ದೇಶ

'ತುಕ್ಡೆ ತುಕ್ಡೆ ಗ್ಯಾಂಗ್' ಗಳನ್ನು ನಾವು ಎಂದೂ ನೋಡಿರಲಿಲ್ಲ: ಜೈಶಂಕರ್

Shilpa D

ನವದೆಹಲಿ: ನಾವು ಓದುತ್ತಿದ್ದ ವೇಳೆ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ತುಕ್ಡೆ ತುಕ್ಡೆ ಗ್ಯಾಂಗ್​ಗಳು ಇರಲಿಲ್ಲ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ವಿವಿಯ ಇಂದಿನ ಪರಿಸ್ಥಿತಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಜೆಎನ್‌ಯುನಲ್ಲಿನ ಘಟನೆ ಕುರಿತು ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಿಮ್ಮ ಜೆಎನ್‌ಯು ಸಮಸ್ಯೆಗೆ ನಾನು ಏನು ಹೇಳಲು ಸಾಧ್ಯ. ನಿನ್ನೆಯೇ ನಿಮಗೆ ಸ್ಪಷ್ಟವಾಗಿ ಹೇಳಿದ್ದೇನೆ. ಜೆಎನ್‌ಯುನಲ್ಲಿ ನಾನು ವಿದ್ಯಾಭ್ಯಾಸ ಮಾಡುತ್ತಿದ್ದಾಗ ಅಲ್ಲಿ ನಾವು ಯಾವುದೇ ತುಕ್ಡೆ ತುಕ್ಡೆ ಗ್ಯಾಂಗ್‌ಗಳನ್ನು ನೋಡಿರಲಿಲ್ಲ ಎಂಬುದನ್ನು ಖಂಡಿತವಾಗಿ ನಿಮಗೆ ಹೇಳಬಲ್ಲೆ ಎಂದಿದ್ದಾರೆ. 

ಕ್ಯಾಂಪಸ್​ನಲ್ಲಿ ನಡೆದ ಹಿಂಸಾಚಾರ ಖಂಡನೀಯ. ಅದು ವಿಶ್ವವಿದ್ಯಾನಿಲಯದ ಸಂಪ್ರದಾಯವೂ ಅಲ್ಲ, ಸಂಸ್ಕೃತಿಯೂ ಅಲ್ಲ ಎಂದು ಆ ವಿವಿಯ ಹಳೆಯ ವಿದ್ಯಾರ್ಥಿ ಎಂಬ ನೆಲೆಯಲ್ಲಿ ಪ್ರತಿಕ್ರಿಯೆ ನೀಡಿ ಗಮನಸೆಳೆದಿದ್ದಾರೆ.

SCROLL FOR NEXT