ಜೈಶಂಕರ್ 
ದೇಶ

'ತುಕ್ಡೆ ತುಕ್ಡೆ ಗ್ಯಾಂಗ್' ಗಳನ್ನು ನಾವು ಎಂದೂ ನೋಡಿರಲಿಲ್ಲ: ಜೈಶಂಕರ್

ನಾವು ಓದುತ್ತಿದ್ದ ವೇಳೆ ದೆಹಲಿಯ ಪ್ರತಿಷ್ಠಿತ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ತುಕ್ಡೆ ತುಕ್ಡೆ ಗ್ಯಾಂಗ್​ಗಳು ಇರಲಿಲ್ಲ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ವಿವಿಯ ಇಂದಿನ ಪರಿಸ್ಥಿತಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ನವದೆಹಲಿ: ನಾವು ಓದುತ್ತಿದ್ದ ವೇಳೆ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ತುಕ್ಡೆ ತುಕ್ಡೆ ಗ್ಯಾಂಗ್​ಗಳು ಇರಲಿಲ್ಲ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ವಿವಿಯ ಇಂದಿನ ಪರಿಸ್ಥಿತಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಜೆಎನ್‌ಯುನಲ್ಲಿನ ಘಟನೆ ಕುರಿತು ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಿಮ್ಮ ಜೆಎನ್‌ಯು ಸಮಸ್ಯೆಗೆ ನಾನು ಏನು ಹೇಳಲು ಸಾಧ್ಯ. ನಿನ್ನೆಯೇ ನಿಮಗೆ ಸ್ಪಷ್ಟವಾಗಿ ಹೇಳಿದ್ದೇನೆ. ಜೆಎನ್‌ಯುನಲ್ಲಿ ನಾನು ವಿದ್ಯಾಭ್ಯಾಸ ಮಾಡುತ್ತಿದ್ದಾಗ ಅಲ್ಲಿ ನಾವು ಯಾವುದೇ ತುಕ್ಡೆ ತುಕ್ಡೆ ಗ್ಯಾಂಗ್‌ಗಳನ್ನು ನೋಡಿರಲಿಲ್ಲ ಎಂಬುದನ್ನು ಖಂಡಿತವಾಗಿ ನಿಮಗೆ ಹೇಳಬಲ್ಲೆ ಎಂದಿದ್ದಾರೆ. 

ಕ್ಯಾಂಪಸ್​ನಲ್ಲಿ ನಡೆದ ಹಿಂಸಾಚಾರ ಖಂಡನೀಯ. ಅದು ವಿಶ್ವವಿದ್ಯಾನಿಲಯದ ಸಂಪ್ರದಾಯವೂ ಅಲ್ಲ, ಸಂಸ್ಕೃತಿಯೂ ಅಲ್ಲ ಎಂದು ಆ ವಿವಿಯ ಹಳೆಯ ವಿದ್ಯಾರ್ಥಿ ಎಂಬ ನೆಲೆಯಲ್ಲಿ ಪ್ರತಿಕ್ರಿಯೆ ನೀಡಿ ಗಮನಸೆಳೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT