ಪ್ರಕಾಶ್ ಜಾವಡೇಕರ್ 
ದೇಶ

ಶೀಘ್ರದಲ್ಲೇ ಜೆಎನ್‌ಯುನಲ್ಲಿ ಹಿಂಸಾಚಾರ ನಡೆಸಿದ ಮುಸುಕುಧಾರಿಗಳ ಮುಸುಕು ಅನಾವರಣ: ಪ್ರಕಾಶ್ ಜಾವಡೇಕರ್

ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್ ಯು)ನಲ್ಲಿ ಹಿಂಸಾಚಾರವನ್ನು ಖಂಡಿಸಿರುವ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರು, ಹಿಂಸಾಚಾರ ನಡೆಸಿದ ಮುಸುಕುಧಾರಿಗಳ ಮುಸುಕು ಕಳಚಲಾಗುವುದು ಎಂದು ಹೇಳಿದ್ದಾರೆ.

ನವದೆಹಲಿ: ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್ ಯು)ನಲ್ಲಿ ಹಿಂಸಾಚಾರವನ್ನು ಖಂಡಿಸಿರುವ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರು, ಹಿಂಸಾಚಾರ ನಡೆಸಿದ ಮುಸುಕುಧಾರಿಗಳ ಮುಸುಕು ಕಳಚಲಾಗುವುದು ಎಂದು ಹೇಳಿದ್ದಾರೆ.

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ವಿವರಿಸಿದ ಅವರು, ಪೊಲೀಸರು ವಿಶ್ವವಿದ್ಯಾಲಯದಲ್ಲಿನ ಹಿಂಸಾಚಾರ ಕುರಿತು ತನಿಖೆ ನಡೆಸುತ್ತಿದ್ದಾರೆ. ಹಿಂಸಾಚಾರದಲ್ಲಿ ಭಾಗಿಯಾದವರನ್ನು ಬಯಲಿಗೆಳೆಯಲಾಗುವುದು ಎಂದು ಹೇಳಿದ್ದಾರೆ. 
ದೇಶದ ಯಾವುದೇ ಭಾಗದಲ್ಲಿ ಹಿಂಸಾಚಾರ ನಡೆದರೂ ಅದು ಖಂಡನೀಯ. ಹಿಂಸಾಚಾರಕ್ಕೆ ಜಾಗವಿಲ್ಲ. ವ್ಯಾಸಂಗಕ್ಕಾಗಿ ವಿದ್ಯಾರ್ಥಿಗಳು ಹೋಗುವ ಶಿಕ್ಷಣಸಂಸ್ಥೆಗಳಲ್ಲಿ ಇಂತಹ ಘಟನೆಗಳು ನಡೆಯಲೇಬಾರದು ಎಂದು ಅವರು ಹೇಳಿದ್ದಾರೆ.

ಜೆಎನ್ ಯುನಲ್ಲಿ ಪ್ರತಿಭಟನೆ ನಡೆಸುತ್ತಿದ್ದವರಿಗೆ ಬೆಂಬಲ ಸೂಚಿಸಲು ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಮಂಗಳವಾರ ಸಂಜೆ ವಿಶ್ವವಿದ್ಯಾಲಯದ ಕ್ಯಾಂಪಸ್ ಗೆ ತೆರಳಿದ್ದ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಜಾಸತ್ತಾತ್ಮಕ ದೇಶದಲ್ಲಿ ಯಾರು ಎಲ್ಲಿಗೆ ಬೇಕಾದರೂ ಹೋಗಬಹುದು. ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬಹುದು ಎಂದು ಹೇಳಿದ್ದಾರೆ. 

ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರ ಕುರಿತು ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ.  ದಾಳಿಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳ ಪರವಾಗಿ ಎಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿವೆ.  

ಹಿಂಸಾಚಾರದಲ್ಲಿ ಕೆಲ ಪ್ರಾದ್ಯಾಪಕರು ಸೇರಿದಂತೆ 30 ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಭಾನುವಾರ ಸಂಜೆ ಮುಸುಕು ಧರಿಸಿದ್ದ ದುಷ್ಕರ್ಮಿಗಳು ಯೋಜಿತ ರೀತಿಯಲ್ಲಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ಹಾಸ್ಟೆಲ್ ಗಳಲ್ಲಿದ್ದ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

SCROLL FOR NEXT