ಅಮಿತ್ ಶಾ 
ದೇಶ

ಭಾರತೀಯ ರಾಜಕಾರಣದ 3 'ಶಾಪಗಳನ್ನು ತೆಗೆದು ಹಾಕಿದ ಮೋದಿ ‘ಕರ್ಮಯೋಧ’: ಅಮಿತ್ ಶಾ

ಪ್ರಧಾನಿ ನರೇಂದ್ರ ಮೋದಿಯವರು ‘ಓಲೈಕೆ’, ಜಾತಿವಾದ ಮತ್ತು ಸ್ವಜನ ಪಕ್ಷಪಾತವೆಂಬ ಭಾರತೀಯ ರಾಜಕಾರಣದ ಮೂರು 'ಶಾಪಗಳನ್ನು' ತೆಗೆದುಹಾಕಿದ್ದಾರೆ ಅವರು ಕರ್ಮಯೋಧ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ‘ಓಲೈಕೆ’, ಜಾತಿವಾದ ಮತ್ತು ಸ್ವಜನ ಪಕ್ಷಪಾತವೆಂಬ ಭಾರತೀಯ ರಾಜಕಾರಣದ ಮೂರು 'ಶಾಪಗಳನ್ನು' ತೆಗೆದುಹಾಕಿದ್ದಾರೆ ಅವರು ಕರ್ಮಯೋಧ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಪ್ರಧಾನಮಂತ್ರಿಯವರ ಜೀವನ ಕುರಿತಾದ 'ಕರ್ಮಯೋಧ ಗ್ರಂಥ' ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಮೋದಿ ಜೀ ಅವರು 'ಕರ್ಮಯೋಧ' , ರಾಜಕಾರಣಿ, ಕಠಿಣ ಕಾರ್ಯದ ಮಾಸ್ಟರ್, ಸಮರ್ಥ ನಿರ್ವಾಹಕರು ಮತ್ತು ಕಾರ್ಯತತ್ಪರತೆಯಿಂದ ದೇಶ ಮುನ್ನಡೆಸುವ ಆದರ್ಶ ನಾಯಕ. ಈ ಎಲ್ಲ ಗುಣಗಳನ್ನು ಮೋದಿ ಅವರು ನಿರೂಪಿಸಿದ್ದಾರೆ ಎಂದು ಹೇಳಿದರು.

ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಭಾರತವು ಜಾಗತಿಕ ಮಟ್ಟದಲ್ಲಿ ಪ್ರಬಲ ರಾಷ್ಟ್ರವಾಗಿ ಹೊರಹೊಮ್ಮಿದ್ದು, ತನ್ನ ಮೇಲೆ ಆಕ್ರಮಣವನ್ನು ಸಹಿಸುವುದಿಲ್ಲ ಎಂದು ತನ್ನ ನಿಲುವನ್ನು ಸ್ಪಷ್ಟಪಡಿಸುತ್ತದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370, 35 ಎ ರದ್ಧತಿ, ಪೌರತ್ವ ತಿದ್ದುಪಡಿ ಕಾಯ್ದೆ 2019, ರಾಮ್ ಮಂದಿರ ಸಮಸ್ಯೆಯನ್ನು ಬಗೆಹರಿಸುವುದು, ಟ್ರಿಪಲ್ ತಲಾಖ್, ಸರ್ಜಿಕಲ್ ಸ್ಟ್ರೈಕ್  ಮತ್ತು ಬಾಲಕೋಟ್ ವೈಮಾನಿಕ ದಾಳಿ ಸೇರಿದಂತೆ ಧೈರ್ಯಶಾಲಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ಭಾರತ ಜಾಗತಿಕ ಶಕ್ತಿಯಾಗಿ ಹೊರಹೊಮ್ಮಿದೆ  ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT