ಕೋರೋನಾ ಭೀತಿ: ಜಪಾನ್ ಹಡಗಿನಲ್ಲಿದ್ದ ಕಾರವಾರದ ಯುವಕ ಸೇರಿ 119 ಭಾರತೀಯರು ತವರಿಗೆ ಆಗಮನ 
ದೇಶ

ಕೋರೋನಾ ಭೀತಿ: ಜಪಾನ್ ಹಡಗಿನಲ್ಲಿದ್ದ ಕಾರವಾರದ ಯುವಕ ಸೇರಿ 119 ಭಾರತೀಯರು ತವರಿಗೆ ಆಗಮನ

ಕೋರೋವಾ ವೈರಸ್ ಸೋಂಕಿನ ಆತಂಕದಿಂದಾಗಿ ಜಪಾನಿನ ಯುಕೋಮಾದಲ್ಲಿ ತಡೆಹಿಡಿಯಲ್ಪಟ್ಟಿರುವ ಹಡಗಿನಲ್ಲಿದ್ದ ಕಾರವಾರದ ಯುವಕ ಅಭಿಷೇಕ್ ಸೇರಿ 119 ಭಾರತೀಯರನ್ನು ಜಪಾನ್ ಸರ್ಕಾರ ಬಿಡುಗಡೆ ಮಾಡಿದ್ದು, ಗುರುವಾರ ತವರಿಗೆ ಬಂದಿಳಿದಿದ್ದಾರೆ. 

ನವದೆಹಲಿ: ಕೋರೋವಾ ವೈರಸ್ ಸೋಂಕಿನ ಆತಂಕದಿಂದಾಗಿ ಜಪಾನಿನ ಯುಕೋಮಾದಲ್ಲಿ ತಡೆಹಿಡಿಯಲ್ಪಟ್ಟಿರುವ ಹಡಗಿನಲ್ಲಿದ್ದ ಕಾರವಾರದ ಯುವಕ ಅಭಿಷೇಕ್ ಸೇರಿ 119 ಭಾರತೀಯರನ್ನು ಜಪಾನ್ ಸರ್ಕಾರ ಬಿಡುಗಡೆ ಮಾಡಿದ್ದು, ಗುರುವಾರ ತವರಿಗೆ ಬಂದಿಳಿದಿದ್ದಾರೆ. 

ಕೊರೋನಾ ಸೋಂಕು ತಗುಲಿಲ್ಲ ಎಂಬುದು ದೃಢಪಟ್ಟ ಹಿನ್ನೆಲೆಯಲ್ಲಿ ಶ್ರೀಲಂಕಾ, ನೇಪಾಳ, ದಕ್ಷಿಣ ಆಫ್ರಿಕಾ ಹಾಗೂ ಪೆರು ರಾಷ್ಟ್ರಗಳ ಐವರು ವಿದೇಶಿಯರು ಹಾಗೂ 119 ಭಾರತೀಯರನ್ನು ಬಿಡುಗಡೆ ಮಾಡಲಾಗಿದೆ. ಬಿಡುಗಡೆಯಾಗಿರುವ ಎಲ್ಲಾ ಭಾರತೀಯರು ಇಂದು ಬೆಳಿಗ್ಗೆ 4.30ರ ಸುಮಾರಿಗೆ ರಾಜಧಾನಿ ದೆಹಲಿಗೆ ಬಂದಿಳಿದಿದ್ದಾರೆಂದು ವಿದೇಶಾಂಗ ಸಚಿವ ಎಸ್,ಜೈಶಂಕರ್ ಹೇಳಿದ್ದಾರೆ. ಅಲ್ಲದೆ, ಭಾರತೀಯ ಸ್ಥಳಾಂತರಕ್ಕೆ ಸಹಾಯ ಮಾಡಿದ ಜಪಾನ್ ಅಧಿಕಾರಿಗಳಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. 

ಡೈಮಂಡ್ ಪ್ರಿನ್ಸಸ್ ಹೆಸರಿನ ಕ್ರೂಸ್ ಹಡಗಿನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರವಾರದ ಪದ್ಮನಾಭನಗರದ ಯುವಕ ಅಭಿಷೇಕ್ ಸೇರಿ ಒಟ್ಟು 119ಮಂದಿ ಭಾರತೀಯರನ್ನು ಹೊರ ಬಿಡಲಾಗಿದೆ. ಅಭಿಷೇಕ್ ಕಳೆದ ಮೂರು ತಿಂಗಳಿಂದ ಡೈಮಂಡ್ ಪ್ರಿನ್ಸಸ್ ಹಡಗಿನ್ಲಿ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಹಡಗು ಚೀನಾದಿಂದ ಜಪಾನ್'ಗೆ ತೆರಳುತ್ತಿತ್ತು. ಆದರೆ, ಕೊರೋನಾ ವೈರಸ್ ಆತಂಕದಿಂದ ಯುಕೋಮಾದಲ್ಲಿಯೇ ಫೆ.7ರಂದು ಜಪಾನ್ ಸರ್ಕಾರ ಕ್ರೂಸ್ ನ್ನು ತಡೆಹಿಡಿತ್ತು. 

20ಕ್ಕೂ ಹೆಚ್ಚು ದಿನಗಳಿಂದ ಈ ಹಡಗು ಯುಕೋಮಾದಲ್ಲಿಯೇ ಉಳಿದಿದೆ. ಜಪಾನ್ ಸರ್ಕಾರ ಹಡಗಿನಲ್ಲಿರುವ ಪ್ರಯಾಣಿಕರು, ಸಿಬ್ಬಂದಿಯನ್ನು ತಪಾಸಣೆಗೊಳಪಡಿಸಿದ್ದು, ಇವರಲ್ಲಿ ಅಭಿಷೇಕ್ ಸೇರಿ 119 ಮಂದಿ ಭಾರತೀಯರಿಗೆ ಸೋಂಕು ತಗುಲಿಲ್ಲ ಎಂಬುದು ಖಚಿತವಾಗಿದೆ. ಹಡಗಲ್ಲಿ 138 ಭಾತೀಯರು ಸೇರಿ 3,700 ಮಂದಿ ಇದ್ದರು. ಇರವಲ್ಲಿ 14 ಭಾರತೀಯರು ಸೇರಿ 700ಕ್ಕೂ ಹೆಚ್ಚು ಮಂದಿಗೆ ಕೋರೋನಾ ಸೋಂಕು ತಗುಲಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!