ಸಂಗ್ರಹ ಚಿತ್ರ 
ದೇಶ

ಭಾರತ ಭೇಟಿಗೆ ಉತ್ಸುಕನಾಗಿದ್ದು, ಇನ್ನು ಕೆಲವೇ ಸಮಯದಲ್ಲಿ ಎಲ್ಲರನ್ನೂ ಭೇಟಿಯಾಗುತ್ತೇನೆ: ಹಿಂದಿಯಲ್ಲಿ ಟ್ರಂಪ್ ಟ್ವೀಟ್

ಅಮೆರಿಕಾ ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಭಾರತ ಪ್ರವಾಸ ಕೈಗೊಳ್ಳುತ್ತಿರುವ ಡೊನಾಲ್ಡ್ ಟ್ರಂಪ್ ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದು, ಭಾರತ ಭೇಟಿಗೆ ಉತ್ಸುಕನಾಗಿದ್ದೇನೆ. ಇನ್ನು ಕೆಲವೇ ಸಮಯದಲ್ಲಿ ಎಲ್ಲರನ್ನು ಭೇಟಿ ಮಾಡಲಿದ್ದೇನೆಂದು ಹೇಳಿದ್ದಾರೆ.

ನವದೆಹಲಿ: ಅಮೆರಿಕಾ ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಭಾರತ ಪ್ರವಾಸ ಕೈಗೊಳ್ಳುತ್ತಿರುವ ಡೊನಾಲ್ಡ್ ಟ್ರಂಪ್ ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದು, ಭಾರತ ಭೇಟಿಗೆ ಉತ್ಸುಕನಾಗಿದ್ದೇನೆ. ಇನ್ನು ಕೆಲವೇ ಸಮಯದಲ್ಲಿ ಎಲ್ಲರನ್ನು ಭೇಟಿ ಮಾಡಲಿದ್ದೇನೆಂದು ಹೇಳಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಭಾರತ ಭೇಟಿಗೆ ಉತ್ಸುಕನಾಗಿದ್ದೇನೆ. ಪ್ರಸ್ತುತ ಹಾದಿಯಲ್ಲಿದ್ದು, ಇನ್ನು ಕೆಲವೇ ಸಮಯದಲ್ಲಿ ಎಲ್ಲರನ್ನು ಭೇಟಿಯಾಗಲಿದ್ದೇವೆಂದು ಹಿಂದಿಯಲ್ಲಿ ಹೇಳಿದ್ದಾರೆ. 

ಭಾರತಕ್ಕೆ ಆಗಮಿಸುವ ಟ್ರಂಪ್ ಅವರು, ಮೊದಲಿಗೆ ಗುಜರಾತಿನ ಅಹಮದಾಬ್ ನಲ್ಲಿ ನಡೆಯಲಿರುವ ಬರೋಬ್ಬರಿ 22 ಕಿ.ಮೀ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ. ಈವೇಳೆ 28 ವೇದಿಕೆಗಳಲ್ಲಿ ಟ್ರಂಪ್ ಅವರಿಗೆ ಭಾರತದ ಶ್ರೀಮಂತ ಸಂಸ್ಕೃತಿಯನ್ನು ದರ್ಶನ ಮಾಡಿಸಲು ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಮತ್ತೊಂದೆಡೆ ತಾಜ್ ಮಹಲ್ ಭೇಟಿಗೆ ಟ್ರಂಪ್ ಹಾದುಹೋಗುವ ಮಾರ್ಗದುದ್ದಕ್ಕೂ 3000 ಕಲಾವಿದರು ನೃತ್ಯ ಪ್ರದರ್ಶಿಸಿ ಸ್ವಾಗತ ಕೋರಲಿದ್ದಾರೆ. 

ಅಹಮದಾಬಾದ್ ವಿಮಾನ ನಿಲ್ದಾಣದಿಂದ ಮೊಟೆರಾ ಕ್ರೀಡಾಂಗಣದವರೆಗೆ ಟ್ರಂಪ್ ಅವರು ರೋಡ್ ಶೋ ನಡೆಸಲಿದ್ದಾರೆ. ಅಲ್ಲಲ್ಲಿ 28 ವೇದಿಕೆಗಳನ್ನು ನಿರ್ಮಾಣ ಮಾಡಲಾಗಿದ್ದು, ದೇಶದ ವಿವಿಧ ಭಾಗಗಳ ಕಲಾವಿದರು ಪ್ರದರ್ಶನ ನೀಡಲಿದ್ದಾರೆ. 

ಇನ್ನು ಸಂಜೆ ಆಗ್ರಾಗೆ ಭೇಟಿ ನೀಡಲಿರುವ ಟ್ರಂಪ್ ಅವರು, ವಿಮಾನ ನಿಲ್ದಾಣದಿಂದ ತಾಜ್ ಮಹಲ್ ವರೆಗೆ ಸಾಗುವ 10 ಕಿ.ಮೀ ಉದ್ದದ ಹೆದ್ದಾರಿವರೆಗೂ 16 ಸಾವಿರ ಹೂಕುಂಡಗಳನ್ನು ಇಡಲಾಗಿದೆ. ಮಕ್ಕಳು 60 ಸಾವಿರ ಭಾರತ-ಅಮೆರಿಕಾ ಧ್ವಜವನ್ನು ಬೀಸಲಿದ್ದಾರೆ. 21 ಕಡೆ 3000 ನೃತ್ಯಗಾರರು ಪ್ರದರ್ಶನ ನೀಡಲಿದ್ದಾರೆ. 8 ನಿಮಿಷಗಳ ಪ್ರಯಾಣ ಅವಧಿಯಲ್ಲಿ ಈ ಎಲ್ಲವನ್ನೂ ಟ್ರಂಪ್ ಕಣ್ತುಂಬಿಕೊಳ್ಳಲಿದ್ದಾರೆ. 

ಈ ನಡುವೆ ಟ್ರಂಪ್ ಭೇಟಿ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರೂ ಟ್ವೀಟ್ ಮಾಡಿದ್ದು, ಅಮೆರಿಕಾ ಅಧ್ಯಕ್ಷ ಟ್ರಂಪ್ ಅವರನ್ನು ಸ್ವಾಗತಿಸಲು ಎದುರು ನೋಡುತ್ತಿದ್ದೇವೆ. ಸೋಮವಾರ ಅವರು ನಮ್ಮ ಜೊತೆಗಿರುತ್ತಾರೆ ಎಂಬುದು ನಮಗೆ ಗೌರವದ ವಿಚಾರ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT