ಕೇರಳ ರಾಜ್ಯಪಾಲ 
ದೇಶ

ಪೌರತ್ವ ಕಾಯ್ದೆ ವಿರುದ್ಧದ ವಿಧಾನಸಭೆ ನಿರ್ಣಯ ಅಕ್ರಮ, ಅಸಂವಿಧಾನಿಕ: ಕೇರಳ ರಾಜ್ಯಪಾಲ

ಪೌರತ್ವ ಕಾಯ್ದೆ ವಿರುದ್ಧದ ರಾಜ್ಯ ವಿಧಾನಸಭೆಯ ನಿರ್ಣಯ ಅಕ್ರಮ ಹಾಗೂ ಅಸಂವಿಧಾನಿಕವಾದದ್ದು ಎಂದು ಕೇರಳ ರಾಜ್ಯ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಗುರುವಾರ ಹೇಳಿದ್ದಾರೆ. 

ತಿರುವನಂತಪುರ: ಪೌರತ್ವ ಕಾಯ್ದೆ ವಿರುದ್ಧದ ರಾಜ್ಯ ವಿಧಾನಸಭೆಯ ನಿರ್ಣಯ ಅಕ್ರಮ ಹಾಗೂ ಅಸಂವಿಧಾನಿಕವಾದದ್ದು ಎಂದು ಕೇರಳ ರಾಜ್ಯ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಗುರುವಾರ ಹೇಳಿದ್ದಾರೆ. 

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಕೇರಳ ವಿಧಾನಸಭೆ ಕೆಲ ದಿನಗಳ ಹಿಂದಷ್ಟೇ ನಿರ್ಣಯ ಅಂಗೀಕರಿಸಿದ್ದು, ಈ ಹಿನ್ನೆಲೆಯಲ್ಲಿ ಹಲವು ಟೀಕೆಗಳು ವ್ಯಕ್ತವಾಗತೊಡಗಿವೆ. 

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕೇರಳ ರಾಜ್ಯಪಾಲ, ಪೌರತ್ವ ಕಾಯ್ದೆ ವಿರುದ್ಧ ವಿಧಾನಸಭೆ ಕೈಗೊಂಡಿರುವ ನಿರ್ಣಯ ಅಕ್ರಮ ಹಾಗೂ ಅಸಂವಿಧಾನಿಕವಾದದ್ದು. ಏಕೆಂದರೆ, ಕಾಯ್ದೆಯು ಕೇಂದ್ರ ಸರ್ಕಾರದ ಅಡಿಯಲ್ಲಿ ಬರಲಿದ್ದು, ಇದರಲ್ಲಿ ರಾಜ್ಯ ಸರ್ಕಾರಗಳ ಹಸ್ತಕ್ಷೇಪವಿರುವುದಿಲ್ಲ ಎಂದು ಹೇಳಿದ್ದಾರೆ. 

ಇಂತಹ ನಿರ್ಣಯ ಕೈಗೊಳ್ಳುವುದರಲ್ಲಿ ರಾಜ್ಯ ಸರ್ಕಾರ ಏಕೆ ಸಮಯ ವ್ಯರ್ಥ ಮಾಡುತ್ತಿದೆ? ಪ್ರಸ್ತುತ ಕೇರಳ ಸರ್ಕಾರ ಕೈಗೊಂಡಿರುವ ನಿರ್ಣ ಅಸಂವಿಧಾನಿಕವಾದದ್ದು ಎಂದು ತಿಳಿಸಿದ್ದಾರೆ. 

ಪೌರತ್ವ ಕಾಯ್ದೆ ಕೇರಳ ರಾಜ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ರಾಜ್ಯದಲ್ಲಿ ಅಕ್ರಮ ವಲಸಿಗರು ನೆಲೆಯೂರಿದ್ದಾರೆ. ಶಾಸನ ರಾಜ್ಯದ ಮೇಲೆ ಪರಿಣಾಮ ಬೀರುವುದಿಲ್ಲ. ವಿಧಾನಸಭೆಯ ನಿರ್ಣಯ ಕಾನೂನು ಸಿಂಧುತ್ವವನ್ನು ಪಡೆದಿಲ್ಲ ಎಂದಿದ್ದಾರೆ. 

ರಾಜ್ಯ ಸರ್ಕಾರದ ಪರವಾಗಿ ಕೆಲ ಶಿಫಾರಸ್ಸು ಮಾಡಿರುವುದಾಗಿ ಕಾಂಗ್ರೆಸ್ ಹೇಳಿಕೊಳ್ಳುತ್ತಿದೆ. ಕೇಂದ್ರ ಜಾರಿಗೆ ತಂದಿರುವ ಕಾಯ್ದೆಗೆ ಸಹಕಾರ ನೀಡದಂತೆಯೂ ತಿಳಿಸಿದೆ. ಶಿಫಾರಸ್ಸು ಸಂಪೂರ್ಣವಾಗಿ ಅಕ್ರಮ ಹಾಗೂ ಅಪರಾಧದಿಂದ ಕೂಡಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT