ಸುಬ್ರಹ್ಮಣ್ಯನ್ ಸ್ವಾಮಿ, ಸೀತಾರಾಮ್ ಯೆಚೂರಿ 
ದೇಶ

ಡೊನಾಲ್ಡ್ ಟ್ರಂಪ್ ಅವರ ಭೇಟಿಯಿಂದ ಭಾರತಕ್ಕೆ ಏನೂ ಲಾಭವಿಲ್ಲ: ಸುಬ್ರಹ್ಮಣ್ಯನ್ ಸ್ವಾಮಿ, ಸೀತಾರಾಮ್ ಯೆಚೂರಿ 

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾರತ ಭೇಟಿಯಿಂದ ಅಮೆರಿಕದ ಆರ್ಥಿಕತೆಗೆ ಲಾಭವೇ ಹೊರತು ನಮಗೇನೂ ಉಪಯೋಗವಿಲ್ಲ ಎಂದು ಬಿಜೆಪಿ ಸಂಸದ ಸುಬ್ರಹ್ಮಣ್ಯನ್ ಸ್ವಾಮಿ, ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಟೀಕಿಸಿದ್ದಾರೆ.

ಭುವನೇಶ್ವರ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾರತ ಭೇಟಿಯಿಂದ ಅಮೆರಿಕದ ಆರ್ಥಿಕತೆಗೆ ಲಾಭವೇ ಹೊರತು ನಮಗೇನೂ ಉಪಯೋಗವಿಲ್ಲ ಎಂದು ಬಿಜೆಪಿ ಸಂಸದ ಸುಬ್ರಹ್ಮಣ್ಯನ್ ಸ್ವಾಮಿ, ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಟೀಕಿಸಿದ್ದಾರೆ.


ನಿನ್ನೆ ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಈ ಇಬ್ಬರೂ ನಾಯಕರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಸುಬ್ರಹ್ಮಣ್ಯನ್ ಸ್ವಾಮಿ, ಡೊನಾಲ್ಡ್ ಟ್ರಂಪ್ ಅವರು ತಮ್ಮ ದೇಶದ ಆರ್ಥಿಕತೆಯನ್ನು ಉತ್ತೇಜಿಸಲು ಭಾರತಕ್ಕೆ ಬರುತ್ತಿದ್ದಾರೆ ಹೊರತು ನಮ್ಮ ದೇಶದ ಆರ್ಥಿಕ ಲಾಭಕ್ಕಲ್ಲ. ಹೀಗಾಗಿ ಅವರು ಭಾರತಕ್ಕೆ ಬರುವುದರಿಂದ ನಮಗೆ ಯಾವುದೇ ಲಾಭವಾಗುತ್ತದೆ ಎಂದು ಅನಿಸುವುದಿಲ್ಲ ಎಂದು ಹೇಳಿದರು.


ಟ್ರಂಪ್ ಭೇಟಿ ವೇಳೆ ಕೆಲವು ರಕ್ಷಣಾ ಒಪ್ಪಂದ ಏರ್ಪಡಬಹುದು. ಅದರಿಂದ ಅವರ ದೇಶಕ್ಕೆ ಲಾಭವಿದೆ. ಅಷ್ಟಕ್ಕೂ ಅಮೆರಿಕದಿಂದ ಖರೀದಿಸುವ ರಕ್ಷಣಾ ಸಾಮಗ್ರಿಗಳಿಗೆ ನಾವು ಹಣ ಕೊಡುತ್ತೇವೆ, ಅದನ್ನು ಅವರು ಉಚಿತವಾಗಿ ನೀಡುತ್ತಿಲ್ಲ ಎಂದು ಸುಬ್ರಹ್ಮಣ್ಯ ಸ್ವಾಮಿ ತಮ್ಮದೇ ಪಕ್ಷದ ಸರ್ಕಾರವನ್ನು ಟೀಕಿಸಿದರು.


ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ಸೀತಾರಾಮ್ ಯೆಚೂರಿ, ಟ್ರಂಪ್ ಅವರ ಭೇಟಿಯಿಂದ ನಮಗೆ ಆತಂಕವಾಗುತ್ತಿದೆ. ಅಮೆರಿಕ ರೈತರಿಗೆ ರಿಯಾಯಿತಿ ಪಡೆಯಲು ಇಲ್ಲಿಗೆ ಬರುತ್ತಿದ್ದಾರೆ ಎಂದರು.


ಡೊನಾಲ್ಡ್ ಟ್ರಂಪ್ ಅವರು ನಾಳೆಯಿಂದ ಎರಡು ದಿನಗಳ ಭಾರತ ಪ್ರವಾಸ ಕೈಗೊಳ್ಳುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT