ಹಿಂಸಾಚಾರ ನಂತರದ ದೃಶ್ಯ 
ದೇಶ

ದೆಹಲಿ ಹಿಂಸಾಚಾರ: ಇಂದು 10 ಗಂಟೆಗಳ ಕಾಲ ನಿಷೇಧಾಜ್ಞೆ ಸಡಿಲಿಕೆ

ಕಳೆದ 36 ಗಂಟೆಗಳಲ್ಲಿ ಈಶಾನ್ಯ ದೆಹಲಿಯಲ್ಲಿ ಯಾವುದೇ ಅಹಿತಕರ ಘಟನೆ ಕಂಡುಬರದ ಹಿನ್ನೆಲೆಯಲ್ಲಿ ಸೆಕ್ಷನ್ 144ರಡಿಯಲ್ಲಿ ಹೇರಲಾಗಿದ್ದ ನಿಷೇಧಾಜ್ಞೆಯನ್ನು ಶುಕ್ರವಾರ 10 ಗಂಟೆಗಳ ಕಾಲ ಸಡಿಲಿಸಲಾಗುವುದು ಎಂದು ಗೃಹ ಸಚಿವಾಲಯ ತಿಳಿಸಿದೆ.

ನವದೆಹಲಿ:ಕಳೆದ 36 ಗಂಟೆಗಳಲ್ಲಿ ಈಶಾನ್ಯ ದೆಹಲಿಯಲ್ಲಿ ಯಾವುದೇ ಅಹಿತಕರ ಘಟನೆ ಕಂಡುಬರದ ಹಿನ್ನೆಲೆಯಲ್ಲಿ ಸೆಕ್ಷನ್ 144ರಡಿಯಲ್ಲಿ ಹೇರಲಾಗಿದ್ದ ನಿಷೇಧಾಜ್ಞೆಯನ್ನು ಶುಕ್ರವಾರ 10 ಗಂಟೆಗಳ ಕಾಲ ಸಡಿಲಿಸಲಾಗುವುದು ಎಂದು ಗೃಹ ಸಚಿವಾಲಯ ತಿಳಿಸಿದೆ.


ದೆಹಲಿ ಹಿಂಸಾಚಾರ ಮತ್ತು ಅಪಾರ ಸಾವು-ನೋವಿನ ಕುರಿತು ತನಿಖೆ ಪ್ರಗತಿಯಲ್ಲಿದ್ದು ಈ ಸಂಬಂಧ ಸುಮಾರು 514 ಶಂಕಿತರಲ್ಲಿ ಕೆಲವರನ್ನು ಬಂಧಿಸಲಾಗಿದ್ದು ಇನ್ನು ಕೆಲವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ, ಮುಂದಿನ ದಿನಗಳಲ್ಲಿ ಇನ್ನಷ್ಟು ಮಂದಿಯನ್ನು ಬಂಧಿಸುವ ಸಾಧ್ಯತೆಯಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ.


ಈಶಾನ್ಯ ದೆಹಲಿಯಲ್ಲಿನ ಹಿಂಸಾಚಾರ ಕುರಿತು ನಾಗರಿಕರು, ಮಾಧ್ಯಮ ಪ್ರತಿನಿಧಿಗಳು ಮುಂದೆ ಬಂದು ಹೇಳಿಕೆಗಳನ್ನು, ಫೋಟೋಗಳನ್ನು, ವಿಡಿಯೊಗಳನ್ನು ಹಂಚಿಕೊಳ್ಳುವಂತೆ ನಿನ್ನೆ ದೆಹಲಿ ಪೊಲೀಸರು ಮನವಿ ಮಾಡಿಕೊಂಡಿದ್ದರು. 

ಈಶಾನ್ಯ ದೆಹಲಿಯಲ್ಲಿ ಮೊನ್ನೆ ಫೆಬ್ರವರಿ 23ರಂದು ಸಿಎಎ ವಿರುದ್ಧ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಎರಡು ಗುಂಪುಗಳ ಮಧ್ಯೆ ತೀವ್ರ ಗಲಭೆ, ಕಲ್ಲುತೂರಾಟ ನಡೆದು ರಕ್ತಪಾತವಾಗಿ ಇದುವರೆಗೆ 38 ಜನ ಮೃತಪಟ್ಟಿದ್ದಾರೆ. ಅವರಲ್ಲಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಮತ್ತು ಗುಪ್ತಚರ ಇಲಾಖೆಯ ಅಧಿಕಾರಿ ಅಂಕಿತ್ ಶರ್ಮ ಕೂಡ ಸೇರಿದ್ದಾರೆ.ಸುಮಾರು 200 ಮಂದಿಗೆ ಗಂಭೀರ ಗಾಯಗಳಾಗಿವೆ.


ದೆಹಲಿ ಪೊಲೀಸ್ ಇಲಾಖೆಯ ಅಪರಾಧ ವಿಭಾಗದಡಿ ಎರಡು ವಿಶೇಷ ತನಿಖಾ ತಂಡವನ್ನು ತನಿಖೆಗೆ ನೇಮಿಸಲಾಗಿದೆ. ಈ ಘಟನೆಯನ್ನು ಯಾರಾದರೂ ಸ್ವತಃ ಕಂಡಿದ್ದರೆ, ಮೊಬೈಲ್ ನಲ್ಲಿ ಘಟನೆಯ ವಿಡಿಯೊ, ಫೋಟೋ ಹಿಡಿದಿದ್ದರೆ ಅಂತವರು ಮುಂದೆ ಬಂದು ಪೊಲೀಸರಿಗೆ ಹೇಳಿಕೆಗಳನ್ನು, ವಿಡಿಯೊ, ಫೋಟೋಗಳನ್ನು ಈಶಾನ್ಯ ದೆಹಲಿಯ ಡಿಸಿಪಿ ಕಚೇರಿಗೆ, ಸೀಲಂಪುರ್, ದೆಹಲಿ ಪೊಲೀಸ್ ಠಾಣೆಗಳಿಗೆ ಇನ್ನು ಏಳು ದಿನಗಳೊಳಗೆ ಕಚೇರಿ ಅವಧಿಯಲ್ಲಿ ನೀಡಬಹುದು ಎಂದು ಅಪರಾಧ ವಿಭಾಗದ ಹೆಚ್ಚುವರಿ ಅಧಿಕಾರಿ ಬಿ ಕೆ ಸಿಂಗ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT