ಸಾರ್ವಕರ್ 
ದೇಶ

ಸಾರ್ವಕರ್ ಬಗ್ಗೆ ಬಿಜೆಪಿ, ಆರ್ ಎಸ್ ಎಸ್ ತೋರಿಸುವುದು ನಕಲಿ ಪ್ರೀತಿ: ಶಿವಸೇನೆ

ಮಹಾ ವಿಕಾಸ್ ಆಘಾದಿ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿರುವುದಕ್ಕೆ  ಕೇಸರಿ ಪಕ್ಷವನ್ನು ಟೀಕಿಸಿರುವ ಆಡಳಿತರೂಢ ಶಿವಸೇನಾ, ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ವಿನಾಯಕ ದಾಮೋದರ್ ಸಾರ್ವಕರ್  ಅವರ ಬಗ್ಗೆ ಬಿಜೆಪಿ, ಆರ್ ಎಸ್ ತೋರಿಸುವುದು ನಕಲಿ ಪ್ರೀತಿ ಎಂದು ವಾಗ್ದಾಳಿ ನಡೆಸಿದೆ.

ಮುಂಬೈ: ಮಹಾ ವಿಕಾಸ್ ಆಘಾದಿ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿರುವುದಕ್ಕೆ  ಕೇಸರಿ ಪಕ್ಷವನ್ನು ಟೀಕಿಸಿರುವ ಆಡಳಿತರೂಢ ಶಿವಸೇನಾ, ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ವಿನಾಯಕ ದಾಮೋದರ್ ಸಾರ್ವಕರ್  ಅವರ ಬಗ್ಗೆ ಬಿಜೆಪಿ, ಆರ್ ಎಸ್ ತೋರಿಸುವುದು ನಕಲಿ ಪ್ರೀತಿ ಎಂದು ವಾಗ್ದಾಳಿ ನಡೆಸಿದೆ.

ಸ್ವಾತಂತ್ರ್ಯ ಸಂಗ್ರಾಮದ ವೇಳೆಯಲ್ಲಿ ಬಿಜೆಪಿ ಏಲ್ಲಿ ಇತ್ತು? ಭಾರತ ಸ್ವಾತಂತ್ರ್ಯ ಗಳಿಸಿದಾಗ ಆರ್ ಎಸ್ ಎಸ್ ನ್ನು ಸರ್ದಾರ್ ಪಟೇಲ್ ಎರಡು ಬಾರಿ ನಿಷೇಧಿಸಿದ್ದರು. ಆ ಸಂದರ್ಭದಲ್ಲಿ ಆರ್ ಎಸ್ ಎಸ್ ತನ್ನ ಮುಖ್ಯ ಕಚೇರಿಯ ಮೇಲೆ ಧ್ವಜಾರೋಹಣ ಮಾಡಿರಲಿಲ್ಲ ಎಂದು ಶಿವಸೇನಾ ಮುಖವಾಣಿ ಸಾಮ್ನಾದಲ್ಲಿ ತೀವ್ರವಾಗಿ ಟೀಕಿಸಲಾಗಿದೆ.

ರಾಷ್ಟ್ರ ಧ್ವಜವನ್ನು ಆರ್ ಎಸ್ ಎಸ್ ಕಚೇರಿ ಮೇಲೆ ಹಾರಾಟ ನಡೆಸಬೇಕೆಂಬ ಒಂದು ಷರತ್ತಿನೊಂದಿಗೆ ಸರ್ದಾರ್ ಪಟೇಲ್ ನಿಷೇಧವನ್ನು ತೆಗೆದರು. ಹಾಗೆಯೇ ಮಾಡುತ್ತೇವೆ ಆದರೆ, 2002ರವರೆಗೂ ಸರ್ಕಾರದ ಆದೇಶವನ್ನು ಪಾಲಿಸುವುದಿಲ್ಲ ಎಂದು ಆರ್ ಎಸ್ ಎಸ್ ಮುಖ್ಯಸ್ಥ ಗೋಲ್ವಾಲ್ಕರ್  ಬರೆದುಕೊಟ್ಟಿದ್ದರು ಎಂದು ಸಾಮ್ನಾ ಸಂಪಾದಕೀಯದಲ್ಲಿ ಉಲ್ಲೇಖಿಸಲಾಗಿದೆ. 

ಮಹಾ ವಿಕಾಸ್ ಆಘಾದಿ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ಪಿತೂರಿ ನಡೆಸುತ್ತಿದೆ ಎಂದು ಶಂಕೆ ವ್ಯಕ್ತಪಡಿಸಿರುವ  ಶಿವಸೇನಾ, ಇದರಲ್ಲಿ ಬಿಜೆಪಿ ಯಶಸ್ವಿಯಾಗುವುದಿಲ್ಲ ಎಂದಿದೆ. ರಾಷ್ಟ್ರಧ್ವಜವನ್ನು ಹಾರಿಸಲು ಸಾಧ್ಯವಿಲ್ಲದವರು ತಮ್ಮನ್ನು ರಾಷ್ಟ್ರ ವಿರೋಧಿಗಳು ಎಂದು ಕರೆದುಕೊಳ್ಳಬೇಕಾಗಿದೆ. ಸಾರ್ವಕರ್ ಅವರನ್ನು ಗುರಾಣಿಯಾಗಿ ಬಿಜೆಪಿ ಬಳಸಬಾರದು, ಶಿವಸೇನಾ ರಾಷ್ಟ್ರಧ್ವಜದಂತೆ ಕೇಸರಿ ಧ್ವಜವನ್ನು ಹಾರಿಸುತ್ತದೆ ಎಂದು ಸಾಮ್ನಾದಲ್ಲಿ ಹೇಳಲಾಗಿದೆ.

ಆದಾಗ್ಯೂ, ಮರಾಠಿ ಭಾಷೆ ಬಗ್ಗೆ ಸಾರ್ವಕರ್ ಅವರಿಗೆ ಇದ್ದ ಬದ್ಧತೆಯನ್ನು ಶಿವಸೇನಾ ಶ್ಲಾಘಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT