ಭಯೋತ್ಪಾದಕರು, ಭ್ರಷ್ಟರಿಗೆ ಖಾಸಗಿ ಹಕ್ಕಿನ ಹೆಸರಿನಲ್ಲಿ ರಕ್ಷಣೆ ಕಲ್ಪಿಸಬಾರದು; ರವಿಶಂಕರ್ ಪ್ರಸಾದ್ 
ದೇಶ

ಭಯೋತ್ಪಾದಕರು, ಭ್ರಷ್ಟರಿಗೆ ಖಾಸಗಿ ಹಕ್ಕಿನ ಹೆಸರಿನಲ್ಲಿ ರಕ್ಷಣೆ ಕಲ್ಪಿಸಬಾರದು; ರವಿಶಂಕರ್ ಪ್ರಸಾದ್

ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಹಾಗೂ ಖಾಸಗಿ ಹಕ್ಕಿನ ಹೆಸರಿನಲ್ಲಿ ದೇಶ ವಿರೋಧಿ ಚಟುವಟಿಕೆ  ನಡೆಯುತ್ತಿವೆ ಎಂಬ ಆರೋಪಗಳ ನಡುವೆ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ರವಿಶಂಕರ್ ಪ್ರಸಾದ್, ಭಯೋತ್ಪಾದಕರು ಹಾಗೂ ಭ್ರಷ್ಟಾಚಾರಿಗಳ ಖಾಸಗಿತನದ ಹಕ್ಕು ರಕ್ಷಣೆ ಸಾಧ್ಯವಿಲ್ಲ ಎಂದು ಶನಿವಾರ ಹೇಳಿದ್ದಾರೆ. 

ನವದೆಹಲಿ: ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಹಾಗೂ ಖಾಸಗಿ ಹಕ್ಕಿನ ಹೆಸರಿನಲ್ಲಿ ದೇಶ ವಿರೋಧಿ ಚಟುವಟಿಕೆ ನಡೆಯುತ್ತಿವೆ ಎಂಬ ಆರೋಪಗಳ ನಡುವೆ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ರವಿಶಂಕರ್ ಪ್ರಸಾದ್, ಭಯೋತ್ಪಾದಕರು ಹಾಗೂ ಭ್ರಷ್ಟಾಚಾರಿಗಳ ಖಾಸಗಿತನದ ಹಕ್ಕು ರಕ್ಷಣೆ ಸಾಧ್ಯವಿಲ್ಲ ಎಂದು ಶನಿವಾರ ಹೇಳಿದ್ದಾರೆ. 

ಅಂತರಾಷ್ಟ್ರೀಯ ನ್ಯಾಯಾಂಗ ಸಮಾವೇಶದಲ್ಲಿ ಮಾತನಾಡುತ್ತಿದ್ದ ಅವರು, ತಾವು ಸಾಮಾಜಿಕ ಮಾಧ್ಯಮದ ಪ್ರಬಲ ಬೆಂಬಲಿಗ ಆದರೆ,  ಕೆಲವರು ತಮ್ಮಸ್ವಾರ್ಥ ಸಾಧನೆಗೆ ಅದನ್ನು ದುರುಪಯೋಗಪಡಿಸಿಕೊಂಡಾಗ ತೀವ್ರ ಬೇಸರಗೊಂಡಿದ್ದೇನೆ ಎಂದರು. ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಟೀಕಿಸುವ ಪ್ರವೃತ್ತಿ ಹೆಚ್ಚುತ್ತಿರುವುದು "ಅಪಾಯಕಾರಿ" ಬೆಳವಣಿಗೆ ಎಂದು ಬಣ್ಣಿಸಿದರು.  ಈ ವಿಷಯದಲ್ಲಿ ನ್ಯಾಯಮೂರ್ತಿಗಳು ಸೂಕ್ತ ನಿರ್ಧಾರ ಕೈಗೊಳ್ಳಲು ಸಂಪೂರ್ಣ ಸ್ವತಂತ್ರರು ಎಂದು ಕಾನೂನು ಸಚಿವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT