ಜೆಎನ್'ಯು ಹಿಂಸಾಚಾರ: ಬೀದಿಗಿಳಿದು ವಿದ್ಯಾರ್ಥಿಗಳ ಆಕ್ರೋಶ, ಮಹತ್ವದ ಸುಳಿವು ಸಂಗ್ರಹಿಸಿದ ಪೊಲೀಸರು 
ದೇಶ

ಜೆಎನ್'ಯು ಹಿಂಸಾಚಾರ: ಬೀದಿಗಿಳಿದು ವಿದ್ಯಾರ್ಥಿಗಳ ಆಕ್ರೋಶ, ಮಹತ್ವದ ಸುಳಿವು ಸಂಗ್ರಹಿಸಿದ ಪೊಲೀಸರು

ರಾಜಧಾನಿ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಲು ಹಾಗೂ ಅಧ್ಯಾಪಕರ ಮೇಲೆ ಮುಸುಕುಧಾರಿ ಅನಾಮಧೇಯ ಗೂಂಡಾಗಳು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ದಾಳಿಕೋರರ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ವರೆಗೆ ಯಾರೂ ಬಂಧನಕ್ಕೊಳಗಾಗಿಲ್ಲ. ಆದರೆ, ಪ್ರಕರಣ ಸಂಬಂಧ ಪೊಲೀಸರಿಗೆ ಮಹತ್ವದ ಸುಳಿವುಗಳು ಲಭ್ಯವಾಗಿವೆ ಎಂದು ಹೇಳಲಾಗುತ್ತಿದೆ.

ನವದೆಹಲಿ: ರಾಜಧಾನಿ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಲು ಹಾಗೂ ಅಧ್ಯಾಪಕರ ಮೇಲೆ ಮುಸುಕುಧಾರಿ ಅನಾಮಧೇಯ ಗೂಂಡಾಗಳು ನಡೆಸಿದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ದಾಳಿಕೋರರ ವಿರುದ್ದ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ವರೆಗೆ ಯಾರೂ ಬಂಧನಕ್ಕೊಳಗಾಗಿಲ್ಲ. ಆದರೆ, ಪ್ರಕರಣ ಸಂಬಂಧ ಪೊಲೀಸರಿಗೆ ಮಹತ್ವದ ಸುಳಿವುಗಳು ಲಭ್ಯವಾಗಿವೆ ಎಂದು ಹೇಳಲಾಗುತ್ತಿದೆ. 

ಪ್ರಸ್ತುತ ಪ್ರಕರಣದ ತನಿಖೆ ದೆಹಲಿ ಕ್ರೈಮ್ ಬ್ರಾಂಚ್'ಗೆ ಹಸ್ತಾಂತರಿಸಲಾಗಿದೆ. ಇನ್ನೊಂದೆಡೆ ಜೆಎನ್'ಯು ಹಿಂಸಾಚಾರದ ವಿರುದ್ಧ ದೇಶದಾದ್ಯಂತ ಆಕ್ರೋಷ ವ್ಯಕ್ತವಾಗಿದ್ದು, ರಾಜಕೀಯಕ ಪಕ್ಷಗಳು, ಜನತೆ ಹಾಗೂ ವಿದ್ಯಾರ್ಥಿಗಲು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. 

ದಾಳಿಕೋರರ ಬಂಧನವಾಗಬೇಕು, ಮತ್ತೆಂದೂ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕೆಂದು ಆಗ್ರಹಿಸುತ್ತಿದ್ದಾರೆ. 

ಈ ನಡುವೆ ಶಂಕಿತ ಮುಸುಕುಧಾರಿಗಳಿಂದ ತೀವ್ರ ಹಲ್ಲೆಗೆ ಒಳಗಾಗಿ ಗಾಯಗೊಂಡಿದ್ದ ವಿವಿ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಆಯಿಷಿ ಘೋಷ್ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, 20-25 ದಾಳಿಕೋರರು ಕಬ್ಬಿಣದ ಸರಳುಗಳಿಂದ ಹೊಡೆದರು. ನನ್ನನ್ನು ಅವರು ಬಡಿದು ಸಾಯಿಸಿಯೇ ಬಿಡುತ್ತಿದ್ದರು. ಬದುಕಿದ್ದೇ ಹೆಚ್ಚು ಎಂದು ಹೇಳಿದ್ದಾರೆ. 

ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ ಅಧಿಕಾರಿಗಳು ವಿಶ್ವವಿದ್ಯಾಲಯದ್ ಅಧಿಕಾರಿಗಳ ಜೊತಗೆ ಘಟನೆಯ ಮಾಹಿತಿ ಪಡೆದುಕೊಂಡರು. ಈ ವೇಲೆ ವಿವಿ ಕುಲಪತಿ ಜಗದೀಶ್ ಕುಮಾರ್ ಗೈರು ಹಾಜರಾಗಿದ್ದರು. ಜಗದೀಶ್ ಕುಮಾರ್ ವಜಾಕ್ಕೆ ಶಿಕ್ಷಕರ ಸಂಘ ಮತ್ತು ಜೆಎನ್'ಯುಎಸ್'ಯು ಆಗ್ರಹಿಸಿವೆ,

ಹಂಸಾಚಾರದ ಬಳಿಕ ಏಮ್ಸ್'ಗೆ ದಾಖಲಾಗಿದ್ದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿ 34 ಜನರನ್ನು ಬಿಡುಗಡೆ ಮಾಡಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT