ಸಾಂದರ್ಭಿಕ ಚಿತ್ರ 
ದೇಶ

ಬ್ರೈನ್ ಹ್ಯಾಮರೇಜ್ ನಿಂದ ಯೋಧ ಸಾವು, ನೊಂದ ಪತ್ನಿ ಆತ್ಮಹತ್ಯೆಗೆ ಶರಣು

ಜಮ್ಮು ಮತ್ತು ಕಾಶ್ಮೀರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭಾರತೀಯ ಸೇನೆಯ ಯೋಧ ಮೆದುಳು ರಕ್ತಸ್ರಾವ (ಬ್ರೈನ್ ಹ್ಯಾಮರೇಜ್)ದಿಂದ ಮೃತಪಟ್ಟಿದ್ದು, ಪತಿಯ ಸಾವಿನ ಆಘಾತದಿಂದ ಆತನ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ರಾಂಚಿಯಲ್ಲಿ ನಡೆದಿದೆ.

ರಾಂಚಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಭಾರತೀಯ ಸೇನೆಯ ಯೋಧ ಮೆದುಳು ರಕ್ತಸ್ರಾವ (ಬ್ರೈನ್ ಹ್ಯಾಮರೇಜ್)ದಿಂದ ಮೃತಪಟ್ಟಿದ್ದು, ಪತಿಯ ಸಾವಿನ ಆಘಾತದಿಂದ ಆತನ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ರಾಂಚಿಯಲ್ಲಿ ನಡೆದಿದೆ.

ಸೇನಾ ಅಧಿಕಾರಿಗಳ ಪ್ರಕಾರ, ಯೋಧ ಬಜರಂಗಿ ಭಗತ್ ಅವರು ಡಿಸೆಂಬರ್ 30ರಂದು ಬೆಡ್ ಮೇಲಿಂದ ಬಿದ್ದ ಪರಿಣಾನ ಮೆದುಳು ರಕ್ತಸ್ರಾವವಾಗಿ ಮೃತಪಟ್ಟಿದ್ದಾರೆ. ಯೋಧನ ಮೃತದೇಹ ಜನವರಿ 1ರಂದು ಸ್ವಗ್ರಾಮ ರಾಂಚಿಯ ಬಹ್ರೆರಾಗೆ ತಲುಪಿದೆ. ಪತಿಯ ಮೃತ ದೇಹವನ್ನು ನೋಡಲು ನನ್ನಿಂದ ಸಾಧ್ಯವಿಲ್ಲ ಎಂದ ಭಗತ್ ಪತ್ನಿ ಮನಿತಾ ಒರಾನ್ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆದಾಗ್ಯೂ, ಮನಿತಾ ಅವರ ಕುಟುಂಬ ಸದಸ್ಯರು, ಮಕ್ಕಳಾಗದ ಕಾರಣ ಅವಳು ತುಂಬಾ ನೊಂದಿದ್ದಳು. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿದ್ದಾರೆ.

2012ರ ಏಪ್ರಿಲ್ ನಲ್ಲಿ ಭಾರತೀಯ ಸೇನೆಗೆ ಸೇರಿದ್ದ ಭಗತ್ ಅವರು, ನಾಗ್ಪುರದ ರೆಜಿಮೆಂಟಲ್ ಸೆಂಟರ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಮೂರು ತಿಂಗಳ ಹಿಂದಷ್ಟೇ ಅವರನ್ನು ಜಮ್ಮು ಮತ್ತು ಕಾಶ್ನೀರಕ್ಕೆ ನಿಯೋಜಿಸಲಾಗಿತ್ತು. ಎರಡು ವರ್ಷಗಳ ಹಿಂದೆ ಮನಿತಾ ಅವರನ್ನು ಮದುಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT