ಸಂಗ್ರಹ ಚಿತ್ರ 
ದೇಶ

ದೆಹಲಿ ಹಿಂಸಾಚಾರದ ಎಫೆಕ್ಟ್: ಐದು ಪೊಲೀಸ್ ಅಧಿಕಾರಿಗಳ ವರ್ಗಾವಣೆ

ದೆಹಲಿಯಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕಠಿಣ ಕ್ರಮಕ್ಕೆ ಮುಂದಾಗಿರುವ ದೆಹಲಿ ಪೊಲೀಸ್ ಆಯುಕ್ತ ಅಮೂಲ್ಯ ಪಟ್ನಾಯಕ್ ಅವರು ಐವರ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ನವದೆಹಲಿ: ದೆಹಲಿಯಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕಠಿಣ ಕ್ರಮಕ್ಕೆ ಮುಂದಾಗಿರುವ ದೆಹಲಿ ಪೊಲೀಸ್ ಆಯುಕ್ತ ಅಮೂಲ್ಯ ಪಟ್ನಾಯಕ್ ಅವರು ಐವರ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ದೆಹಲಿ ಪೊಲೀಸ್ ಆಯುಕ್ತ ಅಮೂಲ್ಯ ಪಟ್ನಾಯಕ್ ಅವರು ಇನ್ನು ಕೇವಲ ಮೂರು ದಿನಗಳಲ್ಲಿ ನಿವೃತ್ತಿಯಾಗುತ್ತಿದ್ದು, ಈ ಸಂದರ್ಭದಲ್ಲಿ ನಡೆದ ದೆಹಲಿ ಹಿಂಸಾಚಾರದ ಹಿನ್ನಲೆಯಲ್ಲಿ ಐವರು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದಾರೆ. 

ಮೂಲಗಳ ಪ್ರಕಾರ ದೆಹಲಿಯ ರೋಹಿಣಿ ಪ್ರದೇಶದ ಹೆಚ್ಚುವರಿ ಆಯುಕ್ತರಾಗಿದ್ದ ಎಸ್. ಡಿ. ಮಿಶ್ರಾ ಅವರನ್ನು ಸಂಚಾರಿ ಪೊಲೀಸ್ ವಿಭಾಗಕ್ಕೆ ವರ್ಗಾಯಿಸಲಾಗಿದ್ದು, ದೆಹಲಿ ಪೊಲೀಸ್ ವಕ್ತಾರರಾದ ಎಂ.ಎಸ್.ರಾಂಧವ ಅವರನ್ನು ಹೆಚ್ಚುವರಿ ಆಯುಕ್ತರು(ಕ್ರೈಮ್ ) ಆಗಿ ನೇಮಿಸಲಾಗಿದೆ. ಆರ್ಥಿಕ ಅಪರಾಧ ವಿಭಾಗಕ್ಕೆ ವರ್ಗಾವಣೆಯಾಗಿ ತೆರಳಬೇಕಿದ್ದ ಪೊಲೀಸ್ ಉಪ ಆಯುಕ್ತ ಪಿ ಮಿಶ್ರಾ ಅವರನ್ನು ರೋಹಿಣಿ ಪ್ರದೇಶದ ಡಿಸಿಪಿಯಾಗಿ ನೇಮಕ ಮಾಡಲಾಗಿದೆ. ಅಂತೆಯೇ ಐಜಿಐ (ಇಂದಿರಾಗಾಂದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ)ಗೆ ವರ್ಗವಾಗಬೇಕಿದ್ದ ಐಪಿಎಸ್ ಅಧಿಕಾರಿ ಸಂಜಯ್ ಭಾಟಿಯಾ ಅವರನ್ನು ಕೇಂದ್ರ ದೆಹಲಿ ವಿಭಾಗಕ್ಕೆ ಡಿಸಿಪಿಯಾಗಿ ವರ್ಗ ಮಾಡಲಾಗಿದ್ದು, ಸ್ಚಾಫ್ ಆಫೀಸರ್ ಆಗಿದ್ದ ಸಂಜೀವ್ ರಂಜನ್ ಅವರನ್ನು ಐಜಿಐ ವಿಮಾನ ನಿಲ್ದಾಣಕ್ಕೆ ಡಿಸಿಪಿಯಾಗಿ ವರ್ಗಾವಣೆ ಮಾಡಿ ದೆಹಲಿ ಪೊಲೀಸ್ ಆಯುಕ್ತ ಅಮೂಲ್ಯ ಪಟ್ನಾಯಕ್ ಆದೇಶ ಹೊರಡಿಸಿದ್ದಾರೆ.

ಇನ್ನು ದೆಹಲಿಯ ಹಿಂಸಾಚಾರದ ಕುರಿತು ನಿಗಾ ವಹಿಸಲು ಹಿರಿಯ ಐಪಿಎಸ್ ಅಧಿಕಾರಿ ಎಸ್.ಎನ್. ಶ್ರೀವಾತ್ಸವ ಅವರನ್ನು ವಿಶೇಷ ಆಯುಕ್ತರನ್ನಾಗಿ ನೇಮಿಸಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT