ವಿಕೆ.ಸಿಂಗ್ 
ದೇಶ

ಪೌರತ್ವ ಕಾಯ್ದೆ ಯಾರ ಹಕ್ಕನ್ನೂ ಕಸಿಯುವುದಿಲ್ಲ, ಅಲ್ಪಸಂಖ್ಯಾತರಿಗೆ ಸಹಾಯ ಮಾಡಲಿದೆ: ವಿಕೆ.ಸಿಂಗ್

ಪೌರತ್ವ ತಿದ್ದುಪಡಿ ಕಾಯ್ದೆ ಯಾರ ಹಕ್ಕನ್ನೂ ಕಸಿಯುವುದಿಲ್ಲ. ಅಲ್ಪಸಂಖ್ಯಾತ ಜನರಿಗೆ ಕಾಯ್ದೆಯಿಂದ ಸಹಾಯವಾಗಲಿದೆ ಎಂದು ಕೇಂದ್ರ ಸಚಿವ ವಿಕೆ.ಸಿಂಗ್ ಅವರು ಭಾನುವಾರ ಹೇಳಿದ್ದಾರೆ. 

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ಯಾರ ಹಕ್ಕನ್ನೂ ಕಸಿಯುವುದಿಲ್ಲ. ಅಲ್ಪಸಂಖ್ಯಾತ ಜನರಿಗೆ ಕಾಯ್ದೆಯಿಂದ ಸಹಾಯವಾಗಲಿದೆ ಎಂದು ಕೇಂದ್ರ ಸಚಿವ ವಿಕೆ.ಸಿಂಗ್ ಅವರು ಭಾನುವಾರ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇವಲ ವೋಟ್ ಬ್ಯಾಂಕ್'ಗಾಗಿ ಕೆಲಸ ಮಾಡುವ ಪಕ್ಷಗಳು ಕಾಯ್ದೆ ಕುರಿತು ಜನರಿಗೆ ತಪ್ಪು ಮಾಹಿತಿ ನೀಡುತ್ತಿವೆ. ಕಾಯ್ದೆಯು ಯಾರ ಹಕ್ಕನ್ನೂ ಕಸಿದುಕೊಳ್ಳುವುದಿಲ್ಲ. ಅಲ್ಪಸಂಖ್ಯಾತ ಜನರಿಗೆ ಸಹಾಯ ಮಾಡುವ ಸಲುವಾಗಿ ಜಾರಿಗೆ ತರಲಾಗಿದೆ. ಹೃದಯ ಪೂರ್ವಕವಾಗಿ ಜನರು ಜೀವನ ನಡೆಸುವ ಉದ್ದೇಶವನ್ನು ಕಾಯ್ದೆ ಹೊಂದಿದೆ ಎಂದು ಹೇಳಿದ್ದಾರೆ. 

ಜನರಿಗೆ ಸಹಾಯ ಮಾಡಲು ಬಿಜೆಪಿ ಕಾಯ್ದೆ ಜಾರಿಗೆ ತಂದಿದ್ದು, ವಿರೋಧ ಪಕ್ಷಗಳು ಸುಖಾಸುಮ್ಮನೆ ಗೊಂದಲ ಸೃಷ್ಟಿಸುತ್ತಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಗುರುದ್ವಾರ ದಾಳಿ ಕುರಿತಂತೆ ಪ್ರತಿಕ್ರಿಯಿಸಿರುವ ಅವರು, ಪಾಕಿಸ್ತಾನ ರಾಷ್ಟ್ರದಲ್ಲಿ ನಮ್ಮ ಜನರು ಸುರಕ್ಷಿತರಾಗಿಲ್ಲ ಎಂಬುದನ್ನು ಈ ದಾಳಿ ಸಾಬೀತು ಪಡಿಸಿದೆ. ಇಂತಹ ಜನರಿಗೆ ಭಾರತ ಜಾರಿಗೆ ತಂದಿರುವ ಕಾಯ್ದೆ ಸಹಾಯ ಮಾಡಲಿದೆ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT