ಖಂಬತ್ ನಗರ 
ದೇಶ

ಗುಜರಾತ್ ನಲ್ಲಿ ಕೋಮುಗಲಭೆ: ಸಹಜ ಸ್ಥಿತಿಗೆ ಮರಳಿದ ಖಂಬತ್ ಪಟ್ಟಣ

ಕೋಮುಗಲಭೆ ಪೀಡಿತ ಗುಜರಾತ್ ನ ಆನಂದ್ ಜಿಲ್ಲೆಯ ಖಂಬತ್ ಪಟ್ಟಣ ಮೂರು ದಿನಗಳ ನಂತರ ಬುಧವಾರ ಸಹಜ ಸ್ಥಿತಿಗೆ ಮರಳಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆನಂದ್: ಕೋಮುಗಲಭೆ ಪೀಡಿತ ಗುಜರಾತ್ ನ ಆನಂದ್ ಜಿಲ್ಲೆಯ ಖಂಬತ್ ಪಟ್ಟಣ ಮೂರು ದಿನಗಳ ನಂತರ ಬುಧವಾರ ಸಹಜ ಸ್ಥಿತಿಗೆ ಮರಳಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೋಮುಗಲಭೆಗೆ ಸಂಬಂಧಿಸಿದಂತೆ ಇದುವರೆಗೆ 84 ಮಂದಿಯನ್ನು ಬಂಧಿಸಲಾಗಿದೆ ಮತ್ತು ಬಿಜೆಪಿ ಶಾಸಕ ಸೇರಿದಂತೆ ಏಳು ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕೋಮುಗಲಭೆಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸಂಜಯ್ ಪಟೇಲ್, ಹಿಂದೂ ಜಾಗರಣ್ ಮಂಚ್ ನ ಸದಸ್ಯರು ಹಾಗೂ ಸ್ಥಳೀಯ ಕೌನ್ಸಿಲರ್ ಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೋಮು ಗಲಭೆಗೆ ಸಂಬಂಧಿಸಿದಂತೆ 84 ಮಂದಿಯನ್ನು ಬಂಧಿಸಲಾಗಿದೆ ಮತ್ತು ಏಳು ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಹಮದಾಬಾದ್ ವಲಯ ಪೊಲೀಸ್ ಮಹಾ ನಿರ್ದೇಶಕ ಎಕೆ ಜಡೆಜಾ ಅವರು ಹೇಳಿದ್ದಾರೆ.

ಭಾನುವಾರ ಆರಂಭವಾದ ಹಿಂಸಾಚಾರದಲ್ಲಿ ಕನಿಷ್ಠ 20 ಮನೆಗಳಿಗೆ ಹಾಗೂ ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿವಿಧ ದೇಶಗಳ ಮೇಲೆ ಟ್ರಂಪ್ ವಿಧಿಸಿದ್ದ ಸುಂಕಗಳನ್ನು ರದ್ದುಗೊಳಿಸಿದ ಅಮೆರಿಕ ಸುಪ್ರೀಂ ಕೋರ್ಟ್

"ನನ್ನನ್ನು ರಾಜಕೀಯವಾಗಿ ಮುಗಿಸಿಬಿಟ್ಟರೆ ಅವರ ಹಾದಿ ಸುಗಮ": ಚರ್ಚೆಗೆ ಗ್ರಾಸವಾದ CM ಸಿದ್ದರಾಮಯ್ಯ ಪೋಸ್ಟ್

T20 World Cup: ಆಸೀಸ್‌ಗೆ ಗೆಲುವಿನ ವಿದಾಯ; ಓಮನ್ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಜಯ

KAS ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿಸಿ ಅಪಪ್ರಚಾರ ಆರೋಪ: ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನ

'ಡಾಕ್ಟರ್' ಪರೀಕ್ಷೆ ವೇಳೆ ಕಾಪಿ; ರೆಡ್ ಹ್ಯಾಂಡ್ ಆಗಿ ಹಿಡಿದ ಪ್ರಾಧ್ಯಾಪಕರ ಮೇಲೇ ಹಲ್ಲೆ! Video

SCROLL FOR NEXT