ಪ್ರಧಾನಿ ಮೋದಿ ಹಾಗೂ ಮ್ಯಾನ್ಮಾರ್ ಅಧ್ಯಕ್ಷ ಯು ವಿನ್ ಮೈಂಟ್ 
ದೇಶ

ಭಾರತ-ಮ್ಯಾನ್ಮಾರ್ ನಡುವೆ ವಿವಿಧ ಕ್ಷೇತ್ರಗಳ 10 ಒಪ್ಪಂದಗಳ ವಿನಿಮಯ

ಮೂಲಸೌಕರ್ಯ, ಇಂಧನ, ಸಂವಹನ ಮತ್ತು ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ 10 ಮಹತ್ವದ ಒಪ್ಪಂದಗಳನ್ನು ಭಾರತ ಮತ್ತು ಮ್ಯಾನ್ಮಾರ್‌ ಗುರುವಾರ ವಿನಿಮಯ ಮಾಡಿಕೊಂಡಿವೆ.

ನವದೆಹಲಿ: ಮೂಲಸೌಕರ್ಯ, ಇಂಧನ, ಸಂವಹನ ಮತ್ತು ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ 10 ಮಹತ್ವದ ಒಪ್ಪಂದಗಳನ್ನು ಭಾರತ ಮತ್ತು ಮ್ಯಾನ್ಮಾರ್‌ ಗುರುವಾರ ವಿನಿಮಯ ಮಾಡಿಕೊಂಡಿವೆ.
  
ಪ್ರಧಾನಿ ನರೇಂದ್ರ ಮೋದಿ ಹಾಗೂ ಮ್ಯಾನ್ಮಾರ್ ಅಧ್ಯಕ್ಷ ಯು ವಿನ್ ಮೈಂಟ್ ಅವರ ನಡುವೆ ಹೈದರಾಬಾದ್ ಹೌಸ್‌ನಲ್ಲಿ ನಡುವೆ ನಡೆದ ಮಾತುಕತೆ ನಂತರ ಒಪ್ಪಂದಗಳು ಮತ್ತು ಒಡಂಬಡಿಕೆಗಳಿಗೆ  ಸಹಿ ಹಾಕಲಾಯಿತು. ಉಭಯ ನಾಯಕರು ದ್ವಿಪಕ್ಷೀಯ ವಿಷಯಗಳ ಕುರಿತು ವ್ಯಾಪಕವಾದ ಚರ್ಚೆ ನಡೆಸಿದರು. ಯು ವಿನ್ ಮೈಂಟ್ ಅವರು ತಮ್ಮ ಪತ್ನಿ ಡಾ ಚೋ ಚೋ ಅವರೊಂದಿಗೆ ಭಾರತದ ನಾಲ್ಕು ದಿನಗಳ ಅಧಿಕೃತ ಭೇಟಿಗಾಗಿ ಬುಧವಾರ ಇಲ್ಲಿಗೆ ಆಗಮಿಸಿದ್ದಾರೆ. 
  
ನಿನ್ನೆ ಮ್ಯಾನ್ಮಾರ್ ಅಧ್ಯಕ್ಷರಿಗೆ ರಾಷ್ಟ್ರಪತಿ ಭವನದಲ್ಲಿ ಭವ್ಯ ಸ್ವಾಗತ ಕೋರಲಾಯಿತು.  ರಾಜ್‌ಘಾಟ್‌ಗೆ ಭೇಟಿ ನೀಡಿದ ಯು ವಿನ್ ಮೈಂಟ್ ದಂಪತಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಜೀ ಅವರಿಗೆ ಗೌರವ ನಮನ ಸಲ್ಲಿಸಿದರು. ಬಳಿಕ ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಅವರೊಂದಿಗೆ ಯು ವಿನ್ ಮೈಂಟ್ ಮಾತುಕತೆ ನಡೆಸಿದರು.  ಭಾರತ ಮತ್ತು ಮ್ಯಾನ್ಮಾರ್  ಧಾರ್ಮಿಕ, ಭಾಷೆ ಮತ್ತು ಜನಾಂಗೀಯ ಸಂಬಂಧಗಳನ್ನು ಹೊಂದಿವೆ. ಭಾರತದ ಗಡಿಯಲ್ಲಿರುವ ಮ್ಯಾನ್ಮಾರ್, ಆಗ್ನೇಯ ಏಷ್ಯಾಕ್ಕೆ ಹೆಬ್ಬಾಗಿಲು ಒದಗಿಸುವ ಏಕೈಕ ಆಸಿಯಾನ್ ದೇಶ ಮ್ಯಾನ್ಮಾರ್ ಆಗಿದೆ. 
  
ಮ್ಯಾನ್ಮಾರ್‌ನೊಂದಿಗೆ ಸಹಕಾರವನ್ನು ಹೆಚ್ಚಿಸಲು ಭಾರತವು ಒತ್ತು ನೀಡಿದೆ. ಭಾರತ, ಮ್ಯಾನ್ಮಾರ್‌ನ ಐದನೇ ಅತಿದೊಡ್ಡ ವ್ಯಾಪಾರ ಪಾಲುದಾರ ದೇಶವಾಗಿದ್ದು, ಸದ್ಯದ  ದ್ವಿಪಕ್ಷೀಯ ವ್ಯಾಪಾರ- ವಾಣಿಜ್ಯ ವಹಿವಾಟು 7 1.7 ಶತಕೋಟಿ ಡಾಲರ್ ನಷ್ಟಿದೆ.  ಮ್ಯಾನ್ಮಾರ್ ಅಧ್ಯಕ್ಷರು ಬೋಧ್ ಗಯಾ ಮತ್ತು ಆಗ್ರಾಕ್ಕೆ ಭೇಟಿ ನೀಡಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

SCROLL FOR NEXT