ದೆಹಲಿ ಹಿಂಸಾಚಾರ 
ದೇಶ

ದೆಹಲಿ ಹಿಂಸಾಚಾರ: ಆ್ಯಪ್ ಬಳಸಿ ಆರ್'ಟಿಒ ಮೂಲಕ ಮಾಹಿತಿ ಪಡೆದು ದಾಳಿ ನಡೆಸುತ್ತಿದ್ದ ದುಷ್ಕರ್ಮಿಗಳು!

ತಂತ್ರಜ್ಞಾನವನ್ನು ಹೇಗೆಲ್ಲಾ ದುರ್ಬಳಕೆ ಮಾಡಿಕೊಳ್ಳಬಹುದು ಎಂಬುದಕ್ಕೆ ದೆಹಲಿ ಸಾಕ್ಷಿಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದಲ್ಲಿ ದುಷ್ಕರ್ಮಿಗಳು ತಮ್ಮ ಮೊಬೈಲ್ ನಲ್ಲಿ ಆ್ಯಪ್ ಬಳಕೆ ಮಾಡಿಕೊಂಡು ಆರ್'ಟಿಒ ಮೂಲಕ ಸಮುದಾಯಗಳ ತಿಳಿದು ಜನರ ವಾಹನಗಳ ಮೇಲೆ ದಾಳಿ ನಡೆಸುತ್ತಿದ್ದರು ಎಂಬ ಮಾಹಿತಿ ಇದೀಗ ಬಹಿರಂಗಗೊಂಡಿದೆ. 

ಹೈದರಾಬಾದ್: ತಂತ್ರಜ್ಞಾನವನ್ನು ಹೇಗೆಲ್ಲಾ ದುರ್ಬಳಕೆ ಮಾಡಿಕೊಳ್ಳಬಹುದು ಎಂಬುದಕ್ಕೆ ದೆಹಲಿ ಸಾಕ್ಷಿಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದಲ್ಲಿ ದುಷ್ಕರ್ಮಿಗಳು ತಮ್ಮ ಮೊಬೈಲ್ ನಲ್ಲಿ ಆ್ಯಪ್ ಬಳಕೆ ಮಾಡಿಕೊಂಡು ಆರ್'ಟಿಒ ಮೂಲಕ ಸಮುದಾಯಗಳ ತಿಳಿದು ಜನರ ವಾಹನಗಳ ಮೇಲೆ ದಾಳಿ ನಡೆಸುತ್ತಿದ್ದರು ಎಂಬ ಮಾಹಿತಿ ಇದೀಗ ಬಹಿರಂಗಗೊಂಡಿದೆ. 

ಪ್ರತಿಭಟನೆ ವೇಳೆ ಸ್ಥಳದಲ್ಲಿರುತ್ತಿದ್ದ ವಾಹನಗಳ ಸಂಖ್ಯೆಯನ್ನು ಆ್ಯಪ್ ನಲ್ಲಿ ಹುಡುಕಿ ವಾಹನದ ಮಾಲೀಕರ ಮಾಹಿತಿ ತಿಳಿದುಕೊಂಡು ವಾಹನಗಳ ಮೇಲೆ ದಾಳಿ ನಡೆಸುತ್ತಿದ್ದರು ಎಂದು ವರದಿಗಳಿಂದ ತಿಳಿದುಬಂದಿದೆ. 

ವಾಹನಗಳ ಮಾಹಿತಿ ತಿಳಿದುಕೊಳ್ಳಲು ಗೂಗಲ್ ಪ್ಲೇಸ್ಟೋರ್ನಲ್ಲಿ ಉಚಿತ ಆ್ಯಪ್ ಗಳು ಲಭ್ಯವಿದ್ದು, ಈ ಅ್ಯಪ್ ಗಳ ಮೂಲಕ ವಾಹನದ ಸಂಖ್ಯೆಯನ್ನು ನಮೂದಿಸಿದರೆ, ವಾಹನದ ಮಾಲೀಕರ ಮಾಹಿತಿ ಸುಲಭವಾಗಿ ಸಿಗುತ್ತದೆ. ಇದಲ್ಲದೆ ಬಳಕೆದಾರರಿಗೆ ಸುಲಭವಾಗಲು ಮತ್ತಷ್ಟು ಆ್ಯಪ್ ಗಳೂ ಲಭ್ಯವಿದ್ದು, ನಂಬರ್ ಪ್ಲೇಟ್ ಸ್ಕ್ಯಾನ್ ಮಾಡಿದರೂ ಕೂಡ ವಿವರಗಳು ಲಭ್ಯವಾಗಲಿವೆ. ಆದರೆ, ಈ ಆ್ಯಪ್ ಬಳಕೆಗೆ ಹಣನನ್ನು ವ್ಯಯಿಸಬೇಕಾಗಿರುತ್ತದೆ. 

ಗೂಗಲ್ ಪ್ಲೇಸ್ಟೋರ್ ನಲ್ಲಿ ದೊರಕುವ ಈ ಅಸಂಖ್ಯಾತ ಅಪ್ಲಿಕೇಶನ್ ಗಳು ಡೇಟಾ ಕ್ರಾಲಿಂಗ್ ಮೂಲಕ ಕಾನೂನು ಬಾಹಿರವಾಗಿ ಡೇಟಾವನ್ನು ಪಡೆದುಕೊಂಡಿದೆ. ಈ ವಿಧಾನವು ಡೇಟಾವನ್ನು ಸಂಗ್ರಹಿಸಲು ಇಂರ್ಟನೆಟ್ ಬೋಟ್ ನ್ನು ಸ್ವಯಂಚಾಲಿತವಾಗಿ ನೆಟ್ ಬ್ರೌಸ್ ಮಾಡಲು ಅನುಮತಿ ನೀಡುತ್ತವೆ ಎಂದು ಭದ್ರತಾ ಸಂಶೋಧಕ ಶ್ರೀನಿವಾಸ್ ಕೊಡಾಲಿ ಹೇಳಿದ್ದಾರೆ. 

ವಿಚಾರ ಗಂಭೀರವಾಗಿರುವ ಹಿನ್ನೆಲೆಯಲ್ಲಿ ದೆಹಲಿ ಮೂಲಕ ಇಂಟರ್ನೆಟ್ ಫ್ರೀಡಂ ಫೌಂಡೇಷನ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಈ ಕುರಿತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಕಂಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!