ದೆಹಲಿ ಹಿಂಸಾಚಾರ: ಪೊಲೀಸರ ತರಾಟೆಗೆ ತೆಗೆದುಕೊಂಡದ್ದ ಜಸ್ಟಿಸ್ ಎಸ್.ಮುರಳೀಧರ್ ವರ್ಗಾವಣೆ 
ದೇಶ

ದೆಹಲಿ ಹಿಂಸಾಚಾರ: ಪೊಲೀಸರ ತರಾಟೆಗೆ ತೆಗೆದುಕೊಂಡಿದ್ದ ಜಸ್ಟಿಸ್ ಎಸ್.ಮುರಳೀಧರ್ ವರ್ಗಾವಣೆ

ದೆಹಲಿ ಹಿಂಸಾಚಾರ ಪ್ರಕರಣಗಳನ್ನು ವಿಚಾರಣೆ ನಡೆಸಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದ ದೆಹಲಿ ಹೈಕೋರ್ಟ್ ನ್ಯಾಯಾಧೀಶ ಜಸ್ಟಿಸ್ ಎಸ್.ಮುರಳೀಧರ್ ಅವರನ್ನು ಬುಧವಾರ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್'ಗೆ ವರ್ಗಾವಣೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ. 

ನವದೆಹಲಿ: ದೆಹಲಿ ಹಿಂಸಾಚಾರ ಪ್ರಕರಣಗಳನ್ನು ವಿಚಾರಣೆ ನಡೆಸಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದ ದೆಹಲಿ ಹೈಕೋರ್ಟ್ ನ್ಯಾಯಾಧೀಶ ಜಸ್ಟಿಸ್ ಎಸ್.ಮುರಳೀಧರ್ ಅವರನ್ನು ಬುಧವಾರ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್'ಗೆ ವರ್ಗಾವಣೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ. 

ಈಶಾನ್ಯ ದೆಹಲಿಯಲ್ಲಿ ಗಲಭೆಗಳು ಸಂಭವಿಸುವ ಹಲವು ದಿನಗಳ ಮೊದಲು ಸುಪ್ರೀಂಕೋರ್ಟ್ ಕೊಲಿಜಿಯಂ ಇದನ್ನು ಶಿಫಾರಸು ಮಾಡಿದ್ದರಿಂದ ಇದು ವಾಡಿಕೆಯ ವರ್ಗಾವಣೆಯೆಂದು ಹೇಳಲಾಗುತ್ತಿದೆ. 

ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ಅವರೊಂದಿಗೆ ಸಮಾಲೋಚಿಸಿದ ನಂತರ ರಾಷ್ಟ್ರಪತಿ ರಾಮನಾಥ್ ಕೋವಿಂದ್, ದೆಹಲಿ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಎಸ್. ಮುರಳೀಧರ್ ಅವರನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನ್ಯಾಯಾಧೀಶರನ್ನಾಗಿ ವರ್ಗಾಯಿಸಿದ್ದಾರೆಂದು ಸರ್ಕಾರ ಅಧಿಸೂಚನೆಯಲ್ಲಿ ತಿಳಿಸಿದೆ.

ಫೆ.12ರಂದು ನಡೆದ ಸಭೆಯಲ್ಲಿ ನ್ಯಾಯಮೂರ್ತಿ ಮುರಳೀಧರ್ ಅವರನ್ನು ದೆಹಲಿ ಹೈಕೋರ್ಟ್ ನಿಂದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್'ಗೆ ವರ್ಗಾಯಿಸಲು ಉನ್ನತ ನ್ಯಾಯಾಲಯದ ಕೊಲಿಜಿಯಂ ಶಿಫಾರಸು ಮಾಡಿತ್ತು. ದೆಹಲಿ ಹೈಕೋರ್ಟಿನ ಮೂರನೇ ಅತ್ಯಂತ ಹಿರಿಯ ನ್ಯಾಯಾಧೀಶರಾಗಿರುವ ಹಾಗೂ ದಿಟ್ಟ ತೀರ್ಪುಗಳನ್ನು ನೀಡುವವರೆದು ಮುರಳೀಧರ್ ಅವರು ಖ್ಯಾತರಾಗಿದ್ದಾರೆ. 

ಇನ್ನು ದೆಹಲಿ ಹೈಕೋರ್ಟ್ ಬಾರ್ ಅಸೋಸಿಯೇಷನ್ ನ್ಯಾಯಾಧೀಶರ ವರ್ಗಾವಣೆ ಪ್ರಸ್ತಾಪವನ್ನು ಈ ಹಿಂದೆಯೇ ಖಂಡಿಸಿತ್ತು. ಇದೀಗ ಸುಪ್ರೀಂಕೋರ್ಟ್ ಕೊಲಿಜಿಯಂ ನಿಂದ ಅತ್ಯುತ್ತಮ ನ್ಯಾಯಾಧೀಶರೊಬ್ಬರು ವರ್ಗಾವಣೆಗೊಂಡಿದ್ದಾರೆಂದು ಬಾರ್ ಅಸೋಸಿಯೇಷನ್ ಬೇಸರ ವ್ಯಕ್ತಪಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಯೆಟ್ನಾಂ ದೋಣಿ ದುರಂತ: 15 ಭಾರತೀಯ ಪ್ರವಾಸಿಗರು ಸಾವು; ತಮಿಳುನಾಡು, ಆಂಧ್ರ ಮಂದಿ ಸಮುದ್ರಪಾಲು; Video

HMT ಆದಾಗ ನಾನು ಹುಟ್ಟಿರ್ಲಿಲ್ಲ, ನೀವೇನು? ಅರಣ್ಯ ಭೂಮಿ ಅಂತ ದಾಖಲೆ ತೋರಿಸಿ ಕುಮಾರಸ್ವಾಮಿಗೆ ಈಶ್ವರ್ ಖಂಡ್ರೆ ಟಾಂಗ್

ಪಾಕ್ ಉಗ್ರರ ರಣಬೇಟೆ: ಬಲೂಚಿಸ್ತಾನದಲ್ಲಿ 88 ಭಯೋತ್ಪಾದಕರ ಹತ್ಯೆ!

'10 Snakes' ಪೋಸ್ಟ್ ಗೆ ಶ್ರೇಷ್ಠ ಅಯ್ಯರ್‌ ಲೈಕ್, ಭಾರಿ ವಿವಾದಕ್ಕೆ ಗುರಿಯಾದ ಶ್ರೇಯಸ್ ಅಯ್ಯರ್! ನೆಟ್ಟಿಗರು ತೀವ್ರ ಚರ್ಚೆ

INS Mahendragiri: ಪ್ರಾಜೆಕ್ಟ್ 17A; ಕೇವಲ 18 ತಿಂಗಳಲ್ಲಿ 6ನೇ ಯುದ್ಧನೌಕೆ ನೌಕಾಪಡೆಗೆ ಸೇರ್ಪಡೆ; Video