ಮೋದಿ - ಮಮತಾ ಬ್ಯಾನರ್ಜಿ 
ದೇಶ

ನೀವು ಭಾರತದ ಪ್ರಧಾನಿಯೋ ಅಥವಾ ಪಾಕಿಸ್ತಾನದ ರಾಯಭಾರಿಯೋ?: ಮೋದಿಗೆ ದೀದಿ ಪ್ರಶ್ನೆ

ಸದಾ ಪಾಕಿಸ್ತಾನದ ಬಗ್ಗೆಯೇ ಮಾತನಾಡುವ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ನೀವು ಪಾಕಿಸ್ತಾನದ ರಾಯಭಾರಿಯೇ? ಎಂದು ಪ್ರಶ್ನಿಸಿದ್ದಾರೆ.

ಸಿಲಿಗುರಿ: ಸದಾ ಪಾಕಿಸ್ತಾನದ ಬಗ್ಗೆಯೇ ಮಾತನಾಡುವ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ನೀವು ಪಾಕಿಸ್ತಾನದ ರಾಯಭಾರಿಯೇ? ಎಂದು ಪ್ರಶ್ನಿಸಿದ್ದಾರೆ.

ಇಂದು ಸಿಲಿಗುರಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ರ್ಯಾಲಿ ಉದ್ದೇಶಿಸಿ ಮಾತನಾಡಿದ ದೀದಿ, ಭಾರತದ ಬಗ್ಗೆ ಮಾತನಾಡುವ ಬದಲು ದಿನಪೂರ್ತಿ ಪಾಕಿಸ್ತಾನದ ಬಗ್ಗೆಯೇ ಮಾತನಾಡುತ್ತೀರಿ. ನೀವು ಭಾರತದ ಪ್ರಧಾನಿಯೋ ಅಥವಾ ಪಾಕಿಸ್ತಾನದ ರಾಯಭಾರಿಯೇ ಎಂದು ಪ್ರಶ್ನಿಸಿದ್ದಾರೆ.

ನೀವು ಭಾರತದ ಬಗ್ಗೆ ಮಾತನಾಡುವ ಬದಲು, ಯಾಕೆ ಯಾವಾಗಲೂ ನಮ್ಮ ದೇಶವನ್ನು ಪಾಕಿಸ್ತಾನದ ಜೊತೆ ಹೋಲಿಸುತ್ತೀರಿ? ಪಾಕಿಸ್ತಾನದಂತಾಗಲು ನಾವೇನು ಬಯಸುವುದಿಲ್ಲ. ನಮ್ಮ ದೇಶವನ್ನು ನಾವು ಪ್ರೀತಿಸುತ್ತೇವೆ. ಅಲ್ಲಿನ ರಾಯಭಾರಿ ರೀತಿಯಲ್ಲಿ ದಿನಗಟ್ಟಲೇ ಪಾಕಿಸ್ತಾನದ ಬಗ್ಗೆಯೇ ಮೋದಿ ಮಾತನಾಡುತ್ತಿದ್ದಾರೆ ಎಂದು ಪಶ್ಚಿಮ ಬಂಗಾಳ ಸಿಎಂ ವಾಗ್ದಾಳಿ ನಡೆಸಿದರು.

ಸ್ವಾತಂತ್ರ್ಯ ಬಂದು 70 ವರ್ಷದ ನಂತರ ದೇಶದ ಜನತೆ ತಮ್ಮ ಪೌರತ್ವವನ್ನು ಸಾಬೀತುಪಡಿಸಿಕೊಳ್ಳಬೇಕು ಎನ್ನುವುದು ನಾಚಿಕೆಗೇಡಿನ ಸಂಗತಿ ಎಂದು ದೀದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ನನಗೆ ಕೆಲಸವಿಲ್ಲ, ಉದ್ಯೋಗ ನೀಡಿ ಎಂದು ಯಾರಾದರೂ ಕೇಳಿದರೆ, ಅದಕ್ಕೆ ಪ್ರಧಾನಿ ಪಾಕಿಸ್ತಾನಕ್ಕೆ ಹೋಗಿ ಎನ್ನುತ್ತಾರೆ. ಕೈಗಾರಿಕೆಗಳಿಲ್ಲ ಎಂದು ಯಾರಾದರು ಹೇಳಿದರೆ, ಪಾಕಿಸ್ತಾನಕ್ಕೆ ಹೋಗಿ ಎನ್ನುತ್ತಾರೆ. ಪಾಕಿಸ್ತಾನದ ಬಗ್ಗೆ ಚರ್ಚೆಯನ್ನು ಪಾಕಿಸ್ತಾನ ಮಾಡುತ್ತದೆ. ನಾವು ಹಿಂದೂಸ್ತಾನದ ಬಗ್ಗೆ ಚರ್ಚೆ ಮಾಡೋಣ. ಇದು ನಮ್ಮ ಜನ್ಮಭೂಮಿ’ ಎಂದು ವಾಗ್ದಾಳಿ ನಡೆಸಿದರು.

‘ಸಂಸ್ಕೃತಿ ಮತ್ತು ಪರಂಪರೆಯಿಂದ ಶ್ರೀಮಂತವಾಗಿರುವ ಭಾರತವನ್ನು ಯಾಕೆ ಸದಾ ಪಾಕಿಸ್ತಾನದೊಂದಿಗೆ ಹೋಲಿಸುತ್ತೀರಾ’ ಎಂದು ಮಮತಾ ಪ್ರಶ್ನಿಸಿದ್ದಾರೆ.

‘ಧರ್ಮದ ಆಧಾರದ ಮೇಲೆ ದೇಶವನ್ನು ಒಡೆಯುವುದು ಹೇಗೆ ಎಂದು ಅವರಿಗೆ ಚೆನ್ನಾಗಿ ಗೊತ್ತು. ಆದರೆ, ಜನರ ಸ್ವತಂತ್ರ್ಯವನ್ನು ಕಾಪಾಡುವುದೇ ನನ್ನ ಧರ್ಮ. ಇದು ನಮ್ಮ ಎರಡನೇ ಸ್ವಾತಂತ್ರ್ಯ ಹೋರಾಟ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT