ಸೋಮವಾರ ಪವನ್ ಗುಪ್ತಾ ಅರ್ಜಿ ವಿಚಾರಣೆ 
ದೇಶ

ನಿರ್ಭಯಾ ಪ್ರಕರಣ: ಕ್ಷಮಾದಾನ ಕೋರಿ ಮತ್ತೆ ರಾಷ್ಟ್ರಪತಿ ಮೊರೆಹೋದ ಅಕ್ಷಯ್, ಸೋಮವಾರ ಸುಪ್ರೀಂನಲ್ಲಿ ಕ್ಯುರೇಟಿವ್ ಅರ್ಜಿ ವಿಚಾರಣೆ

ನಿರ್ಭಯಾ ಅತ್ಯಾಚಾರ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ  ಅಕ್ಷಯ್ ಕುಮಾರ್ ಸಿಂಗ್ ರಾಷ್ಟ್ರಪತಿಗಳಿಗೆ ಹೊಸದಾಗಿ ಕ್ಷಮಾದಾನ ಅರ್ಜಿ ಸಲ್ಲಿಸಿದ್ದಾನೆ. ಈ ಮುಖೇನ ನಿರ್ಭಯಾ ಅಪರಾಧಿಗಳಿಗೆ ನಿಗದಿತ ದಿನಾಂಕದಂದು ಗಲ್ಲು ಆಗುವುದು ಬಹುತೇಕ ಅಸಾಧ್ಯ ಎನ್ನುವಂತಾಗಿದೆ. "ತಾನು ಈ ಹಿಂದೆ ಸಲ್ಲಿಸಿದ್ದ ಅರ್ಜಿಯಲ್ಲಿ ಸಂಪೂರ್ಣ ವಿವರಗಳಿರಲಿಲ್ಲ" ಎಂದು ಹೇಳಿರುವ ಅಪರಾಧಿ ಇದೀಗ ಮತ್ತೊಂದ

ಸೋಮವಾರ ಪವನ್ ಗುಪ್ತಾ ಅರ್ಜಿ ವಿಚಾರಣೆ

ನವದೆಹಲಿ: ನಿರ್ಭಯಾ ಅತ್ಯಾಚಾರ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾದ  ಅಕ್ಷಯ್ ಕುಮಾರ್ ಸಿಂಗ್ ರಾಷ್ಟ್ರಪತಿಗಳಿಗೆ ಹೊಸದಾಗಿ ಕ್ಷಮಾದಾನ ಅರ್ಜಿ ಸಲ್ಲಿಸಿದ್ದಾನೆ. ಈ ಮುಖೇನ ನಿರ್ಭಯಾ ಅಪರಾಧಿಗಳಿಗೆ ನಿಗದಿತ ದಿನಾಂಕದಂದು ಗಲ್ಲು ಆಗುವುದು ಬಹುತೇಕ ಅಸಾಧ್ಯ ಎನ್ನುವಂತಾಗಿದೆ. "ತಾನು ಈ ಹಿಂದೆ ಸಲ್ಲಿಸಿದ್ದ ಅರ್ಜಿಯಲ್ಲಿ ಸಂಪೂರ್ಣ ವಿವರಗಳಿರಲಿಲ್ಲ" ಎಂದು ಹೇಳಿರುವ ಅಪರಾಧಿ ಇದೀಗ ಮತ್ತೊಂದು ಬಾರಿ ಕ್ಷಮಾದಾನ ಅರ್ಜಿ ಸಲ್ಲಿಕೆ ಮಾಡಿದ್ದಾನೆ.

ಫೆಬ್ರವರಿ 25 ರಂದು ಅಕ್ಷಯ್ ರಾಷ್ಟ್ರಪತಿಗೆ ಕ್ಷಮಾದಾನ ಅರ್ಜಿ ಸಲ್ಲಿಸಿದ್ದ. "ಈಗ ಅದು ರಾಷ್ಟ್ರಪತಿ ಭವನವನ್ನು ತಲುಪಿದೆ" ಅಕ್ಷಯ್ ಪರ ವಕೀಲ ಎ ಪಿ ಸಿಂಗ್ ಶನಿವಾರ ಮಾಧ್ಯಮಗಳಿಗೆ ತಿಳಿಸಿದರು.

"ಈ ಅಪರಾಧಿ ಶಿಕ್ಷೆಗೆ ಗುರಿಯಾದ ಏಕೈಕ ವ್ಯಕ್ತಿಯಲ್ಲ, ಕ್ರಿಮಿನಲ್ ವಿಚಾರಣೆಯ ಪರಿಣಾಮವಾಗಿ ಅವನ ಇಡೀ ಕುಟುಂಬವು ಬಹಳವಾಗಿ ನರಳಿದೆ" ಎಂದು ಮನವಿಯಲ್ಲಿ ತಿಳಿಸಲಾಗಿದೆ.

ನಿರ್ಭಯಾ ಪ್ರಕರಣದಲ್ಲಿ ಅಕ್ಷಯ್ ಹಾಗೂ ಇಅತ್ರೆ ಮೂವರು ಅಪರಾಧಿಗಳನ್ನು ಮಾರ್ಚ್ 3 ರಂದು ಬೆಳಿಗ್ಗೆ 6 ಗಂಟೆಗೆಗಲ್ಲಿಗೇರಿಸಬೇಕೆಂದು ನ್ಯಾಯಾಲಯ ಡೆತ್ ವಾರಂಟ್ ಜಾರಿ ಮಾಡಿದೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಈ ಹಿಂದೆ ಫೆ. 5ಕ್ಕೆ ಅಕ್ಷಯ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ವಜಾ ಮಾಡಿದ್ದರು. ನಾಲ್ವರಲ್ಲಿ ಪವನ್ ಕುಮಾರ್ ಮಾತ್ರವೇ ರಾಶ್ಃಟ್ರಪತಿಗೆ ಕ್ಷಮಾದಾನಕ್ಕೆ ಅರ್ಜಿ ಹಾಕಿಲ್ಲ.

ಸೋಮವಾರ ಪವನ್ ಗುಪ್ತಾ ಅರ್ಜಿ ವಿಚಾರಣೆ

ನಿರ್ಭಯಾ ಪ್ರಕರಣದಲ್ಲಿ ಅಪರಾಧಿಯಾಗಿರುವ ಪವನ್ ಕುಮಾರ್ ಗುಪ್ತಾ ಸಲ್ಲಿಸಿರುವ ಕ್ಯುರೇಟಿವ್ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಲಿದೆ.  ಪವನ್ ಗುಪ್ತಾ ಅವರು ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂಕೋರ್ಟ್‌ನ ಐದು ನ್ಯಾಯಾಧೀಶರ ಸಂವಿಧಾನ ಪೀಠ ಸೋಮವಾರ ವಿಚಾರಣೆ ನಡೆಸಲಿದೆ.

ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಐದು ನ್ಯಾಯಾಧೀಶರ ಸಂವಿಧಾನ ಪೀಠದಲ್ಲಿ ನ್ಯಾಯಮೂರ್ತಿ ಅರುಣ್ ಮಿಶ್ರಾ, ನ್ಯಾಯಮೂರ್ತಿ ಆರ್.ಎಫ್.ನಾರಿಮನ್, ನ್ಯಾಯಮೂರ್ತಿ ಆರ್ ಬಾನುಮತಿ ಮತ್ತು ನ್ಯಾಯಮೂರ್ತಿ ಅಶೋಕ್ ಭೂಷಣ್  ಇರಲಿದ್ದಾರೆ. ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಮಾರ್ಪಡಿಸಬೇಕೆಂದು ಗುಪ್ತಾ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ಕ್ಯುರೇಟಿವ್ ಅರ್ಜಿಯನ್ನು ಸಲ್ಲಿಸಿದ್ದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT