ದೆಹಲಿಯಲ್ಲಿ ಅರೆಸೇನಾಪಡೆಗಳು 
ದೇಶ

ಸಿಎಎ ಹಿಂಸಾಚಾರ: ದೆಹಲಿಗೆ ಸೇನೆ ರವಾನಿಸಿ ಎಂದ ಸಿಎಂ ಕೇಜ್ರಿವಾಲ್, 20ಕ್ಕೇರಿದ ಸಾವಿನ ಸಂಖ್ಯೆ

ಪೌರತ್ವ ತಿದ್ದುಪಡಿ ಕಾಯ್ದೆ ಪರ-ವಿರೋಧಿ ಬಣಗಳ ನಡುವಿನ ಸಂಘರ್ಷ ಮತ್ತು ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೂಡಲೇ ಸೇನೆಯನ್ನು ಕಾರ್ಯಾಚರಣೆಗೆ ಇಳಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ಪರ-ವಿರೋಧಿ ಬಣಗಳ ನಡುವಿನ ಸಂಘರ್ಷ ಮತ್ತು ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 20ಕ್ಕೆ ಏರಿಕೆಯಾಗಿದ್ದು, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೂಡಲೇ ಸೇನೆಯನ್ನು ಕಾರ್ಯಾಚರಣೆಗೆ ಇಳಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಪ್ರಮುಖವಾಗಿ ಹಿಂಸಾಚಾರದ ಕೇಂದ್ರ ಬಿಂದು ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಿಸಲು ಸೇನೆಯನ್ನು ರವಾನೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.

‘ಹಿಂಸಾಚಾರ ನಿಯಂತ್ರಣಕ್ಕೆ ಪೊಲೀಸರು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಆದರೂ ಶಾಂತಿ–ಸುವ್ಯವಸ್ಥೆ ನೆಲೆಸುತ್ತಿಲ್ಲ. ಜನರಲ್ಲಿ ಭದ್ರತೆಯ ಭಾವನೆ ಮೂಡುತ್ತಿಲ್ಲ. ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ತಕ್ಷಣ ಕರ್ಫ್ಯೂ ಹೇರಬೇಕು ಮತ್ತು ದುಷ್ಕರ್ಮಿಗಳನ್ನು ಹತ್ತಿಕ್ಕಲು ಸೇನೆಯನ್ನು ನಿಯೋಜಿಸಬೇಕು ಎಂದು ಕೇಂದ್ರ ಗೃಹ ಸಚಿವರನ್ನು ವಿನಂತಿಸಿ ಪತ್ರ ಬರೆಯುತ್ತೇನೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

20ಕ್ಕೇರಿದ ಸಾವಿನ ಸಂಖ್ಯೆ
ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ಪರ–ವಿರುದ್ಧದ ಪ್ರತಿಭಟನೆಯು ಕೋಮು ಸಂಘರ್ಷಕ್ಕೆ ತಿರುಗಿದ ಪರಿಣಾಮ ರಾಷ್ಟ್ರ ರಾಜಧಾನಿಯ ಈಶಾನ್ಯ ಭಾಗದ ಕೆಲವು ಭಾಗಗಳಲ್ಲಿ ಬುಧವಾರವೂ ಹಿಂಸಾಚಾರ ಮುಂದುವರಿದಿದೆ. ಹಿಂಸಾಚಾರಕ್ಕೆ ಮತ್ತೆ ಏಳು ಜನರು ಬಲಿಯಾಗಿದ್ದು, ಒಟ್ಟು ಮೃತಪಟ್ಟವರ 20ಕ್ಕೆ ಏರಿಕೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT