ಸುಬ್ರಮಣಿಯನ್ ಸ್ವಾಮಿ 
ದೇಶ

ಅಂಬೇಡ್ಕರ್-ಸಾವರ್ಕರ್ ಬಗ್ಗೆ ನೆಹರೂ ಹೊಟ್ಟೆಕಿಚ್ಚು ಪಡುತ್ತಿದ್ದರು: ಸುಬ್ರಮಣಿಯನ್ ಸ್ವಾಮಿ

ಮಾಜಿ ಪ್ರಧಾನಿ ಜವಹರ್ ಲಾಲ್ ನೆಹರು ಡಾ.ಬಿಆರ್ ಅಂಬೇಡ್ಕರ್ ಮತ್ತು ವೀರ್ ಸಾವರ್ಕರ್  ಅವರ ಬಗ್ಗೆ ಅಸೂಯೆ ಪಡುತ್ತಿದ್ದರು ಎಂದು ಬಿಜೆಪಿ ಮುಖಂಡ  ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ.

ಮುಂಬಯಿ:  ಮಾಜಿ ಪ್ರಧಾನಿ ಜವಹರ್ ಲಾಲ್ ನೆಹರು ಡಾ.ಬಿಆರ್ ಅಂಬೇಡ್ಕರ್ ಮತ್ತು ವೀರ್ ಸಾವರ್ಕರ್  ಅವರ ಬಗ್ಗೆ ಅಸೂಯೆ ಪಡುತ್ತಿದ್ದರು ಎಂದು ಬಿಜೆಪಿ ಮುಖಂಡ  ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ.

ನೆಹರು ಅವರಿಗೆ ಒಂದು ವಿಚಿತ್ರ ಕಾಯಿಲೆಯಿತ್ತು. ಯಾವಾಗಲೂ ಸದಾ ಬೇರೆಯವರ ಬಗ್ಗೆ ಅಸೂಯೆ ಪಡುತ್ತಿದ್ದರು, ಅಂಬೇಡ್ಕರ್ ಕೊಲಂಬಿಯಾಗೆ ತೆರಳಿ ಪಿಎಚ್ ಡಿ ಪಡೆದಿದ್ದರಿಂದ ಹೊಟ್ಟಿಕಿಚ್ಚು ಪಡುತ್ತಿದ್ದರು.

ಜೊತೆಗೆ ಕಾನೂನು ಪದವಿ ಪಡೆದು ವಾಪಸ್ ಬಂದರು, ಅವರು ಬಂದ ಮೇಲೆ ತಿದ್ದುಪಡಿ ಸಮಿತಿಗೆ ಅಧ್ಯಕ್ಷರಾಗಿ ನೇಮಕವಾದರು.  ಇದಾದ ನಂತರ ನೆಹರು ಕೇಂಬ್ರಿಡ್ಜ್ ಗೆ ತೆರಳಿ ವಿಫಲರಾಗಿ ವಾಪಸಾದರು.

ವೀರ್ ಸಾವರ್ಕರ ಅವರ ಪುಣ್ಯ ಸ್ಮರಣೆ  ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಸ್ವಾಮಿ,  ನೆಹರು ಸಾವರ್ಕರ್ ಅವರ ಬಗ್ಗೆಯೂ ಅಸೂಯೆ ಹೊಂದಿದ್ದರು, ಸಾವರ್ಕರ್ ಒಬ್ಬ ಪಂಡಿತ. ನೆಹರು ತಮ್ಮ ಹೆಸರಿನ ಮುಂದೆ ತಾವೇ ಪಂಡಿತ ಎಂದು ಸೇರಿಸಿಕೊಂಡರು ಎಂದ ಹೇಳಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT