ಹಿಂಸಾಚಾರ ನಂತರದ ದೃಶ್ಯ 
ದೇಶ

ದೆಹಲಿ ಹಿಂಸಾಚಾರ: ಇಂದು 10 ಗಂಟೆಗಳ ಕಾಲ ನಿಷೇಧಾಜ್ಞೆ ಸಡಿಲಿಕೆ

ಕಳೆದ 36 ಗಂಟೆಗಳಲ್ಲಿ ಈಶಾನ್ಯ ದೆಹಲಿಯಲ್ಲಿ ಯಾವುದೇ ಅಹಿತಕರ ಘಟನೆ ಕಂಡುಬರದ ಹಿನ್ನೆಲೆಯಲ್ಲಿ ಸೆಕ್ಷನ್ 144ರಡಿಯಲ್ಲಿ ಹೇರಲಾಗಿದ್ದ ನಿಷೇಧಾಜ್ಞೆಯನ್ನು ಶುಕ್ರವಾರ 10 ಗಂಟೆಗಳ ಕಾಲ ಸಡಿಲಿಸಲಾಗುವುದು ಎಂದು ಗೃಹ ಸಚಿವಾಲಯ ತಿಳಿಸಿದೆ.

ನವದೆಹಲಿ:ಕಳೆದ 36 ಗಂಟೆಗಳಲ್ಲಿ ಈಶಾನ್ಯ ದೆಹಲಿಯಲ್ಲಿ ಯಾವುದೇ ಅಹಿತಕರ ಘಟನೆ ಕಂಡುಬರದ ಹಿನ್ನೆಲೆಯಲ್ಲಿ ಸೆಕ್ಷನ್ 144ರಡಿಯಲ್ಲಿ ಹೇರಲಾಗಿದ್ದ ನಿಷೇಧಾಜ್ಞೆಯನ್ನು ಶುಕ್ರವಾರ 10 ಗಂಟೆಗಳ ಕಾಲ ಸಡಿಲಿಸಲಾಗುವುದು ಎಂದು ಗೃಹ ಸಚಿವಾಲಯ ತಿಳಿಸಿದೆ.


ದೆಹಲಿ ಹಿಂಸಾಚಾರ ಮತ್ತು ಅಪಾರ ಸಾವು-ನೋವಿನ ಕುರಿತು ತನಿಖೆ ಪ್ರಗತಿಯಲ್ಲಿದ್ದು ಈ ಸಂಬಂಧ ಸುಮಾರು 514 ಶಂಕಿತರಲ್ಲಿ ಕೆಲವರನ್ನು ಬಂಧಿಸಲಾಗಿದ್ದು ಇನ್ನು ಕೆಲವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ, ಮುಂದಿನ ದಿನಗಳಲ್ಲಿ ಇನ್ನಷ್ಟು ಮಂದಿಯನ್ನು ಬಂಧಿಸುವ ಸಾಧ್ಯತೆಯಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ.


ಈಶಾನ್ಯ ದೆಹಲಿಯಲ್ಲಿನ ಹಿಂಸಾಚಾರ ಕುರಿತು ನಾಗರಿಕರು, ಮಾಧ್ಯಮ ಪ್ರತಿನಿಧಿಗಳು ಮುಂದೆ ಬಂದು ಹೇಳಿಕೆಗಳನ್ನು, ಫೋಟೋಗಳನ್ನು, ವಿಡಿಯೊಗಳನ್ನು ಹಂಚಿಕೊಳ್ಳುವಂತೆ ನಿನ್ನೆ ದೆಹಲಿ ಪೊಲೀಸರು ಮನವಿ ಮಾಡಿಕೊಂಡಿದ್ದರು. 

ಈಶಾನ್ಯ ದೆಹಲಿಯಲ್ಲಿ ಮೊನ್ನೆ ಫೆಬ್ರವರಿ 23ರಂದು ಸಿಎಎ ವಿರುದ್ಧ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಎರಡು ಗುಂಪುಗಳ ಮಧ್ಯೆ ತೀವ್ರ ಗಲಭೆ, ಕಲ್ಲುತೂರಾಟ ನಡೆದು ರಕ್ತಪಾತವಾಗಿ ಇದುವರೆಗೆ 38 ಜನ ಮೃತಪಟ್ಟಿದ್ದಾರೆ. ಅವರಲ್ಲಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಮತ್ತು ಗುಪ್ತಚರ ಇಲಾಖೆಯ ಅಧಿಕಾರಿ ಅಂಕಿತ್ ಶರ್ಮ ಕೂಡ ಸೇರಿದ್ದಾರೆ.ಸುಮಾರು 200 ಮಂದಿಗೆ ಗಂಭೀರ ಗಾಯಗಳಾಗಿವೆ.


ದೆಹಲಿ ಪೊಲೀಸ್ ಇಲಾಖೆಯ ಅಪರಾಧ ವಿಭಾಗದಡಿ ಎರಡು ವಿಶೇಷ ತನಿಖಾ ತಂಡವನ್ನು ತನಿಖೆಗೆ ನೇಮಿಸಲಾಗಿದೆ. ಈ ಘಟನೆಯನ್ನು ಯಾರಾದರೂ ಸ್ವತಃ ಕಂಡಿದ್ದರೆ, ಮೊಬೈಲ್ ನಲ್ಲಿ ಘಟನೆಯ ವಿಡಿಯೊ, ಫೋಟೋ ಹಿಡಿದಿದ್ದರೆ ಅಂತವರು ಮುಂದೆ ಬಂದು ಪೊಲೀಸರಿಗೆ ಹೇಳಿಕೆಗಳನ್ನು, ವಿಡಿಯೊ, ಫೋಟೋಗಳನ್ನು ಈಶಾನ್ಯ ದೆಹಲಿಯ ಡಿಸಿಪಿ ಕಚೇರಿಗೆ, ಸೀಲಂಪುರ್, ದೆಹಲಿ ಪೊಲೀಸ್ ಠಾಣೆಗಳಿಗೆ ಇನ್ನು ಏಳು ದಿನಗಳೊಳಗೆ ಕಚೇರಿ ಅವಧಿಯಲ್ಲಿ ನೀಡಬಹುದು ಎಂದು ಅಪರಾಧ ವಿಭಾಗದ ಹೆಚ್ಚುವರಿ ಅಧಿಕಾರಿ ಬಿ ಕೆ ಸಿಂಗ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT