ಸಂಗ್ರಹ ಚಿತ್ರ 
ದೇಶ

ಜೆಎನ್ ಯು ಹಿಂಸಾಚಾರ: ವಿದ್ಯಾರ್ಥಿಗಳು, ಪ್ರಾಧ್ಯಾಪಕರಿಂದ 11 ದೂರು ದಾಖಲು

ಪ್ರತಿಷ್ಠಿತ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ನಡೆದಿದ್ದ ಹಿಂಸಾಚಾರ ಘಟನೆಗೆ ಸಂಬಂಧಿಸಿದಂತೆ ಇದೀಗ ವಿದ್ಯಾರ್ಥಿಗಳು ಮತ್ತು ಅಲ್ಲಿನ ಪ್ರಾಧ್ಯಾಪಕರ ಸರಣಿ ದೂರುಗಳನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.

ನವದೆಹಲಿ: ಪ್ರತಿಷ್ಠಿತ ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ನಡೆದಿದ್ದ ಹಿಂಸಾಚಾರ ಘಟನೆಗೆ ಸಂಬಂಧಿಸಿದಂತೆ ಇದೀಗ ವಿದ್ಯಾರ್ಥಿಗಳು ಮತ್ತು ಅಲ್ಲಿನ ಪ್ರಾಧ್ಯಾಪಕರ ಸರಣಿ ದೂರುಗಳನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.

ಭಾನುವಾರ ನಡೆದ ಹಿಂಸಾಚಾರ ಘಟನೆಯಲ್ಲಿ ಹಲ್ಲೆಗೊಳಗಾಗಿದ್ದ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರು ಪೊಲೀಸರಿಗೆ ಒಟ್ಟು 11 ದೂರುಗಳನ್ನು ನೀಡಿದ್ದು, ಈ ಎಲ್ಲ ದೂರುಗಳನ್ನು ಪ್ರಕರಣಗ ತನಿಖೆ ನಡೆಸುತ್ತಿರುವ ದೆಹಲಿ ಕ್ರೈ ಬ್ರ್ಯಾಂಚ್ (ಅಪರಾಧ ದಳ) ರವಾನೆ ಮಾಡಲಾಗಿದೆ ಎಂದು ನೈಋತ್ಯ ದೆಹಲಿ ವಿಭಾಗದ ದೇವೇಂದರ್ ಅಯ್ಯರ್ ಹೇಳಿದ್ದಾರೆ.

ಇದೇ ವೇಳೆ ಜೆಎನ್ ಯು ಭದ್ರತೆ ಕುರಿತು ಮಾತನಾಡಿದ ಅವರು, ಈಗಲೇ ಜೆಎನ್ ಯು ಕ್ಯಾಂಪಸ್ ನಲ್ಲಿ ಪೊಲೀಸ್ ಭದ್ರತೆ ಮುಂದುವರೆದಿದೆ. ಸಮವಸ್ಕ್ರಧಾರಿ ಪೊಲೀಸರೊಂದಿಗೆ ಮಫ್ತಿಯಲ್ಲಿರುವ ಪೊಲೀಸರು ಕೂಡ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ ಸಮವಸ್ತ್ರಧಾರಿ ಪೊಲೀಸರು ಕ್ಯಾಂಪಸ್ ಆವರಣದ ಹೊರಗೆ ಮಾತ್ರ ಇದ್ದಾರೆ. ಪ್ರಕರಣದ ತನಿಖೆ ಚಾಲ್ತಿಯಲ್ಲಿದ್ದು, ಜೆಎನ್ ಯು ಕ್ಯಾಂಪಸ್ ನಲ್ಲಿಯೇ ಮಫ್ತಿಯಲ್ಲಿ ಅಧಿಕಾರಿಗಳು ತನಿಖೆ ನಡೆಸಿ ಅಗತ್ಯ ಸಾಕ್ಷ್ಯಾಧಾರಗಳನ್ನು ಕಲೆ ಹಾಕುತ್ತಿದ್ದಾರೆ. ಅಲ್ಲದೆ ಸಾರ್ವಜನಿಕರ ಬಳಿ ಇರುವ ವಿಡಿಯೋಗಳನ್ನು ಷೇರ್ ಮಾಡುವಂತೆ ಕೋರಲಾಗಿದೆ. ಇದರಿಂದ ನಿಜವಾದ ಅಪರಾಧಿಗಳ ಗುರುತಿಸಲು ನೆರವಾಗುತ್ತದೆ ಎಂದು ದೇವೇಂದರ್ ಅಯ್ಯರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT