ಕರ್ನಾಟಕದ ಮಾಜಿ ರಾಜ್ಯಪಾಲ ಟಿಎನ್ ಚತುರ್ವೇದಿ ನಿಧನ: ಗಣ್ಯರಿಂದ ಸಂತಾಪ 
ದೇಶ

ಕರ್ನಾಟಕದ ಮಾಜಿ ರಾಜ್ಯಪಾಲ ಟಿಎನ್ ಚತುರ್ವೇದಿ ನಿಧನ: ಗಣ್ಯರಿಂದ ಸಂತಾಪ 

ಕರ್ನಾಟಕದ ರಾಜ್ಯಪಾಲರಾಗಿದ್ದ ತ್ರಿಲೋಕಿನಾಥ್ ಚತುರ್ವೇದಿ (90) ಜ.05 ರಂದು ಮಧ್ಯ ರಾತ್ರಿ ನಿಧನರಾಗಿದ್ದಾರೆ. 

ದೆಹಲಿ: ಕರ್ನಾಟಕದ ರಾಜ್ಯಪಾಲರಾಗಿದ್ದ ತ್ರಿಲೋಕಿನಾಥ್ ಚತುರ್ವೇದಿ (90) ಜ.05 ರಂದು ಮಧ್ಯ ರಾತ್ರಿ ನಿಧನರಾಗಿದ್ದಾರೆ. 

ಏಕಾಏಕಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ನೋಯ್ಡಾದ ಸೆಕ್ಟರ್-27 ರಲ್ಲಿರುವ ಕೈಲಾಶ್ ಆಸ್ಪತ್ರೆಯಲ್ಲಿ ಚತುರ್ವೇದಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಜ.05 ರಂದು ಮಧ್ಯರಾತ್ರಿ ನಿಧನರಾಗಿದ್ದಾರೆ. 

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸಂತಾಪ ಸೂಚಿಸಿದ್ದು. "ರಾಜ್ಯಪಾಲರಾಗಿ, ಸಿಎಜಿ ಆಗಿ, ಸಂಸದರಾಗಿ ಟಿಎನ್ ಚತುರ್ವೇದಿ ಅವರು ರಾಷ್ಟ್ರಕ್ಕೆ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿದ್ದಾರೆ. 

ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆ, ಸಿಎಂ ಯಡಿಯೂರಪ್ಪ ಸಹ ಟಿಎನ್ ಚತುರ್ವೇದಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಐಎಎಸ್ ಅಧಿಕಾರಿಯಾಗಿದ್ದ ಟಿಎನ್ ಚತುರ್ವೇದಿ 2002-2007 ರ ಅವಧಿಯಲ್ಲಿ ಕರ್ನಾಟಕದ ರಾಜ್ಯಪಾಲರಾಗಿದ್ದರು. ಇದಕ್ಕೂ ಮುನ್ನ 1984089 ರ ವರೆಗೆ ಸಿಎಜಿ ಆಗಿ ಕಾರ್ಯನಿರ್ವಹಿಸಿದ್ದರು. 1991 ರಲ್ಲಿ ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು.

ಟಿ.ಎನ್. ಚತುರ್ವೇದಿ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ಜನವರಿ 5- ಕರ್ನಾಟಕದ ಮಾಜಿ ರಾಜ್ಯಪಾಲ ಟಿ.ಎನ್. ಚತುರ್ವೇದಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಭಾರತೀಯ ಆಡಳಿತ ಸೇವೆಯ ಅಧಿಕಾರಿಯಾಗಿ, ಸಿ. ಎ. ಜಿ ಆಗಿ ಮತ್ತು ಕರ್ನಾಟಕದ ರಾಜ್ಯಪಾಲರಾಗಿ ಅತ್ಯಂತ ದಕ್ಷತೆಯಿಂದ ಕಾರ್ಯ ನಿರ್ವಹಿಸಿದವರು ಎಂದು ಅವರು ಸ್ಮರಿಸಿಕೊಂಡಿದ್ದಾರೆ.

ಅವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ, ಅವರ ಕುಟುಂಬ ವರ್ಗದವರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸು ವುದಾಗಿ ಮುಖ್ಯಮಂತ್ರಿಗಳು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!