು ಗಂಟೆಯ ಅವಧಿಯ ಭೇಟಿ ವೇಳೆ ಶಾಲಾ ಮಕ್ಕಳೊಂದಿಗೆ ಮೆಲಾನಿಯಾ ಟ್ರಂಪ್ ಸಮಯ ಕಳೆಯಲಿದ್ದಾರೆ. 

ಹ್ಯಾಪಿನೆಸ್ ಕ್ಲಾಸ್ ಎಂಬುದು ವಿದ್ಯಾರ್ಥಿಗಲಿಗಾಗಿ ದೆಹಲಿ ಸರ್ಕಾರ 2018ರ ಜುಲೈನಲ್ಲಿ ಜಾರಿಗೊಳಿಸಿದ ವಿಶೇಷ ಯೋಜನೆಯಾಗಿದೆ. ಈ ಯೋಜನೆಯಡಿ ದೆಹಲಿ ಸರ್ಕಾರಿ ಶಾಲೆಗಳಲ್ಲಿ 1ರಿಂದ 8ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು, ಈ ಹ್ಯಾಪಿ ಕ್ಲಾಸ್ ನಲ್ಲಿ ಪಾಲ್ಗೊಳ್ಲಬೇಕು. ಪ್ರತೀ ದಿನ 45 ನಿಮಿಷ ಈ ಹ್ಯಾಪಿ ಕ್ಲಾಸ್ ನಡೆಯಲಿದೆ. ಈ ತರಗತಿಯಲ್ಲಿ ವ್ಯಾಯಾಮ, ಕಥೆ ಹೇಳುವುದು. ಧ್ಯಾನ, ಪ್ರಶ್ನೆ ಮತ್ತು ಉತ್ತರ ಹಾಗೂ ಇನ್ನಿತರೆ ಶ್ರೇಯೋಭಿವೃದ್ಧಿಗೆ ಬೇಕಾದ ಚಟುವಟಿಕೆಗಳ ಬಗ್ಗೆ ಹೇಳಿಕೊಡಲಾಗುತ್ತದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT