ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರ 
ದೇಶ

ದೆಹಲಿಯಲ್ಲಿ ಸಿಎಎ ಪರ, ವಿರೋಧಿಗಳ ಘರ್ಷಣೆ: ಮುಖ್ಯಪೇದೆ ದಾರುಣ ಸಾವು, ಡಿಸಿಪಿಗೆ ಗಾಯ

ಈಶಾನ್ಯ ದೆಹಲಿಯಲ್ಲಿ ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆ ಪರ ಹಾಗೂ ವಿರೋಧಿಗಳ ನಡುವಿನ ಘರ್ಷಣೆಯಲ್ಲಿ ಮುಖ್ಯ ಪೇದೆಯೊಬ್ಬರು ಮೃತಪಟ್ಟಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನವದೆಹಲಿ: ಈಶಾನ್ಯ ದೆಹಲಿಯಲ್ಲಿ ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆ ಪರ ಹಾಗೂ ವಿರೋಧಿಗಳ ನಡುವಿನ ಘರ್ಷಣೆಯಲ್ಲಿ ಮುಖ್ಯ ಪೇದೆಯೊಬ್ಬರು ಮೃತಪಟ್ಟಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗೊಕುಲ್ ಪುರಿಯಲ್ಲಿನ ಸಹಾಯಕ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರತನ್ ಲಾಲ್ ಮೃತ ದುರ್ದೈವಿಯಾಗಿದ್ದಾನೆ. ಘರ್ಷಣೆ ವೇಳೆ ಉಪ ಪೊಲೀಸ್ ಆಯುಕ್ತರು, ಶಹದಾರಾ, ಅಮಿತ್ ಶರ್ಮಾ ಸೇರಿದಂತೆ ಅನೇಕ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಜಾಫ್ರಾಬಾದ್  ಹಾಗೂ ಮೌಜ್ ಪುರದಲ್ಲಿ ಎರಡನೇ ದಿನವಾದ ಇಂದು ಕೂಡಾ ಸಿಎಎ ಪರ ಹಾಗೂ ವಿರೋಧಿಗಳ ನಡುವೆ ಘರ್ಷಣೆ ನಡೆದಿದ್ದು, ಅನೇಕ ವಾಹನಗಳು, ಅಂಗಡಿಗಳು ಹಾಗೂ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಇದರಿಂದಾಗಿ ಈಶಾನ್ಯ ದೆಹಲಿಯಲ್ಲಿ ಪ್ರಕ್ಷುಬ್ದ ವಾತವಾರಣ ನಿರ್ಮಾಣವಾಗಿದೆ.

ಜಾಫ್ರಾಬಾದ್ ನ  ಚಾಂದ್ ಬಾಗ್ ಪ್ರದೇಶದಲ್ಲಿ ಹಿಂಸಾಚಾರ ಉಂಟಾಗಿದ್ದು, ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ಹಾಗೂ  ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ಅಗ್ನಿ ನಂದಿಸಲು ಬಂದಂತಹ ಅಗ್ನಿಶಾಮಕ ವಾಹನವೊಂದಕ್ಕೆ ಪ್ರತಿಭಟನಾಕಾರರು ಹಾನಿಯನ್ನುಂಟುಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಾಫ್ರಾಬಾದ್  ಹಾಗೂ ಮೌಜ್ ಪುರ- ಬಾಬರ್ ಪುರ್ ದಲ್ಲಿನ ಮೆಟ್ರೋ ನಿಲ್ದಾಣಗಳಲ್ಲಿ ಪ್ರವೇಶ ಹಾಗೂ ನಿರ್ಗಮನವನ್ನು ಬಂದ್ ಮಾಡಲಾಗಿದೆ. ಈ ನಿಲ್ದಾಣಗಳಲ್ಲಿ ರೈಲುಗಳು ನಿಲುಗಡೆಯಾಗುವುದಿಲ್ಲ ಎಂದು ದೆಹಲಿ ಮೆಟ್ರೋ ರೈಲು ನಿಗಮ ಟ್ವಿಟ್ ಮಾಡಿದೆ.

ಹಿಂಸಾಚಾರದ ವೇಳೆಯಲ್ಲಿ ಭದ್ರತಾ ಪಡೆಗಳ ಮೇಲೂ ಕಲ್ಲು ತೂರಾಟ ನಡೆದ ಬಳಿಕ ಸೂಕ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. 

ಉಪ ರಾಜ್ಯಪಾಲ ಅನಿಲ್ ಬೈಜಾಲ್ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ  ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಮುಖ್ಯಮಂತ್ರಿ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.ಪ್ರಕ್ಷುಬ್ದ ಪರಿಸ್ಥಿತಿ ಕ್ಷೀಣಿಸುವವರೆಗೂ ಈ ಪ್ರದೇಶದಲ್ಲಿ ಸಿಆರ್ ಪಿಎಫ್ ಯನ್ನು ನಿಯೋಜನೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! Video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

SCROLL FOR NEXT