ದೆಹಲಿ ಹಿಂಸಾಚಾರದ ನಂತರದ ದೃಶ್ಯ 
ದೇಶ

ದೆಹಲಿ ಹೊತ್ತಿ ಉರಿಯುವಾಗ ಅಮಿತ್ ಶಾ ಎಲ್ಲಿದ್ದರು?: ಶಿವಸೇನೆ ಪ್ರಶ್ನೆ 

ಈಶಾನ್ಯ ದೆಹಲಿಯಲ್ಲಿ ತೀವ್ರ ಹಿಂಸಾಚಾರ ನಡೆದು 38 ಮಂದಿ ಮೃತಪಟ್ಟು ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದಾಗ ಗೃಹ ಸಚಿವ ಅಮಿತ್ ಶಾ ಎಲ್ಲಿದ್ದರು, ಏನು ಮಾಡುತ್ತಿದ್ದರು ಎಂದು ಶಿವಸೇನೆ ಪ್ರಶ್ನೆ ಮಾಡಿದೆ.

ಮುಂಬೈ:ಈಶಾನ್ಯ ದೆಹಲಿಯಲ್ಲಿ ತೀವ್ರ ಹಿಂಸಾಚಾರ ನಡೆದು 38 ಮಂದಿ ಮೃತಪಟ್ಟು ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದಾಗ ಗೃಹ ಸಚಿವ ಅಮಿತ್ ಶಾ ಎಲ್ಲಿದ್ದರು, ಏನು ಮಾಡುತ್ತಿದ್ದರು ಎಂದು ಶಿವಸೇನೆ ಪ್ರಶ್ನೆ ಮಾಡಿದೆ.


ದೆಹಲಿ ಹೊತ್ತಿ ಉರಿಯುತ್ತಿರುವಾಗ, ಜನರು ತಮ್ಮ ಅಸಹಾಯಕತೆ, ಸಿಟ್ಟು, ಆಕ್ರೋಶ ತೋರಿಸಿಕೊಳ್ಳುತ್ತಿದ್ದಾಗ ಗೃಹ ಸಚಿವ ಅಮಿತ್ ಶಾ ಎಲ್ಲಿದ್ದರು, ಅವರೇನು ಮಾಡುತ್ತಿದ್ದರು, 38 ಜನ ಸತ್ತಿದ್ದಾರೆ, ಅನೇಕರಿಗೆ ಗಾಯವಾಗಿದೆ, ಸಾರ್ವಜನಿಕ ಆಸ್ತಿಪಾಸ್ತಿಗಳು ಸಾಕಷ್ಟು ನಷ್ಟವಾಗಿದೆ, ಇಷ್ಟಾದರೂ ಕೇಂದ್ರ ಸರ್ಕಾರ ಏಕೆ ತಕ್ಷಣ ಕಾರ್ಯಪ್ರವೃತ್ತವಾಗಲಿಲ್ಲ ಎಂದು ತನ್ನ ಮುಖವಾಣಿ ಸಾಮ್ನಾದಲ್ಲಿ ಶಿವಸೇನೆ ಪ್ರಶ್ನೆ ಮಾಡಿದೆ.


ಎನ್ ಡಿಎ ಬದಲು ಈಗ ಕೇಂದ್ರದಲ್ಲಿ ಕಾಂಗ್ರೆಸ್ ಅಥವಾ ಬೇರಾವುದೇ ಮೈತ್ರಿ ಸರ್ಕಾರ ಇರುತ್ತಿದ್ದರೆ ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದರು. ಕೇಂದ್ರದಲ್ಲಿ ವಿರೋಧ ಪಕ್ಷಗಳು ದುರ್ಬಲವಾಗಿರುವುದರಿಂದ ಗೃಹ ಸಚಿವರ ರಾಜೀನಾಮೆ ಒತ್ತಡಕ್ಕೆ ಬಲ ಬಂದಿಲ್ಲ ಎಂದಿದೆ.


ಸೋನಿಯಾ ಗಾಂಧಿಯವರು ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಒಂದು ಕಡೆ ದೆಹಲಿಯಲ್ಲಿ ಪೊಲೀಸರು ಸೇರಿದಂತೆ 38 ಜನ ಪ್ರಾಣ ಕಳೆದುಕೊಂಡಿದ್ದಾರೆ. ಆ ಸಂದರ್ಭದಲ್ಲಿ ಕೇಂದ್ರ ಸಂಪುಟದ ಅರ್ಧಕ್ಕೂ ಹೆಚ್ಚು ಸಂಖ್ಯೆಯ ಸಚಿವರು ಅಹಮದಾಬಾದ್ ನಲ್ಲಿ ಅಮೆರಿಕ ಅಧ್ಯಕ್ಷರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಗೃಹ ಸಚಿವ ಅಮಿತ್ ಶಾ ಏಕೆ ಕೂಡಲೇ ಕಾರ್ಯಪ್ರವೃತ್ತರಾಗಿ ಹಿಂಸಾಚಾರವನ್ನು ತಡೆಯಲಿಲ್ಲ. ದೆಹಲಿ ವಿಧಾನಸಭೆ ಚುನಾವಣೆಗೆ ಪ್ರಚಾರ ಮಾಡಲು ಸಾಕಷ್ಟು ಸಮಯ ಹೊಂದಿದ್ದ ಅಮಿತ್ ಶಾಗೆ ಹಿಂಸಾಚಾರವನ್ನು ತಡೆಗಟ್ಟಲು, ಜನರ ಕಷ್ಟ ಸುಖ ಕೇಳಲು ಸಮಯವಿಲ್ಲವೇ ಎಂದು ಸಂಪಾದಕೀಯದಲ್ಲಿ ಶಿವಸೇನೆ ತಿವಿದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT