ಶಹೀನಾಬಾಗ್ ಬಳಿಕ ಜಫರಾಬಾದ್ ನಲ್ಲಿ ಸಿಎಎ ವಿರುದ್ಧ ಪ್ರತಿಭಟನೆ: ಪ್ರಮುಖ ರಸ್ತೆಗಳಲ್ಲಿ ಸಂಚಾರ ವ್ಯತ್ಯಯ 
ದೇಶ

ಶಹೀನಾಬಾಗ್ ಬಳಿಕ ಜಫರಾಬಾದ್ ನಲ್ಲಿ ಸಿಎಎ ವಿರುದ್ಧ ಪ್ರತಿಭಟನೆ: ಪ್ರಮುಖ ರಸ್ತೆಗಳಲ್ಲಿ ಸಂಚಾರ ವ್ಯತ್ಯಯ

ಶಹೀನಾಬಾಗ್ ಬಳಿಕ ಜಫರಾಬಾದ್ ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ಭುಗಿಲೆದಿದ್ದು, ಸುಮಾರು 500ಕ್ಕೂ ಹೆಚ್ಚು ಮಹಿಳೆಯರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಪರಿಣಾಮ ದೆಹಲಿಯ ಪ್ರಮುಖ ರಸ್ತೆಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ ಎಂದು ತಿಳಿದುಬಂದಿದೆ. 

ನವದೆಹಲಿ: ಶಹೀನಾಬಾಗ್ ಬಳಿಕ ಜಫರಾಬಾದ್ ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ಭುಗಿಲೆದಿದ್ದು, ಸುಮಾರು 500ಕ್ಕೂ ಹೆಚ್ಚು ಮಹಿಳೆಯರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಪರಿಣಾಮ ದೆಹಲಿಯ ಪ್ರಮುಖ ರಸ್ತೆಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ ಎಂದು ತಿಳಿದುಬಂದಿದೆ. 

ಪ್ರತಿಭಟನೆ ಹಿನ್ನೆಲೆಯಲ್ಲಿ ದೆಹಲಿಯ ಜಫರಾಬಾದ್ ಮೆಟ್ರೋ ನಿಲ್ದಾಣಗಳಲ್ಲಿ ರೈಲು ನಿಲುಗಡೆ ಮಾಡದೆ ಸಂಚಾರ ಮುಂದುವರೆಸಿವೆ. ಈ ಸಂಬಂಧ ದೆಹಲಿ ಮೆಟ್ರೋ ರೈಲು ನಿಗಮ ಟ್ವೀಟ್ ಮಾಡಿದ್ದು, ಈ ನಿಲ್ದಾಣದಲ್ಲಿ ಒಳ ಹಾಗೂ ಹೊರ ಹೋಗುವ ಬಾಗಿಲುಗಳನ್ನು ಬಂದ್ ಮಾಡಿದ್ದು, ಇಲ್ಲಿ ರೈಲುಗಳು ನಿಲುಗಡೆಯಾಗುವುದಿಲ್ಲ ಎಂದು ತಿಳಿಸಿದೆ. 

ಈಶಾನ್ಯ ದೆಹಲಿಯ ಜಫರಾಬಾದ್ ಮೆಟ್ರೋ  ನಿಲ್ದಾಣದ ಸಮೀಪವೇ ನೂರಾರು ಮಹಿಳೆಯರು ಪ್ರತಿಭಟನೆ ಆರಂಭಿಸಿದ್ದಾರೆ. ದೆಹಲಿ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಿದ್ದು, ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿದ್ದಾರೆ. ಶನಿವಾರ ರಾತ್ರಿಯಿಂದಲೇ ಜಫರಾಬಾದ್ ಪ್ರಮುಖ ರಸ್ತೆಗಳನ್ನು ಬಂದ್ ಮಾಡಿರುವ ಮಹಿಳೆಯರು ಭಾನುವಾರ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದಾರೆ. 

ಈಗಾಗಲೇ ಪ್ರತಿಭಟನಾನಿರತ ಮಹಿಳೆಯರು ಜಫರಾಬಾದ್ ರಸ್ತೆ ನಂ.66 ಬಂದ್ ಮಾಡಿದ್ದು, ಇದರಿಂದಾಗಿ ಸೀಲಾಂಪುರ್ದಿಂದ ಮಾಜ್ಪುರ್ ಹಾಗೂ ಯಮುನಾ ವಿಹಾರ್ ಸಂಪರ್ಕ ಕಡಿತಗೊಂಡಿದೆ. ಪ್ರತಿಭಟನಾಕಾರರ ಮತ್ತೊಂದು ತಂಡ ಸೀಲಾಂಪುರ್ ರಸ್ತೆ, ಕರ್ದಾಂಪುರಿ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದು, ಈ ಭಾಗದ ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ಏರ್ಪಟ್ಟಿದೆ ಎಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!