ದೇಶ

ಪೌರತ್ವ ಕಾಯ್ದೆ ವಿರೋಧಿ ನಿಲುವಿನಿಂದಾಗಿ ಸರ್ಕಾರ ನಮ್ಮ ಸ್ತಬ್ಧಚಿತ್ರ ಪ್ರಸ್ತಾವನೆ ತಿರಸ್ಕರಿಸಿದೆ: ಟಿಎಂಸಿ ಆರೋಪ 

ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಲು ಸಲ್ಲಿಸಿದ್ದ ಸ್ತಬ್ಧಚಿತ್ರದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಲು ಕಾರಣ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಟಿಎಂಸಿ ಪ್ರತಿಭಟನೆ ನಡೆಸುತ್ತಿರುವುದು ಎಂದು ತೃಣಮೂಲ ಕಾಂಗ್ರೆಸ್ ತಿರುಗೇಟು ನೀಡಿದೆ. 

ಕೋಲ್ಕತ್ತಾ: ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಲು ಸಲ್ಲಿಸಿದ್ದ ಸ್ತಬ್ಧಚಿತ್ರದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಲು ಕಾರಣ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಟಿಎಂಸಿ ಪ್ರತಿಭಟನೆ ನಡೆಸುತ್ತಿರುವುದು ಎಂದು ತೃಣಮೂಲ ಕಾಂಗ್ರೆಸ್ ತಿರುಗೇಟು ನೀಡಿದೆ.


ಸಿಎಎ ವಿರುದ್ಧ ಪ್ರತಿಭಟನೆ ಮಾಡಿದ ಒಂದೇ ಕಾರಣಕ್ಕೆ ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳ ವಿರುದ್ಧ ಮಲತಾಯಿ ಧೋರಣೆ ತಳೆಯುತ್ತಿರುವುದು ಸರಿಯಲ್ಲ. ಜನ ವಿರೋಧಿ ಕಾಯ್ದೆಯಾದ ಸಿಎಎಯನ್ನು ವಿರೋಧಿಸುತ್ತಿರುವುದರಿಂದ ಕೇಂದ್ರ ನಮ್ಮ ಸ್ತಬ್ಧಚಿತ್ರ ಪ್ರಸ್ತಾವನೆಯನ್ನು ತಿರಸ್ಕರಿಸಲಾಗಿದೆ ಎಂದು ಪಶ್ಚಿಮ ಬಂಗಾಳದ ಸಂಸದೀಯ ವ್ಯವಹಾರಗಳ ಸಚಿವ ತಪಸ್ ರಾಯ್ ಆರೋಪಿಸಿದ್ದಾರೆ.


ಪಶ್ಚಿಮ ಬಂಗಾಳದ ಸ್ತಬ್ಧಚಿತ್ರ ಪ್ರಸ್ತಾವನೆ ತಿರಸ್ಕಾರವಾಗುವುದು ಇದೇ ಮೊದಲ ಸಲವಲ್ಲ. ಹಿಂದಿನ ಉದಾಹರಣೆಗಳು ಸಾಕಷ್ಟಿವೆ. ಇಂತಹ ಕ್ಷುಲ್ಲಕ ರಾಜಕಾರಣ ನಮ್ಮನ್ನು ದೃತಿಗೆಡಿಸುವುದಿಲ್ಲ. ಬಿಜೆಪಿ ಸರ್ಕಾರ ಪಶ್ಚಿಮ ಬಂಗಾಳ ಜನರಿಗೆ ಅವಮಾನಿಸಿದೆ, ಸದ್ಯದಲ್ಲಿಯೇ ಇದಕ್ಕೆ ಸರಿಯಾದ ಉತ್ತರ ಸಿಗಲಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT