ಅಮಿತ್ ಶಾ 
ದೇಶ

ಭಾರತೀಯ ರಾಜಕಾರಣದ 3 'ಶಾಪಗಳನ್ನು ತೆಗೆದು ಹಾಕಿದ ಮೋದಿ ‘ಕರ್ಮಯೋಧ’: ಅಮಿತ್ ಶಾ

ಪ್ರಧಾನಿ ನರೇಂದ್ರ ಮೋದಿಯವರು ‘ಓಲೈಕೆ’, ಜಾತಿವಾದ ಮತ್ತು ಸ್ವಜನ ಪಕ್ಷಪಾತವೆಂಬ ಭಾರತೀಯ ರಾಜಕಾರಣದ ಮೂರು 'ಶಾಪಗಳನ್ನು' ತೆಗೆದುಹಾಕಿದ್ದಾರೆ ಅವರು ಕರ್ಮಯೋಧ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ‘ಓಲೈಕೆ’, ಜಾತಿವಾದ ಮತ್ತು ಸ್ವಜನ ಪಕ್ಷಪಾತವೆಂಬ ಭಾರತೀಯ ರಾಜಕಾರಣದ ಮೂರು 'ಶಾಪಗಳನ್ನು' ತೆಗೆದುಹಾಕಿದ್ದಾರೆ ಅವರು ಕರ್ಮಯೋಧ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಪ್ರಧಾನಮಂತ್ರಿಯವರ ಜೀವನ ಕುರಿತಾದ 'ಕರ್ಮಯೋಧ ಗ್ರಂಥ' ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಮೋದಿ ಜೀ ಅವರು 'ಕರ್ಮಯೋಧ' , ರಾಜಕಾರಣಿ, ಕಠಿಣ ಕಾರ್ಯದ ಮಾಸ್ಟರ್, ಸಮರ್ಥ ನಿರ್ವಾಹಕರು ಮತ್ತು ಕಾರ್ಯತತ್ಪರತೆಯಿಂದ ದೇಶ ಮುನ್ನಡೆಸುವ ಆದರ್ಶ ನಾಯಕ. ಈ ಎಲ್ಲ ಗುಣಗಳನ್ನು ಮೋದಿ ಅವರು ನಿರೂಪಿಸಿದ್ದಾರೆ ಎಂದು ಹೇಳಿದರು.

ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಭಾರತವು ಜಾಗತಿಕ ಮಟ್ಟದಲ್ಲಿ ಪ್ರಬಲ ರಾಷ್ಟ್ರವಾಗಿ ಹೊರಹೊಮ್ಮಿದ್ದು, ತನ್ನ ಮೇಲೆ ಆಕ್ರಮಣವನ್ನು ಸಹಿಸುವುದಿಲ್ಲ ಎಂದು ತನ್ನ ನಿಲುವನ್ನು ಸ್ಪಷ್ಟಪಡಿಸುತ್ತದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370, 35 ಎ ರದ್ಧತಿ, ಪೌರತ್ವ ತಿದ್ದುಪಡಿ ಕಾಯ್ದೆ 2019, ರಾಮ್ ಮಂದಿರ ಸಮಸ್ಯೆಯನ್ನು ಬಗೆಹರಿಸುವುದು, ಟ್ರಿಪಲ್ ತಲಾಖ್, ಸರ್ಜಿಕಲ್ ಸ್ಟ್ರೈಕ್  ಮತ್ತು ಬಾಲಕೋಟ್ ವೈಮಾನಿಕ ದಾಳಿ ಸೇರಿದಂತೆ ಧೈರ್ಯಶಾಲಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ಭಾರತ ಜಾಗತಿಕ ಶಕ್ತಿಯಾಗಿ ಹೊರಹೊಮ್ಮಿದೆ  ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT