ಉತ್ತರ ಕರ್ನಾಟಕ ಜನತೆಗೆ ಭರ್ಜರಿ ಗಿಫ್ಟ್ ನೀಡಿದ ಕೇಂದ್ರ ಸರ್ಕಾರ: ಈಡೇರಿದ ಬಹುದಿನಗಳ ಬೇಡಿಕೆ, ಕನಸು! 
ದೇಶ

ಉತ್ತರ ಕರ್ನಾಟಕ ಜನತೆಗೆ ಭರ್ಜರಿ ಗಿಫ್ಟ್ ನೀಡಿದ ಕೇಂದ್ರ ಸರ್ಕಾರ: ಈಡೇರಿದ ಬಹುದಿನಗಳ ಬೇಡಿಕೆ

ಉತ್ತರ ಕರ್ನಾಟಕ ಭಾಗದ ಜನತೆಯ ಬಹುದಿನಗಳ, ಬೇಡಿಕೆ, ಕನಸು ಈಡೇರಿದ್ದು, ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. 

ನವದೆಹಲಿ: ಉತ್ತರ ಕರ್ನಾಟಕ ಭಾಗದ ಜನತೆಯ ಬಹುದಿನಗಳ, ಬೇಡಿಕೆ, ಕನಸು ಈಡೇರಿದ್ದು, ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. 

ಸುಪ್ರೀಂ ಕೋರ್ಟ್ ತೀರ್ಪಿಗೆ ಅನುಗುಣವಾಗಿ ಕೇಂದ್ರ ಸರ್ಕಾರ ಫೆ.27 ರಂದು ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಿದೆ. 

ಅಧಿಸೂಚನೆ ಬಂದಿರುವ ಪರಿಣಾಮ ರಾಜ್ಯಕ್ಕೆ ಹಂಚಿಕೆಯಾಗಿದ್ದ 13.5 ಟಿಎಂಸಿ ನೀರನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ. 
ಮಹದಾಯಿ ನದಿ ಕಣಿವೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಯೋಜನೆಗಳ ಕಾಮಗಾರಿ ಮತ್ತು ಜಲ ವಿದ್ಯುತ್ ಯೋಜನೆಗಳ ಕಾಮಗಾರಿಗಳನ್ನು ಆರಂಭಿಸಬಹುದಾಗಿದೆ.

13.5 ಟಿಎಂಸಿ ಪೈಕಿ ಮಹದಾಯಿಯಿಂದ ಮಲಪ್ರಭೆಗೆ ಕುಡಿಯುವ ನೀರಿಗಾಗಿ 4 ಟಿಎಂಸಿ ನೀರು ಹರಿಸಲು ಒಪ್ಪಿಗೆ ಸೂಚಿಸಲಾಗಿದೆ. ಬಂಡೂರಿ ಯೋಜನೆಗೆ ಒಟ್ಟು 2.18 ಟಿಎಂಸಿ, ಕಳಸಾ ಯೋಜನೆಗೆ 1.72 ಟಿಎಂಸಿ, ಜಲ ವಿದ್ಯುತ್ ಯೋಜನೆಗೆ ಒಟ್ಟು 8.02 ಟಿಎಂಸಿ ನೀರು ಮಹದಾಯಿ ನದಿ ಕಣಿವೆಯಲ್ಲಿ ಬಳಸಲು 1.5 ಟಿಎಂಸಿ ನೀರು ಹಂಚಿಕೆ ಮಾಡಲಾಗಿದೆ. 

ಅಧಿಸೂಚನೆ ಹೊರಡಿಸಿದ ಬೆನ್ನಲ್ಲೇ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಕೇಂದ್ರ ಸರ್ಕಾರಕ್ಕೆ ಧನ್ಯವಾದ ತಿಳಿಸಿ ಟ್ವೀಟ್ ಮಾಡಿದ್ದಾರೆ. ಮಹದಾಯಿ ವಿಷಯದ್ಲಲಿ ನಾನು ನನ್ನ ಪ್ರಾಮಾಣಿಕವಾದ ಪ್ರಯತ್ನವನ್ನು ಮಾಡಿದ್ದು ನನಗೆ ತುಂಬಾ ಹರ್ಷವನ್ನು ತಂದಿದೆ. ಪ್ರಧಾನಿ ನರೇಂದ್ರ ಮೋದಿ ಹಾಗು ಗಜೇಂದ್ರಸಿಂಗ್ ಶೇಖಾವತ್ ಅವರಿಗೆ ಅನಂತ ಅನಂತ ಧನ್ಯವಾದಗಳನ್ನು ಹೇಳಬಯಸುತ್ತೇನೆ ಎಂದು ಜೋಷಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT