ಗಾಯಗೊಂಡಿರುವ ಐಶೆ ಘೋಶ್ 
ದೇಶ

ದುಷ್ಕರ್ಮಿಗಳ ಗುರಿ ನಾನೇ ಆಗಿದ್ದೆ: ಜೆಎನ್ ಯುಎಸ್ ಯು ಅಧ್ಯಕ್ಷೆ ಐಶೆ ಘೋಶ್

ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ (ಜೆಎನ್‌ಯು)ದ ಕ್ಯಾಂಪಸ್‌ ನಲ್ಲಿ ನಡೆದ ಹಿಂಸಾಚಾರದಲ್ಲಿ ದುಷ್ಕರ್ಮಿಗಳ ಗುರಿ ನಾನೇ ಆಗಿದ್ದೆ ಎಂದು ಜೆಎನ್ ಯುಎಸ್ ಯು ಅಧ್ಯಕ್ಷೆ ಐಶೆ ಘೋಶ್ ಹೇಳಿದ್ದಾರೆ.

ನವದೆಹಲಿ: ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ (ಜೆಎನ್‌ಯು)ದ ಕ್ಯಾಂಪಸ್‌ ನಲ್ಲಿ ನಡೆದ ಹಿಂಸಾಚಾರದಲ್ಲಿ ದುಷ್ಕರ್ಮಿಗಳ ಗುರಿ ನಾನೇ ಆಗಿದ್ದೆ ಎಂದು ಜೆಎನ್ ಯುಎಸ್ ಯು ಅಧ್ಯಕ್ಷೆ ಐಶೆ ಘೋಶ್ ಹೇಳಿದ್ದಾರೆ.

ಜೆಎನ್ ಯು ಕ್ಯಾಂಪಸ್ ನಲ್ಲಿ ನಡೆದ ಹಿಂಸಾಚಾರದಲ್ಲಿ ಜೆಎನ್ ಯುಎಸ್ ಯು ಅಧ್ಯಕ್ಷೆ ಐಶೆ ಘೋಶ್ ಹಾಗೂ ಉಪಾಧ್ಯಕ್ಷ ಸಾಕೇತ್ ಮೂನ್ ಸೇರಿದಂತೆ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಈ ಪೈಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಐಶೆ ಘೋಶ್ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ದುಷ್ಕರ್ಮಿಗಳು ನನ್ನನ್ನೇ ಟಾರ್ಗೆಟ್ ಮಾಡಿಕೊಂಡು ದಾಳಿ ನಡೆಸಿದ್ದಾರೆ. ಉದ್ದೇಶ ಪೂರ್ವಕವಾಗಿ ನಮ್ಮ ಮೇಲೆ ದಾಳಿಯಾಗಿದ್ದು, ಇದು ಪೂರ್ವ ನಿಯೋಜಿತ ದಾಳಿ ಎಂದು ಹೇಳಿದ್ದಾರೆ.

ಸುಮಾರು 20 ರಿಂದ 25 ಮಂದಿ ಮಾಸ್ಕ್ ಧರಿಸಿದ್ದ ಗೂಂಡಾಗಳು ಲಾಠಿ ದೊಣ್ಣೆಗಳನ್ನು ಹಿಡಿದು ನಮ್ಮ ಪೀಸ್ ಮಾರ್ಚ್ ಅನ್ನು ಹಾಳು ಗೆಡವಿದರು. ಈ ವೇಳೆ ನನ್ನ ತಲೆಗೆ ಬಲವಾದ ಪೆಟ್ಟು ಬಿತ್ತು ಎಂದು ಐಶೆ ಘೋಶ್ ಹೇಳಿದರು. 

ಮೂಲಗಳ ಪ್ರಕಾರ, 'ಇಡೀ ರಾಷ್ಟ್ರದಾದ್ಯಂತ ಇಂದು ಎಡಪಂಥದ ಚಳುವಳಿಯಲ್ಲಿ ತೊಡಗಿರುವವರು ದಾಳಿಗಳನ್ನು ಎದುರಿಸುತ್ತಾ ಭಯದ ವಾತಾವರಣದಲ್ಲಿ ಬದುಕುವ ಪರಿಸ್ಥಿತಿ ಎದುರಾಗಿದೆ. ಐಶೆ ಘೋಶ್ ಸಹ ಎಡಪಂಥ ಚಳುವಳಿಯಲ್ಲಿ ತೊಡಗಿಕೊಂಡಿದ್ದರು. ಇದಲ್ಲದೆ, ವಿಶ್ವವಿದ್ಯಾಲಯದ ಶುಲ್ಕ ಹೆಚ್ಚಳವನ್ನು ವಿರೋಧಿಸಿ ಪ್ರತಿಭಟಿಸಿದ್ದರು. ವಿದ್ಯಾರ್ಥಿಗಳ ಜೊತೆಗೆ ಸಂವಾದ ಏರ್ಪಡಿಸಿದ್ದರು ಇದೇ ಕಾರಣಕ್ಕೆ ಅವರ ಮೇಲೆ ದಾಳಿಯಾಗಿದೆ ಎಂದು ಜೆಎನ್ ಯುಎಸ್ ಯು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT