ಸಂಗ್ರಹ ಚಿತ್ರdd 
ದೇಶ

ಪೌರತ್ವ ಕಾಯ್ದೆ: ಜ.8ಕ್ಕೆ ಭಾರತ್ ಬಂದ್, ಬ್ಯಾಂಕ್ ನೌಕರರ ಬೆಂಬಲ

ಕೇಂದ್ರ ಸರ್ಕಾರದ ಕಾರ್ಮಿಕ ಸುಧಾರಣೆ ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಜ.8ರ ಬುಧವಾರ ಭಾರತ ಬಂದ್'ಗೆ ಕರೆ ನೀಡಿವೆ. 

ನವದೆಹಲಿ: ಕೇಂದ್ರ ಸರ್ಕಾರದ ಕಾರ್ಮಿಕ ಸುಧಾರಣೆ ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಜ.8ರ ಬುಧವಾರ ಭಾರತ ಬಂದ್'ಗೆ ಕರೆ ನೀಡಿವೆ. 

ಕೇಂದ್ರ ಸರ್ಕಾರಿ ನೌಕರರು, ಬ್ಯಾಂಕ್ ಉದ್ಯೋಗಿಗಳು, ಶಿಕ್ಷಕರು ಉಕ್ಕು ಮತ್ತು ರೈಲ್ವೇ ಸೇರಿದಂತೆ ವಿವಿಧ ವಲಯಗಳ ನೌಕರರು ಬಂದ್ ಬೆಂಬಲ ನೀಡಿದ್ದು, ಪ್ರತಿಭಟನೆಯಲ್ಲಿ ಭಾಗಿಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿವೆ. 

ಕಾರ್ಮಿಕರಿಗೆ ಸಂಬಂಧಿಸಿದ 44 ಕಾಯ್ದೆಗಳನ್ನು ವಿಲೀನಗೊಳಿಸಿ ವೇತನ, ಕೈಗಾರಿಕಾ ಸಂಬಂಧ, ಸಾಮಾಜಿಕ ಭದ್ರತೆ, ಸುರಕ್ಷತಾ ನಿರ್ವಹಣಾ ಷರತ್ತು ಎಂಬ ನಾಲ್ಕು ಸಂಹಿತೆಗಲನ್ನು ರೂಪಿಸುವ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಲಾಗಿದೆ. 2018ರ ನವೆಂಬರ್ ತಿಂಗಳಿನಲ್ಲಿ ಕೈಗಾರಿಕಾ ಸಂಬಂಧದಲ್ಲಿನ ಕಾರ್ಮಿಕ ಸಂಹಿತೆಗೆ ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿದೆ ನೀಡಿದೆ. ಅದರ ಪ್ರಕಾರ, ಈಗಿನ ಕಾರ್ಮಿಕ ಸಂಘಟನೆಗಳ ಮಾನ್ಯತೆಯನ್ನು ರದ್ದುಗೊಳಿಸಲಾಗುತ್ತದೆ. ಶೇ.75 ಕಾರ್ಮಿಕರ ಬೆಂಬಲ ಹೊಂದಿರುವ ಕಾರ್ಮಿಕ ಸಂಘಟನೆಗಲಿಗೆ ಮಾತ್ರ ಮಾನ್ಯತೆ ನೀಡಲಾಗುತ್ತದೆ, ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕುವುದು ಉದ್ಯೋಗದಾತರಿಗೆ ಸುಲಭವಾಗಲಿದೆ. 

ಕಾರ್ಮಿಕರು ಮುಷ್ಕರ ಹೂಡಿದರೆ ಅದನ್ನು ಸಾಮೂಹಿಕ ಸಾಂದರ್ಭಿಕ ರಜೆ ಎಂದು ಪರಿಗಣಿಸಲಾಗುತ್ತದೆ ಎಂಬುದು ಕಾರ್ಮಿಕ ಸಂಘಟನೆಗಳ ವಾದವಾಗಿದೆ .ಇದಲ್ಲದೆ, ಕನಿಷ್ಟ ವೇತನನ್ನು ರೂ.21 ಸಾವಿರದಿಂದ ರೂ.24 ಸಾವಿರದವರೆಗೆ ಹೆಚ್ಚಳ ಮಾಡಬೇಕು. ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳನ್ನು ಖಾಸಗೀಕರಣ ಮಾಡುವುದನ್ನು ನಿಲ್ಲಿಸಬೇಕು. ಪೌರತ್ವ ತಿದ್ದುಪಡಿ ಕಾಯ್ದೆ, ಎನ್ಆರ್'ಸಿ ಹಾಗೂ ಎನ್'ಪಿಆರ್ಗಳನ್ನು ಹಿಂಪಡೆಯಬೇಕು ಎಂಬ ಬೇಡಿಕೆಯನ್ನು ಕಾರ್ಮಿಕ ಸಂಘಟನೆಗಳು ಮಂಡಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ