ಕಮಲ್ ಹಾಸನ್ 
ದೇಶ

ಗೃಹಿಣಿಯರಿಗೆ ಸಂಬಳ! ಕಮಲ್ ಹಾಸನ್ ಪಕ್ಷದ 'ವಿಷನ್ ಡಾಕ್ಯುಮೆಂಟ್'

ಗೃಹಿಣಿಯರಿಗೆ ಸಂಬಳ, ಜನರನ್ನು ಸಬಲೀಕರಣಗೊಳಿಸಿ ಉದ್ಯಮಶೀಲತಾ ಮನೋಭಾವವನ್ನು ಉತ್ತೇಜಿಸುವ ವಾತಾವರಣವನ್ನು ಸೃಷ್ಟಿಸುವುದು ಮತ್ತಿತರ ಎಂಟರ್ ಪ್ರೈಸ್  ಎಕಾನಮಿ ಅಂಶಗಳ ಮೂಲಕ ತಮಿಳುನಾಡನ್ನು ಮರುರೂಪಿಸುವುದಾಗಿ ನಟ , ರಾಜಕಾರಣಿ ಕಮಲ್ ಹಾಸನ್ ಪ್ರಕಟಿಸಿದ್ದಾರೆ.

ಚೆನ್ನೈ: ಗೃಹಿಣಿಯರಿಗೆ ಸಂಬಳ, ಜನರನ್ನು ಸಬಲೀಕರಣಗೊಳಿಸಿ ಉದ್ಯಮಶೀಲತಾ ಮನೋಭಾವವನ್ನು ಉತ್ತೇಜಿಸುವ ವಾತಾವರಣವನ್ನು ಸೃಷ್ಟಿಸುವುದು ಮತ್ತಿತರ ಎಂಟರ್ ಪ್ರೈಸ್  ಎಕಾನಮಿ ಅಂಶಗಳ ಮೂಲಕ ತಮಿಳುನಾಡನ್ನು ಮರುರೂಪಿಸುವುದಾಗಿ ನಟ , ರಾಜಕಾರಣಿ ಕಮಲ್ ಹಾಸನ್ ಪ್ರಕಟಿಸಿದ್ದಾರೆ.

ಮಕ್ಕಳ್ ನಿಧಿ ಮೈಮ್ ಪಕ್ಷದ ಅಧ್ಯಕ್ಷರೂ ಆಗಿರುವ ಕಮಲ್ ಹಾಸನ್, ತಮ್ಮ ಪಕ್ಷದ ವಿಷನ್ ಡಾಕ್ಯುಮೆಂಟನ್ನು ಟ್ವೀಟ್ ಮಾಡಿದ್ದಾರೆ.ಈ ಕೇಂದ್ರಿತ ಸಿದ್ದಾಂತದೊಂದಿಗೆ ಎರಡು ಪಟ್ಟು ಬದಲಾವಣೆ ತರುವ ನಿಟ್ಟಿನಲ್ಲಿ ಪಕ್ಷ ಕಾರ್ಯನಿರ್ವಹಿಸುತ್ತಿದೆ. ತಮಿಳುನಾಡನ್ನು ಮರು ರೂಪಿಸಲಾಗುವುದು,  ರಾಜಕೀಯದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲಾಗುವುದು ಎಂದು ಅವರು ತಿಳಿಸಿದ್ದಾರೆ.

ಅತಿಯಾದ ಭ್ರಷ್ಟಾಚಾರ ರಾಜ್ಯದ ವರ್ಚಸ್ಸನ್ನು ಕಡಿಮೆ ಮಾಡಿದೆ ಮತ್ತು  ಅಭಿವೃದ್ಧಿ ಹೊಂದುವ ಸಾಮರ್ಥ್ಯವನ್ನು ಕಡಿಮೆ ಮಾಡಿದೆ ಎಂದಿರುವ ಕಮಲ್ ಹಾಸನ್, ಎಂಟರ್ ಪೈಸ್ ಎಕನಾಮಿಯಿಂದ ಉದ್ಯೋಗ ಸೃಷ್ಟಿಯಾಗಲಿದ್ದು, ಪ್ರತಿ ತಮಿಳು ಜನರು ಸಮೃದ್ಧಿಯನ್ನು ಸಾಧಿಸಬಹುದು ಎಂದು ಅವರು ಹೇಳಿದ್ದಾರೆ. 

ಗೃಹಿಣಿಯರದು  ದೊಡ್ಡ ಕೆಲಸವಾಗಿದ್ದು, ಅವರಿಗೂ ಸಂಬಳ ನೀಡಬೇಕಾಗಿದೆ. ಅವರ ಉದ್ಯೋಗಕ್ಕೆ ಸಂಬಳ ನೀಡಬೇಕಾದ ಸಮಯ ಈಗ ಬಂದಿದೆ. ಅದನ್ನು ನಾವು ಈಡೇರಿಸುತ್ತೇವೆ ಎಂಬ ಭರವಸೆಯನ್ನು ವಿಷನ್ ಡಾಕ್ಯುಮೆಂಟ್ ನಲ್ಲಿ ನೀಡಿದ್ದಾರೆ.

ಕಳೆದ ಕೆಲ ವರ್ಷಗಳಿಂದ ತಮಿಳುನಾಡು ರಾಜಕಾರಣ ಸಾಗುತ್ತಿರುವ ದಿಕ್ಕು ಆತಂಕವನ್ನುಂಟುಮಾಡಿದೆ. ಮಹತ್ವಾಕಾಂಕ್ಷೆಯೊಂದಿಗೆ ಕೆಲಸ ಮಾಡುವಂತಹ ವಾತಾವರಣ ಸೃಷ್ಟಿಸುವ ಮೂಲಕ ನಮ್ಮ ಜನರ ಸಬಲೀಕರಣ ಮಾಡಲಾಗುವುದು ಎಂದು ಕಮಲ್ ಹಾಸನ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT