ತಮಿಳುನಾಡು; ಜಯಲಲಿತಾ ಜನ್ಮದಿನ ನವಜಾತ ಶಿಶುಗಳಿಗೆ ಚಿನ್ನ ಉಂಗುರಗಳ ಉಡುಗೊರೆ! 
ದೇಶ

ತಮಿಳುನಾಡು; ಜಯಲಲಿತಾ ಜನ್ಮದಿನ ನವಜಾತ ಶಿಶುಗಳಿಗೆ ಚಿನ್ನ ಉಂಗುರಗಳ ಉಡುಗೊರೆ!

ತಮಿಳುನಾಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ಜನಿಸಿದ ನವಜಾತ ಶಿಶುಗಳಿಗೆ ಚಿನ್ನದ ಉಂಗುರಗಳನ್ನು ಕೊಡುಗೆಯಾಗಿ ನೀಡಲಾಗಿದೆ. 

ಚೆನ್ನೈ: ತಮಿಳುನಾಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ಜನಿಸಿದ ನವಜಾತ ಶಿಶುಗಳಿಗೆ ಚಿನ್ನದ ಉಂಗುರಗಳನ್ನು ಕೊಡುಗೆಯಾಗಿ ನೀಡಲಾಗಿದೆ. 

ದಿವಂಗತ ಮುಖ್ಯಮಂತ್ರಿ ಜಯಲಲಿತಾ ಅವರ 72 ನೇ ಜನ್ಮ ದಿನವಾದ ಇಂದು ರಾಯಪುರಂ ಆರ್‌ಎಸ್‌ಆರ್‌ಎಂ ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸಿದ ಶಿಶುಗಳಿಗೆ ರಾಜ್ಯ ಆರೋಗ್ಯ ಸಚಿವ ಡಿ.ಜಯಕುಮಾರ್ ಚಿನ್ನದ ಉಂಗುರಗಳನ್ನು ಉಡುಗೊರೆಯಾಗಿ ನೀಡಿದರು. 

ಜಯಲಲಿತಾ ಜನ್ಮ ದಿನದ ಅಂಗವಾಗಿ ಎಐಎಡಿಎಂಕೆ ಪಕ್ಷ ಬಡವರಿಗೆ ನೆರವು ಕಲ್ಪಿಸುವ ಮತ್ತು ವೈದ್ಯಕೀಯ ಶಿಬಿರ ನಡೆಸಲು ತನ್ನ ಎಲ್ಲ ಕಾರ್ಯಕರ್ತರಿಗೆ ಕರೆ ನೀಡಿತ್ತು. ರಾಜ್ಯಾದ್ಯಂತ ಅನೇಕ ನಾಯಕರು ಹಾಗೂ ಕಾರ್ಯಕರ್ತರು ದಿ. ಜಯಲಲಿತಾ ಅವರಿಗೆ ಗೌರವ ನಮನ ಸಲ್ಲಿಸಿದರು. ಮುಖ್ಯ ಪಳನಿ ಸ್ವಾಮಿ ಉಪ ಮುಖ್ಯಮಂತ್ರಿ ಪನ್ನೀರ್‌ಸೆಲ್ವಂ ರಾಜ್ಯ ಸಚಿವಾಲಯ ಬಳಿ ಇರುವ ದಿವಂಗತ ಜಯಲಲಿತಾ ಪ್ರತಿಮೆಗೆ ಗೌರವ ನಮನ ಸಲ್ಲಿಸಿದರು. ಜಯಲಲಿತಾ ಅವರ ಜನ್ಮ ದಿನವಾದ ಫೆಬ್ರವರಿ 24 ರಂದು ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯ ದಿನವಾಗಿ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಪಳನಿಸ್ವಾಮಿ ಇತ್ತೀಚೆಗೆ ವಿಧಾನಸಭೆಯಲ್ಲಿ ಘೋಷಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಂದಿಕೊಳ್ಳಲು ಸಾಧ್ಯವಿಲ್ಲ ಎಂದು ಯಾರು ಹೇಳಿದ್ದು?': ಅಮೆರಿಕ ವ್ಯಾಪಾರ ಒಪ್ಪಂದದ ಅನಿಶ್ಚಿತತೆ ನಡುವೆಯೇ ಹೊಸ ಮಾರುಕಟ್ಟೆಗಳತ್ತ ಭಾರತ ಕಣ್ಣು!

ಯುವನಿಧಿಗೆ ನಿರುದ್ಯೋಗಿ ವಿದ್ಯಾರ್ಥಿಗಳ ನೋಂದಣಿ ನೋಡ್ತಿದ್ದರೆ ಆತಂಕಕಾರಿ, ಶಿಕ್ಷಣದಲ್ಲಿ ಬದಲಾವಣೆ ಅಗತ್ಯ: ವಿಟಿಯು ಉಪಕುಲಪತಿ

ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೋ ಹರಿಬಿಟ್ಟ ಆರೋಪಿಗಳು: ಹುಬ್ಬಳ್ಳಿ ಪೊಲೀಸರಿಂದ ಮೂವರ ಬಂಧನ!

ದಾವಣಗೆರೆ: ಮಕ್ಕಳ ಹಾದಿ ಹಿಡಿದ ಬಿಜೆಪಿ ಮುಖಂಡ; ಕಾರಿನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

SCROLL FOR NEXT