ಸಂಗ್ರಹ ಚಿತ್ರ 
ದೇಶ

ಕುಟುಂಬ ಕಲಹ: ಒಂದೇ ಕುಟುಂಬದ ನಾಲ್ವರು ನೇಣಿಗೆ ಶರಣು

ಉತ್ತರ ಪ್ರದೇಶದ ಸಾಹಿಬಾಬಾದ್ ಜಿಲ್ಲೆಯ ಪೊಲೀಸ್ ಠಾಣೆ ವ್ಯಾಪ್ತಿಯ ಅರ್ಥಲಾ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಸದಸ್ಯರು ಶುಕ್ರವಾರ ಬೆಳಿಗ್ಗೆ ಶವವಾಗಿ ಪತ್ತೆಯಾಗಿದ್ದಾರೆ.

ಗಾಜಿಯಾಬಾದ್: ಉತ್ತರ ಪ್ರದೇಶದ ಸಾಹಿಬಾಬಾದ್ ಜಿಲ್ಲೆಯ ಪೊಲೀಸ್ ಠಾಣೆ ವ್ಯಾಪ್ತಿಯ ಅರ್ಥಲಾ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಸದಸ್ಯರು ಶುಕ್ರವಾರ ಬೆಳಿಗ್ಗೆ ಶವವಾಗಿ ಪತ್ತೆಯಾಗಿದ್ದಾರೆ.

ಪೊಲೀಸ್ ಅಧೀಕ್ಷಕ (ನಗರ) ಮನೀಶ್ ಮಿಶ್ರಾ, ಘಟನೆಯನ್ನು ದೃಢೀಕರಿಸಿದ್ದಾರೆ. ಅರ್ಥಲಾ ಪ್ರದೇಶದ ಸಂಜಯ್ ನಗರ ಕಾಲೋನಿಯಲ್ಲಿರುವ ಮನೆಯೊಂದರಲ್ಲಿ ಯಾರೋ ಆತ್ಮಹತ್ಯೆ ಮಾಡಿಕೊಂಡಿರುವಾಗಿ ಮಾಹಿತಿ ಸಿಕ್ಕಿತು. ಮಾಹಿತಿಯ ಮೇರೆಗೆ ಪೊಲೀಸರು ಮನೆ ಬಳಿ ಹೋಗಿದ್ದಾರೆ ಮನೆ ಒಳಗಿನಿಂದ ಚಿಲಕ ಹಾಕಿದ್ದು, ಬಾಗಿಲು ಒಡೆದು ಒಳಗೆ ಪ್ರವೇಶಿಸಿದಾಗ, ಮನೆ ಯಜಮಾನ ಧೀರಜ್ ತ್ಯಾಗಿ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೃತರ ಪತ್ನಿ ಮತ್ತು ಇಬ್ಬರು ಮಕ್ಕಳ ಶವಗಳನ್ನು ಮತ್ತೊಂದು ಕೋಣೆಯಿಂದ ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣವು ಕುಟುಂಬ ಕಲಹದಿಂದ ಆಗಿರಬಹುದೆಂದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮನೆಯಲ್ಲಿ ಯಾವುದೇ ಆತ್ಮಹತ್ಯೆ ಪತ್ರ ಲಭ್ಯವಾಗಿಲ್ಲ. ಒಂದು ಕೋಣೆಯ ಗೋಡೆಯ ಮೇಲೆ ಮಾತ್ರ ಬರೆಯಲಾಗಿದೆ. ಮೃತರನ್ನು ಧೀರಜ್ ತ್ಯಾಗಿ, ಅವರ ಪತ್ನಿ ಕಾಜಲ್, ಮಗಳು ಏಕ್ತಾ ಮತ್ತು ಮಗ ಧ್ರುವ್ ಎಂದು ಗುರುತಿಸಲಾಗಿದೆ.

ಧೀರಜ್ ತ್ಯಾಗಿ ಮೊದಲು ಪತ್ನಿ ಮತ್ತು ಮಕ್ಕಳಿಗೆ ವಿಷ ನೀಡಿ ನಂತರ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಧೀರಜ್ ತ್ಯಾಗಿ ಮೂಲತಃ ಬಿಜ್ನೋರ್ ಜಿಲ್ಲೆಯ ನಯ ಗಾಂವ್ ಮೂಲದವರು ಎಂದು ತಿಳಿಸಿದ್ದಾರೆ. ಎಲ್ಲಾ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಇದು ನನ್ನ ಮನದ ಆಸೆ’: ಸಿಎಂ ಹುದ್ದೆ ತೊರೆದು ರಾಜ್ಯಸಭೆ ಪ್ರವೇಶ ಖಚಿತಪಡಿಸಿದ Nitish Kumar

'ರೇಪ್ ಮಾಡಿ ಅನ್ನೋನು ಯಾವ ಸೀಮೆ ನಾಯಕ'.. 'ಬಾಂಬ್ ಅಲ್ಲ.. ಇರಾನಿಯನ್ನರು Khamenei ಆಡಳಿತಕ್ಕೆ ಹೆಚ್ಚು ಭಯಪಡುತ್ತಾರೆ': ನಟಿ ಆಕ್ರೋಶ! VIDEO

ರಾಜ್ಯಸಭೆ ಚುನಾವಣೆಗೆ ಇಂದು ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ?: NDAಯಲ್ಲಿ ಮಹತ್ವದ ಬೆಳವಣಿಗೆ

T20 World Cup 2026: ಭಾರತದ ಸಂಭಾವ್ಯ ಪ್ಲೇಯಿಂಗ್ XI vs ಇಂಗ್ಲೆಂಡ್; ಕೋಚ್ ಗೌತಮ್ ಗಂಭೀರ್‌ಗೆ ಕಠಿಣ ಸವಾಲು

T20 ವಿಶ್ವಕಪ್ 2026: 8 ಸಿಕ್ಸರ್ 10 ಬೌಂಡರಿ.. ವೇಗದ ಶತಕ: ವಿಂಡೀಸ್ ದೈತ್ಯ chris gayle ದಾಖಲೆ ಮುರಿದ Finn Allen!

SCROLL FOR NEXT