ಸಂಗ್ರಹ ಚಿತ್ರ 
ದೇಶ

ಸರ್ಕಾರ ಮಾಡಿರುವ ಕೆಲಸಗಳನ್ನು ಮುಂದಿಟ್ಟು ಚುನಾವಣೆ ಎದುರಿಸುತ್ತೇವೆ: ದೆಹಲಿ ಸಿಎಂ ಕೇಜ್ರಿವಾಲ್

ನಮ್ಮ ಆಮ್ ಆದ್ಮಿ ಪಕ್ಷದ ಸರ್ಕಾರ ಕಳೆದ ಐದು ವರ್ಷಗಳಲ್ಲಿ ಮಾಡಿರುವ ಕೆಲಸಗಳನ್ನು ಮುಂದಿಟ್ಟುಕೊಂಡು ಹಾಲಿ ಚುನಾವಣೆಯನ್ನು ಎದುರಿಸುತ್ತೇವೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ನವದೆಹಲಿ: ನಮ್ಮ ಆಮ್ ಆದ್ಮಿ ಪಕ್ಷದ ಸರ್ಕಾರ ಕಳೆದ ಐದು ವರ್ಷಗಳಲ್ಲಿ ಮಾಡಿರುವ ಕೆಲಸಗಳನ್ನು ಮುಂದಿಟ್ಟುಕೊಂಡು ಹಾಲಿ ಚುನಾವಣೆಯನ್ನು ಎದುರಿಸುತ್ತೇವೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಅತ್ತ ಕೇಂದ್ರ ಚುನಾವಣಾ ಮುಖ್ಯಾಧಿಕಾರಿ ಸುನೀಲ್ ಆರೋರಾ ಅವರು, ದೆಹಲಿ ವಿಧಾನಸಭೆ ಚುನಾವಣೆಯ ವೇಳಾಪಟ್ಟಿ ಪ್ರಕಟಗೊಳಿಸಿದ್ದು, ಫೆಬ್ರವರಿ 8 ರಂದು ಒಂದೇ ಹಂತದಲ್ಲಿ ದೆಹಲಿಯಲ್ಲಿ ಮತದಾನ ನಡೆಯಲಿದೆ. ಫೆಬ್ರವರಿ 11ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದ್ದು, ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಸುನೀಲ್ ಆರೋರಾ  ಹೇಳಿದ್ದಾರೆ.

ಅವರ ಸುದ್ದಿಗೋಷ್ಠಿ ಬೆನ್ನಲ್ಲೇ ಇತ್ತ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಅರವಿಂದ್ ಕೇಜ್ರಿವಾಲ್, ಕಳೆದ ಐದು ವರ್ಷಗಳಲ್ಲಿ ಆಪ್ ಸರ್ಕಾರ ಮಾಡಿರುವ ಕೆಲಸಗಳು ಮತ್ತು ಜಾರಿಗೆ ತಂದಿರುವ ಯೋಜನೆಗಳು ಜನರ ಮುಂದಿದೆ. ಅವುಗಳನ್ನೇ ಮುಂದಿಟ್ಟು ಕೊಂಡು ನಾವು ಈ ಬಾರಿ ಚುನಾವಣೆ ಎದುರಿಸುತ್ತೇವೆ. ಈ ಬಾರಿ ಕೂಡ ಆಪ್ ಗೆ ಜನ ಆಶೀರ್ವದಿಸಲಿದ್ದಾರೆ ಎಂಬ ವಿಶ್ವಾಸ ತಮಗಿದೆ ಎಂದು ಕೇಜ್ರಿವಾಲ್ ಹೇಳಿದರು.

ದೆಹಲಿಯ ವಿಧಾನಸಭೆ 70 ಸದಸ್ಯರ ಬಲ ಹೊಂದಿದ್ದು,  2015ರಲ್ಲಿ ನಡೆದ ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷ ಬರೋಬ್ಬರಿ 67 ಸ್ಥಾನಗಳನ್ನು ಗೆದ್ದು ಬಹುತೇಕ ಕ್ಲೀನ್ ಸ್ವೀಪ್ ಮಾಡಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೌದು ನಾವು ಒಂದ್ ರೀತಿ ಕಡಲ್ಗಳ್ಳರೇ...; ಹೆಮ್ಮೆ ಇದೆ: ಜಲಸಂಧಿಗೆ ದಿಗ್ಬಂಧನದ ವಿಷಯವಾಗಿ ಟ್ರಂಪ್ ಹೊಸ ವರಸೆ!

ಪೊಲೀಸರ ಸಮ್ಮುಖದಲ್ಲೇ ಧಮ್ಕಿ: ಸಾರಾ ಗೋವಿಂದ್ ವಿರುದ್ಧ ಚೇತನ್ ಅಹಿಂಸಾ ದೂರು, FIR ದಾಖಲು!

ಪ.ಬಂಗಾಳ: ಫಾಲ್ಟಾ ಕ್ಷೇತ್ರದ ಎಲ್ಲಾ ಮತಗಟ್ಟೆಗಳಲ್ಲಿ ಮೇ. 21 ರಂದು ಮರು ಮತದಾನ- ಚುನಾವಣಾ ಆಯೋಗ ಘೋಷಣೆ

2029ರ ಚುನಾವಣೆಯಲ್ಲಿ ಬಿಜೆಪಿ-ಶಿವಸೇನೆ ಏಕಾಂಗಿ ಸ್ಪರ್ಧೆ?: 'ಮಹಾ' ಸಚಿವನ ಹೇಳಿಕೆ ಕೋಲಾಹಲ!

ಬೆಂಗಳೂರು: ಅನಾರೋಗ್ಯದಿಂದ ದಕ್ಷ ಅಧಿಕಾರಿ 39 ವರ್ಷದ SP ಲಾವಣ್ಯ ಹಠಾತ್‌ ನಿಧನ!

SCROLL FOR NEXT