ದೇಶ

ಹಂದಿ ಜ್ವರದಿಂದ ಬಳಲುತ್ತಿರುವ ಸುಪ್ರೀಂ ಕೋರ್ಟ್ ನ 6 ನ್ಯಾಯಾಧೀಶರು: ಮುಖವಾಡ ಧರಿಸಿ ಕೋರ್ಟ್ ಗೆ ಬಂದ ವಕೀಲರು 

ಸುಪ್ರೀಂ ಕೋರ್ಟ್ ನ ಆರು ನ್ಯಾಯಾಧೀಶರು ಹಂದಿ ಜ್ವರದಿಂದ ಬಳಲುತ್ತಿದ್ದು ನ್ಯಾಯಾಲಯದ ಕಲಾಪಗಳಿಗೆ ಹಾಜರಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ನವದೆಹಲಿ:ಸುಪ್ರೀಂ ಕೋರ್ಟ್ ನ ಆರು ನ್ಯಾಯಾಧೀಶರು ಹಂದಿ ಜ್ವರದಿಂದ ಬಳಲುತ್ತಿದ್ದು ನ್ಯಾಯಾಲಯದ ಕಲಾಪಗಳಿಗೆ ಹಾಜರಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.


ಆರು ಮಂದಿ ಸಹೋದ್ಯೋಗಿಗಳಿಗೆ ಹೆಚ್ 1ಎನ್ 1 ವೈರಸ್ ತಗುಲಿರುವ ಬಗ್ಗೆ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಅವರೊಂದಿಗೆ ಸಭೆ ನಡೆಸಿ ಪರಾಮರ್ಶಿಲಾಗುವುದು ಎಂದು ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ತಿಳಿಸಿದ್ದಾರೆ,


ಮುಖವಾಡ ಧರಿಸಿ ಬಂದ ನ್ಯಾಯಾಧೀಶರು: ಆರು ಮಂದಿ ನ್ಯಾಯಾಧೀಶರಿಗೆ ಹಂದಿಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಇಂದು ಕೋರ್ಟ್ ಗೆ ಉಳಿದ ನ್ಯಾಯಾಧೀಶರು ಮುಖವಾಡ ಧರಿಸಿಕೊಂಡು ಬಂದಿದ್ದು ಕಂಡುಬಂತು. ಉಳಿದ ನ್ಯಾಯಾಧೀಶರಿಗೆ ಸೋಂಕು ಕಾಣಿಸಿಕೊಳ್ಳದಂತೆ ಸುಪ್ರೀಂ ಕೋರ್ಚ್ ನಲ್ಲಿ ಚುಚ್ಚುಮದ್ದು ಸಿಗುವ ಸೌಕರ್ಯ ಕಲ್ಪಿಸಿಕೊಡಲಾಗುತ್ತಿದೆ ಎಂದು ನ್ಯಾಯಮೂರ್ತಿ ಚಂದ್ರಚೂಡ್ ತಿಳಿಸಿದರು. 

ಈ ಸೋಂಕಿನ ವಿರುದ್ಧ ರಕ್ಷಣಾತ್ಮಕ ಕ್ರಮಗಳನ್ನು ನ್ಯಾಯಾಧೀಶರು, ವಕೀಲರು, ವಕೀಲರ ಸಂಘದವರು ತೆಗೆದುಕೊಳ್ಳಬೇಕೆಂದು ಹೇಳಿದರು. ಹಂದಿ ಜ್ವರ ಕಾಣಿಸಿಕೊಂಡ ನ್ಯಾಯಾಧೀಶರಲ್ಲಿ ಇಬ್ಬರು ಶಬರಿಮಲೆ ತೀರ್ಪು ಕೇಸಿನ ವಿಚಾರಣೆಯಲ್ಲಿದ್ದು ಅವರು ರಜೆಯಲ್ಲಿರುವುದರಿಂದ ವಿಚಾರಣೆ ವಿಳಂಬವಾಗುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!