ದೆಹಲಿ ಹಿಂಸಾಚಾರದ ನಂತರದ ದೃಶ್ಯ 
ದೇಶ

ದೆಹಲಿ ಹಿಂಸಾಚಾರ: ಸಾವಿನ ಸಂಖ್ಯೆ 42ಕ್ಕೆ ಏರಿಕೆ, ಅರೆಸೇನಾಪಡೆ ನಿಯೋಜನೆ, ಸಹಜಸ್ಥಿತಿಯತ್ತ ರಾಷ್ಟ್ರ ರಾಜಧಾನಿ

ಈಶಾನ್ಯ ದೆಹಲಿಯಲ್ಲಿ ಭುಗಿಲೆದ್ದಿರುವ ಹಿಂಸಾಚಾರದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ ಶುಕ್ರವಾರ 42ಕ್ಕೆ ಏರಿಕೆಯಾಗಿದ್ದು, ಗಲಭೆ ಪೀಡಿತ ಪ್ರದೇಶಗಳಲ್ಲಿ ಅರೆ ಸೇನಾಪಡೆಗಳನ್ನು ನಿಯೋಜಿಸಲಾಗಿದೆ.

ನವದೆಹಲಿ: ಈಶಾನ್ಯ ದೆಹಲಿಯಲ್ಲಿ ಭುಗಿಲೆದ್ದಿರುವ ಹಿಂಸಾಚಾರದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ ಶುಕ್ರವಾರ 42ಕ್ಕೆ ಏರಿಕೆಯಾಗಿದ್ದು, ಗಲಭೆ ಪೀಡಿತ ಪ್ರದೇಶಗಳಲ್ಲಿ ಅರೆ ಸೇನಾಪಡೆಗಳನ್ನು ನಿಯೋಜಿಸಲಾಗಿದೆ.

ಈ ಕುರಿತಂತೆ ದೆಹಲಿ ಆರೋಗ್ಯ ಇಲಾಖೆ ಶುಕ್ರವಾರ ಮಾಹಿತಿ ನೀಡಿದ್ದು, ಹಿಂಸಾಚಾರದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ್ದವರ ಪೈಕಿ ಹಲವರು ಮೃತರಾಗಿದ್ದಾರೆ ಎಂದು ತಿಳಿಸಿದ್ದಾರೆ. ಆ ಮೂಲಕ ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 42ಕ್ಕೆ ಏರಿಕೆಯಾದಂತಾಗಿದೆ.

ಪ್ರಸ್ತುತ ದೆಹಲಿ ಶಾಂತಿಯುತವಾಗಿದ್ದು, ಹಿಂಸಾಚಾರ ಪೀಡಿತ ಪ್ರದೇಶಗಳೂ ಕೂಡ ಸಹಜಸ್ಥಿತಿಯತ್ತ ಮರಳುತ್ತಿವೆ. ಅಂಗಡಿ ಮುಂಗಟ್ಟುಗಳನ್ನು ತೆರೆಯಲಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಸರಿ ಸುಮಾರು 7000ಕ್ಕೂ ಅಧಿಕ ಪ್ಯಾರಾಮಿಲಿಟರಿ ಪಡೆಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ. 

ಅಲ್ಲದೆ ನೂರಾರು ಪೊಲೀಸರು ಹಿಂಸಾಚಾರಕ್ಕೆ ತುತ್ತಾಗಿದ್ದ ಈಶಾನ್ಯ ದೆಹಲಿಯ ಜಾಫ್ರಾಬಾದ್, ಮೌಜ್‌ಪುರ, ಚಂದ್ ಬಾಗ್, ಖುರೇಜಿ ಖಾಸ್ ಮತ್ತು ಭಜನ್‌ಪುರ್ ನಲ್ಲಿ ಮೊಕ್ಕಾಂ ಹೂಡಿದ್ದು, ಶಾಂತಿ ಸುವ್ಯವಸ್ಥೆಯ ಪಾಲನೆಯಲ್ಲಿ ತೊಡಗಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT