ಸಂಗ್ರಹ ಚಿತ್ರ 
ದೇಶ

ಬಾಲಾಕೋಟ್ ವಾಯುದಾಳಿಗೆ ವರ್ಷ; ಭಾರತ ರಕ್ಷಣೆಗೆ ಮತ್ತೆ ಗಡಿ ದಾಟಲು ಸಿದ್ದ ಎಂದ ಕೇಂದ್ರ ಸಚಿವ ರಾಜನಾಥ್ ಸಿಂಗ್

ಭಾರತೀಯ ವಾಯುಸೇನೆಯ ಶೌರ್ಯಕ್ಕೆ ಸಾಕ್ಷಿಯಾಗಿರುವ ಬಾಲಾಕೋಟ್ ವಾಯುದಾಳಿ ನಡೆದು ಇಂದಿಗೆ ಸರಿಯಾಗಿ ಒಂದು ವರ್ಷ ತುಂಬಿದ್ದು, ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ಭಾರತದ ರಕ್ಷಣೆಗಾಗಿ ಮತ್ತೆ ಗಡಿದಾಟಲು ಸೇನೆ ಹಿಂದೆ ಮುಂದೆ ನೋಡುವುದಿಲ್ಲ ಎಂದು ಹೇಳಿದ್ದಾರೆ.

ನವದೆಹಲಿ: ಭಾರತೀಯ ವಾಯುಸೇನೆಯ ಶೌರ್ಯಕ್ಕೆ ಸಾಕ್ಷಿಯಾಗಿರುವ ಬಾಲಾಕೋಟ್ ವಾಯುದಾಳಿ ನಡೆದು ಇಂದಿಗೆ ಸರಿಯಾಗಿ ಒಂದು ವರ್ಷ ತುಂಬಿದ್ದು, ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ಭಾರತದ ರಕ್ಷಣೆಗಾಗಿ ಮತ್ತೆ ಗಡಿದಾಟಲು ಸೇನೆ ಹಿಂದೆ ಮುಂದೆ ನೋಡುವುದಿಲ್ಲ ಎಂದು ಹೇಳಿದ್ದಾರೆ.

ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ರಾಜನಾಥ್ ಸಿಂಗ್ ಅವರು, 'ಬಾಲಾಕೋಟ್ ದಾಳಿಗೆ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯೇ ಕಾರಣ. ಇದಕ್ಕಾಗಿ ನಾನು ಪ್ರಧಾನಿಯವರನ್ನು ಅಭಿನಂದಿಸುತ್ತೇನೆ. ದೇಶದ ರಕ್ಷಣೆ ವಿಷಯದಲ್ಲಿ ನಾವು ಯಾವುದೇ ರಾಜಿ ಸಂಧಾನ ಮಾಡಿಕೊಳ್ಳುವುದಿಲ್ಲ. ಅಗತ್ಯಬಿದ್ದರೆ ಗಡಿಯನ್ನು ದಾಟಿ ಉಗ್ರರ ಹುಟ್ಟಡಗಿಸಲು ನಮ್ಮ ಯೋಧರು ಹಿಂಜರಿಯುವುದಿಲ್ಲ ಎಂದು ಹೇಳಿದ್ದಾರೆ.

ಇನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಬಾಲಾಕೋಟ್ ಸೇರಿದಂತೆ ವಿವಿಧೆಡೆ ಜೈಷ್-ಎ- ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಅಡಗುತಾಣಗಳು ಮತ್ತು ತರಬೇತಿ ಶಿಬಿರಗಳ ಮೇಲೆ ಭಾರತೀಯ ಯುದ್ಧವಿಮಾನಗಳು ಇದೇ ದಿನ ಅಂದರೆ ಫೆ.26ರಂದು ಮಿಂಚಿನ ದಾಳಿ ನಡೆಸಿದವು. ಈ ಮಹತ್ವದ ಕಾರ್ಯಾಚರಣೆಯಲ್ಲಿ ಉಗ್ರಗಾಮಿಗಳ ಶಿಬಿರಗಳು, ಶಸ್ತ್ರಾಸ್ತ್ರ ದಾಸ್ತಾನು ಸಂಗ್ರಹಗಳು ನುಚ್ಚುನೂರಾಗಿ ಹತ್ತಾರು ಉಗ್ರರು ಹತರಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT