ಸಂಗ್ರಹ ಚಿತ್ರ 
ದೇಶ

ದೆಹಲಿ ಸಿಎಎ ರಕ್ತಪಾತ: ಹಿಂಸಾಚಾರ ಪ್ರಕರಣ ವಿಚಾರಣೆ ನಡೆಸಿದ ದೆಹಲಿ 'ಹೈ', ಗಾಯಾಳುಗಳ ಚಿಕಿತ್ಸೆಗೆ ಪೊಲೀಸರಿಗೆ ಸೂಚನೆ

ರಾಜಧಾನಿ ದೆಹಲಿಯಲ್ಲಿ ನಡೆದ ಹಿಂಸಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಹೈಕೋರ್ಟ್ ಮಂಗಳವಾರ ತಡರಾತ್ರಿ ವಿಚಾರಣೆ ನಡೆಸಿದ್ದು ಜನರಿಗೆ ರಕ್ಷಣೆ ಒದಗಿಸುವಂತೆ ಹಾಗೂ ಗಾಯಾಳುಗಳಿಗೆ ಚಿಕಿತ್ಸೆ ನೀಡುವಂತೆ ಪೊಲೀಸರಿಗೆ ಸೂಚನೆ ನೀಡಿದೆ. 

ನವದೆಹಲಿ: ರಾಜಧಾನಿ ದೆಹಲಿಯಲ್ಲಿ ನಡೆದ ಹಿಂಸಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಹೈಕೋರ್ಟ್ ಮಂಗಳವಾರ ತಡರಾತ್ರಿ ವಿಚಾರಣೆ ನಡೆಸಿದ್ದು ಜನರಿಗೆ ರಕ್ಷಣೆ ಒದಗಿಸುವಂತೆ ಹಾಗೂ ಗಾಯಾಳುಗಳಿಗೆ ಚಿಕಿತ್ಸೆ ನೀಡುವಂತೆ ಪೊಲೀಸರಿಗೆ ಸೂಚನೆ ನೀಡಿದೆ. 

ಪೌರತ್ವ ತಿದ್ದುಪಡಿ ಪರ-ವಿರೋಧವಾಗಿ ಈಶಾನ್ಯ ದೆಹಲಿಯಲ್ಲಿ ಶನಿವಾರ ಸಣ್ಣ ಪ್ರಮಾಧಲ್ಲಿ ಆರಂಭವಾಗಿ, ಭಾನುವಾರ-ಸೋಮವಾರಗಳಂದು ಹಿಂಸಾಚಾರ ರೂಪ ಪಡೆದುಕೊಂಡಿದ್ದ ಪ್ರತಿಭಟನೆ, ಮಂಗಳವಾರ ರಕ್ತಪಾತಕ್ಕೆ ಕಾರಣವಾಗಿತ್ತು. ಮಂಗಳವಾರ ಬೆಳಿಗ್ಗೆಯಿಂದಲೂ ಜಫ್ರಾಬಾದ್ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರೀ ಹಿಂಸಾಚಾರ ನಡೆದು, 17 ಮಂದಿ ಸಾವನ್ನಪ್ಪಿದ್ದಾರೆ.  ಘಟನೆಯಲ್ಲಿ 50 ಪೊಲೀಸರು ಸೇರಿದಂತೆ 180 ಮಂದಿ ಗಾಯಗೊಂಡಿದ್ದು, ಅವರ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ನಾಲ್ಕು ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಹಿಂಸಾಚಾರ ಹತ್ತಿಕ್ಕಲು ಕಂಡಲ್ಲಿ ಗುಂಡಿಕ್ಕಲು ಆದೇಶಿಸಲಾಗಿದೆ ಎಂದು ವರದಿಗಳು ತಿಳಿಸಿವೆ. 

ಭಾರೀ ಹಿಂಸಾಚಾರಕ್ಕೆ ಸಾಕ್ಷಿಯಾಗಿರುವ ಜಫ್ರಾಬಾದ್, ಮೌಜ್ ಪುರ, ಭಜನ್ ಪುರ ಚೌಕ್, ಚಾಂದ್ ಬಾಗ್, ಕರ್ವಾಲ್ ನಗರ್, ಖುರೇಜಿ ಖಾಸ್, ಬಾಬರ್ ಪುರ ಸೇರಿದಂತೆ ಹಲವು ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. 

ಈ ಹಿನ್ನೆಲೆಯಲ್ಲಿ ಹಿಂಸಾಚಾರ ಪ್ರಕರಣ ಕುರಿತು ಮಧ್ಯರಾತ್ರಿ ವಿಚಾರಣೆ ನಡೆಸಿರುವ ದೆಹಲಿ ಹೈಕೋರ್ಟ್, ಗಲಭೆಯಲ್ಲಿ ಗಾಯಗೊಂಡವರಿಗೆ ಕೂಡಲೇ ವೈದ್ಯಕೀಯ ನೆರವು ಒದಗಿಸಿ ರಕ್ಷಣೆ ನೀಡುವಂತೆ ಪೊಲೀಸರಿಗೆ ಸೂಚನೆ ನೀಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT