ಮನೀಷ್ ಸಿಸೋಡಿಯಾ 
ದೇಶ

ಜಾಮಿಯಾ ಹಿಂಸಾಚಾರ: ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾಗೆ ಕ್ಲೀನ್ ಚಿಟ್ ನೀಡಿದ ಪೊಲೀಸರು

ಡಿಸೆಂಬರ್ 15 ರಂದು ಸಂಭವಿಸಿದ್ದ ಜಾಮಿಯಾ ಹಿಂಸಾಚಾರ ಸಂದರ್ಭ ದುರುದ್ದೇಶಪೂರಿತ ಟ್ವೀಟ್  ಮಾಡಿದ್ದ ಆರೋಪ ಎದುರಿಸುತ್ತಿದ್ದ  ಉಪಮುಖ್ಯಮಂತ್ರಿ ಮನೀಸ್ ಸಿಸೊಡಿಯಾ ಅವರಿಗೆ ದೆಹಲಿ ಪೊಲೀಸರು ಇಂದು ಕ್ಲೀನ್ ಚಿಟ್ ನೀಡಿದ್ದಾರೆ

ನವದೆಹಲಿ: ಡಿಸೆಂಬರ್ 15 ರಂದು ಸಂಭವಿಸಿದ್ದ ಜಾಮಿಯಾ ಹಿಂಸಾಚಾರ ಸಂದರ್ಭ ದುರುದ್ದೇಶಪೂರಿತ ಟ್ವೀಟ್  ಮಾಡಿದ್ದ ಆರೋಪ ಎದುರಿಸುತ್ತಿದ್ದ  ಉಪಮುಖ್ಯಮಂತ್ರಿ ಮನೀಸ್ ಸಿಸೊಡಿಯಾ ಅವರಿಗೆ ದೆಹಲಿ ಪೊಲೀಸರು ಇಂದು ಕ್ಲೀನ್ ಚಿಟ್ ನೀಡಿದ್ದಾರೆ

ಸಿಸೋಡಿಯಾ ತಮ್ಮ ಅಭಿಪ್ರಾಗಳನ್ನು ಮಾತ್ರ ಪೋಸ್ಟ್ ಮಾಡಿದ್ದಾರೆ. ಟ್ವೀಟ್ ಗಳು ಕೇವಲ ಪೊಲೀಸರ ವಿರುದ್ಧದ ಆರೋಪಗಳಾಗಿವೆ ಎನ್ನಲಾಗಿದೆ. 

ಈ ಸಂಬಂಧ ನೀಡಲಾಗಿದ್ದ ದೂರಿನ ಪರಿಶೀಲನೆಯಿಂದ ಟ್ವೀಟ್‌ಗಳು ಕೇವಲ ಪೊಲೀಸರ ವಿರುದ್ಧದ ಆರೋಪಗಳಾಗಿವೆ ಮತ್ತು ಯಾವುದೇ ಅಪರಾಧ ಮಾಡಲಾಗಿಲ್ಲ ಎಂದು ತಿಳಿದುಬಂದಿದೆ. 

ಮನೀಷ್ ಸಿಸೋಡಿಯಾ ಸುದ್ದಿ ಚಾನೆಲ್ ಗಳಲ್ಲಿ ಹರಿದಾಡುತ್ತಿದ್ದ ವಿಡಿಯೋ ಕ್ಲಿಪ್ ಟ್ವೀಟ್ ಮಾಡುವ ಮೂಲಕ  ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಯಾವುದೇ ರೀತಿಯ ಅಪರಾಧವನ್ನು ಮಾಡಿಲ್ಲ ಎಂದು ಪೊಲೀಸರು ಕ್ರಮ ತೆಗೆದುಕೊಂಡ ವರದಿ (ಎಟಿಆರ್ ) ಸಲ್ಲಿಸಿದ್ದಾರೆ.

ದುರುದ್ದೇಶಪೂರಿತ ಟ್ವೀಟ್ ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲಿ ಸಿಸೋಡಿಯಾ ವಿರುದ್ಧ ಎಫ್ ಐಆರ್ ದಾಖಲಿಸಬೇಕು ಎಂದು ವಕೀಲರೊಬ್ಬರು ದಾಖಲಿಸಿದ್ದ ದೂರಿನ ವಿಚಾರಣೆ ನಡೆಸಿದ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ವಿಶಾಲ್ ಪಾಹುಜಾ, ಕ್ರಮ ತೆಗೆದುಕೊಂಡ ವರದಿ ( ಎಟಿಆರ್ ) ಸಲ್ಲಿಸುವಂತೆ  ಪೊಲೀಸರಿಗೆ ನಿರ್ದೇಶನ ನೀಡಿದ್ದರು.

ಚುನಾವಣೆಯಲ್ಲಿ ಸೋಲುವ ಭೀತಿಯಿಂದ ದೆಹಲಿಯಲ್ಲಿ ಬಿಜೆಪಿ ಬೆಂಕಿ ಇಟ್ಟಿದೆ. ಎಎಪಿ ಯಾವುದೇ ರೀತಿಯ ಹಿಂಸಾಚಾರವನ್ನು ವಿರೋಧಿಸುತ್ತದೆ. ಪೊಲೀಸರ ರಕ್ಷಣೆಯಲ್ಲಿ ಯುವಕರು ಹೇಗೆ ಬೆಂಕಿ ಇಡುತ್ತಿದ್ದಾರೆ ನೋಡಿ ಎಂದು ಬರೆದಿದ್ದ ವಿಡಿಯೋ ಪೋಸ್ಟ್ ಮಾಡಿದ್ದ ಸಿಸೋಡಿಯಾ ವಿರುದ್ಧ ವಕೀಲ ಅಲೋಕ್ ಶ್ರೀವಾಸ್ತವ ದೂರು ದಾಖಲಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ