ಸಂಗ್ರಹ ಚಿತ್ರ 
ದೇಶ

ಸರೊಗಸಿ ನಿಯಂತ್ರಣ ಮಸೂದೆಗೆ ಕೇಂದ್ರ ಸಂಪುಟ ಒಪ್ಪಿಗೆ

ರಾಜ್ಯಸಭೆ  ಆಯ್ಕೆ ಸಮಿತಿಯ ಶಿಫಾರಸುಗಳನ್ನು ಸೇರಿಸಿದ ನಂತರ ಬಾಡಿಗೆ ತಾಯ್ತನ- ಸರೊಗಸಿ (ನಿಯಂತ್ರಣ) ಮಸೂದೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

ನವದೆಹಲಿ: ರಾಜ್ಯಸಭೆ  ಆಯ್ಕೆ ಸಮಿತಿಯ ಶಿಫಾರಸುಗಳನ್ನು ಸೇರಿಸಿದ ನಂತರ ಬಾಡಿಗೆ ತಾಯ್ತನ- ಸರೊಗಸಿ (ನಿಯಂತ್ರಣ) ಮಸೂದೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.

"ರಾಜ್ಯಸಭೆಯ ಆಯ್ಕೆ ಸಮಿತಿಯ ಶಿಫಾರಸುಗಳನ್ನು ಒಳಗೊಂಡ ಸರೊಗಸಿ ನಿಯಂತ್ರಣ ಮಸೂದೆಯನ್ನು ಕ್ಯಾಬಿನೆಟ್ ಅಂಗೀಕರಿಸಿದೆ" ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಸಂಸದೀಯ ಸಮಿತಿಯು ನಿಕಟ ಸಂಬಂಧಿಗಳು ಂಆತ್ರವಲ್ಲದೆ  "ಸಿದ್ಧರಿರುವ" ಯಾವುದೇ ಮಹಿಳೆಗೆ ಬಾಡಿಗೆ ತಾಯಿಯಾಗಿ ಗಿ ಕಾರ್ಯನಿರ್ವಹಿಸಲು ಅವಕಾಶ ನೀಡಬೇಕು ಎಂದು ಶಿಫಾರಸು ಮಾಡಿತ್ತು.

ಸರೊಗಸಿ (ನಿಯಂತ್ರಣ) ಮಸೂದೆ, 2019 ಕ್ಕೆ ರಾಜ್ಯಸಭೆಯ 23 ಸದಸ್ಯರ ಆಯ್ಕೆ ಸಮಿತಿಯು ಸೂಚಿಸಿದ 15 ಪ್ರಮುಖ ಬದಲಾವಣೆಗಳನ್ನು ಸೇರಿಸಿದೆ.ಜತೆಗೆ  "ಬಂಜೆತನ" ದ ವ್ಯಾಖ್ಯಾನವನ್ನು ಅಳಿಸಿಹಾಕಿದ್ದು ಐದು ವರ್ಷಗಳ ಅಸುರಕ್ಷಿತ ಸಂಭೋಗದ ನಂತರ ಗರ್ಭಧರಿಸಲು ಅಸಮರ್ಥ ಎಂಬ ಪದಗುಚ್ಚಗಳನ್ನು ಕೈಬಿಟ್ಟಿದೆ, ದಂಪತಿಗಳು ಒಂದು ಮಗುವಿಗಾಗಿ ಕಾಯುವ ಈ ಅವಧಿ ಅತ್ಯಂತ ಸುದೀರ್ಘವಾದದ್ದೆಂದು ಸಮಿತಿ ಭಾವಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT